AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ

ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 8:42 PM

Share

ದೆಹಲಿ: ಉತ್ತರ ಸಿಕ್ಕಿಂನ ನಾಥುಲಾ ಗಡಿಭಾಗದಲ್ಲಿ ಭಾರತದ ಭೂ ಭಾಗ ಅತಿಕ್ರಮಿಸಲು ಯತ್ನಿಸಿದ ಚೀನಾ ಸೈನಿಕರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ. ಭಾರತದ ಸೈನಿಕರ ಪ್ರತಿರೋಧದಿಂದ ಚೀನಾ ಸೈನಿಕರು ಹಿಂದೆ ಸರಿದಿದ್ದಾರೆ.

ಈ ಸಂದರ್ಭದಲ್ಲಿ ಎರಡು ಸೇನೆಗಳ ಮಧ್ಯೆ ಘರ್ಷಣೆ ಉಂಟಾಗಿದೆ. 20 ಜನ ಚೀನಾ ಸೈನಿಕರು ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ವರು ಭಾರತೀಯ ಯೋಧರು ಸಣ್ಣಪುಟ್ಟ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಪ್ರತಿಕೂಲ ಹವಾಮಾನದ ಮಧ್ಯೆಯೂ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಸಫಲವಾಗಿದೆ.

ಸದ್ಯ, ಘರ್ಷಣೆ ನಡೆದ ಸಿಕ್ಕಿಂ ಪ್ರದೇಶ ಪ್ರಕ್ಷುಬ್ದವಾಗಿದ್ದರೂ ಸ್ಥಿರವಾಗಿದೆ ಎಂದು ಮಾಹಿತಿ ಲಭಿಸಿದೆ. ಸಿಕ್ಕಿಂನ ಕಠಿಣ ಹವಾಮಾನ ಪರಿಸ್ಥಿತಿಯ ನಡುವೆ ಭಾರತೀಯ ಯೋಧರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷದ ಜೂನ್ 15ರಂದು, ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಭಾಗದಲ್ಲಿ ಚೀನಾ-ಭಾರತ ಸೈನಿಕರ ನಡುವೆ ನಡೆದ ಮುಖಾಮುಖಿಯ ಬಳಿಕ ಇದೀಗ ಈ ಘಟನೆ ಸಂಭವಿಸಿದೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

Published On - 11:39 am, Mon, 25 January 21

ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ