AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ

ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:42 PM

Share

ದೆಹಲಿ: ಉತ್ತರ ಸಿಕ್ಕಿಂನ ನಾಥುಲಾ ಗಡಿಭಾಗದಲ್ಲಿ ಭಾರತದ ಭೂ ಭಾಗ ಅತಿಕ್ರಮಿಸಲು ಯತ್ನಿಸಿದ ಚೀನಾ ಸೈನಿಕರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಕಳೆದವಾರ ಚೀನಾ ಸೈನಿಕರು ಅಕ್ರಮವಾಗಿ ಗಡಿದಾಟುವ ಪ್ರಯತ್ನ ಮಾಡಿದ್ದರು. ಆದರೆ, ಭಾರತೀಯ ಸೇನೆ ಈ ದುಷ್ಕೃತ್ಯವನ್ನು ಸಮರ್ಥವಾಗಿ ಎದುರಿಸಿದೆ. ಚೀನಾ ಸೈನಿಕರನ್ನು ಭಾರತದ ಯೋಧರು ಹಿಮ್ಮೆಟ್ಟಿಸಿದ್ದಾರೆ. ಭಾರತದ ಸೈನಿಕರ ಪ್ರತಿರೋಧದಿಂದ ಚೀನಾ ಸೈನಿಕರು ಹಿಂದೆ ಸರಿದಿದ್ದಾರೆ.

ಈ ಸಂದರ್ಭದಲ್ಲಿ ಎರಡು ಸೇನೆಗಳ ಮಧ್ಯೆ ಘರ್ಷಣೆ ಉಂಟಾಗಿದೆ. 20 ಜನ ಚೀನಾ ಸೈನಿಕರು ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ವರು ಭಾರತೀಯ ಯೋಧರು ಸಣ್ಣಪುಟ್ಟ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಪ್ರತಿಕೂಲ ಹವಾಮಾನದ ಮಧ್ಯೆಯೂ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಸಫಲವಾಗಿದೆ.

ಸದ್ಯ, ಘರ್ಷಣೆ ನಡೆದ ಸಿಕ್ಕಿಂ ಪ್ರದೇಶ ಪ್ರಕ್ಷುಬ್ದವಾಗಿದ್ದರೂ ಸ್ಥಿರವಾಗಿದೆ ಎಂದು ಮಾಹಿತಿ ಲಭಿಸಿದೆ. ಸಿಕ್ಕಿಂನ ಕಠಿಣ ಹವಾಮಾನ ಪರಿಸ್ಥಿತಿಯ ನಡುವೆ ಭಾರತೀಯ ಯೋಧರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷದ ಜೂನ್ 15ರಂದು, ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಭಾಗದಲ್ಲಿ ಚೀನಾ-ಭಾರತ ಸೈನಿಕರ ನಡುವೆ ನಡೆದ ಮುಖಾಮುಖಿಯ ಬಳಿಕ ಇದೀಗ ಈ ಘಟನೆ ಸಂಭವಿಸಿದೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

Published On - 11:39 am, Mon, 25 January 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು