India-China Border Clash: ಇಂದು ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಮಹತ್ವದ ಸಭೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆಯ ಬಗ್ಗೆ ಮೂರು ಸೇನಾ ಮುಖ್ಯಸ್ಥರ ಜೊತೆಗೆ ಚರ್ಚೆ ನಡೆಸಲಿದ್ದಾರೆ. 

India-China Border Clash: ಇಂದು ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಮಹತ್ವದ ಸಭೆ
Rajnath Singh
Updated By: ಅಕ್ಷಯ್​ ಪಲ್ಲಮಜಲು​​

Updated on: Dec 13, 2022 | 10:32 AM

ದೆಹಲಿ: ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆಯ ಬಿಸಿ ಕೇಂದ್ರ ಸರ್ಕಾರ ಎದುರಿಸುತ್ತಿದೆ. ಇದೀಗ ಮುಂದಿನ ಹಂತದ ಬಗ್ಗೆ ಚರ್ಚಿಸಲು ಮಿಲಿಟರಿ ನಾಯಕತ್ವದ ಸಭೆಯನ್ನು ಇಂದು ಕರೆದಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಸೇನೆಯ ಮೂರು ಪಡೆಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ.

ಇದನ್ನು ಓದಿ; ಗಡಿ ಒಪ್ಪಂದ ಉಲ್ಲಂಘನೆಗೆ ಚೀನಾ ಸೂಕ್ತ ವಿವರಣೆ ನೀಡಿಲ್ಲ; ಕೇಂದ್ರ ಸಚಿವ ಜೈಶಂಕರ್

ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಗಿರಿಧರ್ ಅರಮನೆ ಕೂಡ ಉಪಸ್ಥಿತರಿರುವರು.

Published On - 10:24 am, Tue, 13 December 22