AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ

ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:42 PM

Share

ದೆಹಲಿ: ಉತ್ತರ ಸಿಕ್ಕಿಂನ ನಾಥುಲಾ ಗಡಿಭಾಗದಲ್ಲಿ ಭಾರತದ ಭೂ ಭಾಗ ಅತಿಕ್ರಮಿಸಲು ಯತ್ನಿಸಿದ ಚೀನಾ ಸೈನಿಕರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ. ಭಾರತದ ಸೈನಿಕರ ಪ್ರತಿರೋಧದಿಂದ ಚೀನಾ ಸೈನಿಕರು ಹಿಂದೆ ಸರಿದಿದ್ದಾರೆ.

ಈ ಸಂದರ್ಭದಲ್ಲಿ ಎರಡು ಸೇನೆಗಳ ಮಧ್ಯೆ ಘರ್ಷಣೆ ಉಂಟಾಗಿದೆ. 20 ಜನ ಚೀನಾ ಸೈನಿಕರು ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ವರು ಭಾರತೀಯ ಯೋಧರು ಸಣ್ಣಪುಟ್ಟ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಪ್ರತಿಕೂಲ ಹವಾಮಾನದ ಮಧ್ಯೆಯೂ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಸಫಲವಾಗಿದೆ.

ಸದ್ಯ, ಘರ್ಷಣೆ ನಡೆದ ಸಿಕ್ಕಿಂ ಪ್ರದೇಶ ಪ್ರಕ್ಷುಬ್ದವಾಗಿದ್ದರೂ ಸ್ಥಿರವಾಗಿದೆ ಎಂದು ಮಾಹಿತಿ ಲಭಿಸಿದೆ. ಸಿಕ್ಕಿಂನ ಕಠಿಣ ಹವಾಮಾನ ಪರಿಸ್ಥಿತಿಯ ನಡುವೆ ಭಾರತೀಯ ಯೋಧರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷದ ಜೂನ್ 15ರಂದು, ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಭಾಗದಲ್ಲಿ ಚೀನಾ-ಭಾರತ ಸೈನಿಕರ ನಡುವೆ ನಡೆದ ಮುಖಾಮುಖಿಯ ಬಳಿಕ ಇದೀಗ ಈ ಘಟನೆ ಸಂಭವಿಸಿದೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

Published On - 11:39 am, Mon, 25 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ