AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day Parade 73ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಏನೇನಿದೆ? 10 ಪ್ರಮುಖ ಸಂಗತಿಗಳು

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಗೌರವ ವಂದನೆಯೊಂದಿಗೆ ಮೆರವಣಿಗೆ ಆರಂಭವಾಯಿತು. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಸೇರಿದಂತೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಗಳ ವಿಜೇತರು ತಂಡವನ್ನು ಮುನ್ನಡೆಸಿದರು.

Republic Day Parade 73ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಏನೇನಿದೆ? 10 ಪ್ರಮುಖ ಸಂಗತಿಗಳು
ಗಣರಾಜ್ಯೋತ್ಸವ ಪರೇಡ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 26, 2022 | 11:37 AM

Share

ದೆಹಲಿ: ಭಾರತವು ಇಂದು ತನ್ನ 73ನೇ ಗಣರಾಜ್ಯೋತ್ಸವವನ್ನು(73rd Republic Day) ದೆಹಲಿಯ ರಾಜ್‌ಪಥ್‌ನಲ್ಲಿ ವಾರ್ಷಿಕ ಪರೇಡ್‌ನೊಂದಿಗೆ ತನ್ನ ಸೇನಾ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸುತ್ತದೆ. 75 ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಫ್ಲೈಪಾಸ್ಟ್ ಈ ವರ್ಷದ ಮೆರವಣಿಗೆಯ ಪ್ರಮುಖ ಅಂಶವಾಗಿದೆ. ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ ಮಾಡುವ ಮೂಲಕ ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ, “ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಈ ವರ್ಷದ ಆಚರಣೆಗಳು ಮಹತ್ವದ್ದಾಗಿದೆ ಏಕೆಂದರೆ ಇದು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವಾಗಿದ್ದು, ದೇಶಾದ್ಯಂತ ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂದು ಆಚರಿಸಲಾಗುತ್ತದೆ. ಈ ವರ್ಷದ ಸಂಭ್ರಮಾಚರಣೆಯಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್‌ನ ‘ಶಹೀಂದೋ ಕೋ ಶತ್ ಶತ್ ನಮನ್’ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯ ಮೂಲಕ ಆಯ್ಕೆಯಾದ ಸುಮಾರು 480 ನೃತ್ಯಗಾರರು ಮೆರವಣಿಗೆಯಲ್ಲಿ ಪ್ರದರ್ಶನ ನೀಡುತ್ತಾರೆ. ರಾಜ್‌ಪಥ್‌ನಲ್ಲಿ ನಡೆಯುವ ಪರೇಡ್‌ನಲ್ಲಿ ಭಾಗವಹಿಸಲು ಎರಡು-ಲಸಿಕೆ ಪಡೆದ ವಯಸ್ಕರು ಮತ್ತು 15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಒಂದು-ಡೋಸ್ ಲಸಿಕೆ ಪಡೆದಿದ್ದರೆ  ಮಾತ್ರ ಅನುಮತಿಸಲಾಗುತ್ತದೆ. ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಯಾವುದೇ ವಿದೇಶಿ ಗಣ್ಯರು ಇರುವುದಿಲ್ಲ.

ರಾಜ್‌ಪಥ್‌ನಲ್ಲಿ ಬೆಳಿಗ್ಗೆ 10:30 ಕ್ಕೆ ಮೆರವಣಿಗೆ ಪ್ರಾರಂಭವಾಯಿತು, ಉತ್ತಮ ಗೋಚರತೆಗಾಗಿ ಸಾಮಾನ್ಯಕ್ಕಿಂತ ಅರ್ಧ-ಗಂಟೆ ತಡವಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಭಾರತದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಗೌರವ ವಂದನೆಯೊಂದಿಗೆ ಮೆರವಣಿಗೆ ಆರಂಭವಾಯಿತು. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಸೇರಿದಂತೆ ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಗಳ ವಿಜೇತರು ತಂಡವನ್ನು ಮುನ್ನಡೆಸಿದರು.

ಪರೇಡ್‌ನಲ್ಲಿ ಭಾರತೀಯ ಸೇನೆಯಿಂದ ಆರು ಕವಾಯತು ತುಕಡಿಗಳು, 96 ಯುವ ನಾವಿಕರು ಮತ್ತು ನೌಕಾ ತುಕಡಿಯ ನಾಲ್ವರು ಅಧಿಕಾರಿಗಳು ಮತ್ತು 96 ಏರ್‌ಮೆನ್‌ಗಳು ಮತ್ತು ವಾಯುಪಡೆಯ ನಾಲ್ವರು ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಲೈವ್ ಈವೆಂಟ್ ಅನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಲು MyGov ಪೋರ್ಟಲ್‌ನಲ್ಲಿ ನೋಂದಾಯಿಸಲು ಜನರನ್ನು ಕೇಳಲಾಗಿದೆ. ಅವರು ಜನಪ್ರಿಯ ಆಯ್ಕೆಯ ವಿಭಾಗದಲ್ಲಿ ಅತ್ಯುತ್ತಮ ಮೆರವಣಿಗೆಯ ತಂಡ ಮತ್ತು ಟ್ಯಾಬ್ಲೋಗೆ ಮತ ಹಾಕಲು ಸಾಧ್ಯವಾಗುತ್ತದೆ.

ಜನವರಿ 29 ರಂದು ವಿಜಯ್ ಚೌಕ್‌ನಲ್ಲಿ ನಡೆಯುವ ‘ಬೀಟಿಂಗ್ ರಿಟ್ರೀಟ್’ ಸಮಾರಂಭಕ್ಕಾಗಿ, 1,000 ದೇಶೀಯವಾಗಿ ತಯಾರಿಸಿದ ಡ್ರೋನ್‌ಗಳೊಂದಿಗೆ ಡ್ರೋನ್ ಪ್ರದರ್ಶನವನ್ನು ಯೋಜಿಸಲಾಗಿದೆ.

ಇದನ್ನೂ ಓದಿ: Republic Day 2022: ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ- ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಭಾಷಣ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್