AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ತಿಯಾ ಗುರುದ್ವಾರ ಮೇಲಿನ ಸಿಖ್ ಧಾರ್ಮಿಕ ಧ್ವಜ ತಾಲಿಬಾನಿಗಳು ಕಿತ್ತುಹಾಕಿದ್ದನ್ನು ಉಗ್ರವಾಗಿ ಖಂಡಿಸಿದ ಭಾರತ

ಸಿಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ಅವರು ಈ ಗುರುದ್ವಾರಕ್ಕೆ ಒಮ್ಮೆ ಭೇಟಿ ನೀಡಿದ್ದರಿಂದ ಸಿಖ್ ಸಮುದಾಯ ಅದನ್ನು ಪವಿತ್ರ ಎಂದು ಪರಿಗಣಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಪೋಸ್ಟ್ ಆ ಗುರುದ್ವಾರದ ಇಮೇಜುಗಳಲ್ಲಿ ಧ್ವಜ ಕಾಣಿಸುತ್ತಿಲ್ಲ.

ಪಕ್ತಿಯಾ ಗುರುದ್ವಾರ ಮೇಲಿನ ಸಿಖ್ ಧಾರ್ಮಿಕ ಧ್ವಜ ತಾಲಿಬಾನಿಗಳು ಕಿತ್ತುಹಾಕಿದ್ದನ್ನು ಉಗ್ರವಾಗಿ ಖಂಡಿಸಿದ ಭಾರತ
ಸಿಖ್ ಧಾರ್ಮಿಕ ಧ್ವಜವನ್ನು ತಾಲಿಬಾನಿಗಳು ಕಿತ್ತುಹಾಕಿದ್ದಾರೆ
TV9 Web
| Edited By: |

Updated on:Aug 07, 2021 | 1:43 AM

Share

ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯದ ಪಕ್ತಿಯಾಲ್ಲಿನ ಗುರುದ್ವಾರವೊಂದರ ಮಾಳಿಗೆ ಮೇಲಿದ್ದ ಸಿಖ್ ಧಾರ್ಮಿಕ ಧ್ವಜವನ್ನು ತಾಲಿಬಾನ್ ಶುಕ್ರವಾರ ತೆಗೆದುಹಾಕಿರುವುದನ್ನು ಭಾರತ ಖಂಡಿಸಿದೆ. ಸದರಿ ಪ್ರಾಂತ್ಯದಲ್ಲಿ ಆಫ್ಘನ್ ಭದ್ರತಾ ದಳ ಮತ್ತು ತಾಲಿಬಾನಿಳ ನಡುವೆ ಕಳೆದ ಕೆಲವು ವಾರಗಳಿಂದ ಹೋರಾಟ ಜಾರಿಯಲ್ಲಿದೆ. ಅಫ್ಘಾನಿಸ್ತಾನದಿಂದ ಲಭ್ಯವಾಗಿರುವ ವರದಿಗಳ ಪ್ರಕಾರ ಪಕ್ತಿಯಾ ಪ್ರಾವಿನ್ಸ್ನ ಚಮ್ಕಾನಿ ಎಂಬ ಪ್ರದೇಶದಲ್ಲಿರುವ ಗುರುದ್ವಾರ ತಾಲಾ ಸಾಹಿಬ್ ಮಂದಿರದ ಮೇಲಿದ್ದ ನಿಶಾನ್ ಸಾಹಿಬ್ (ಪವಿತ್ರ ಧ್ವಜ) ಅನ್ನು ತಾಲಿಬಾನಿಗಳು ಮಂದಿರದ ಪಾಲಕರಿಗೆ ಬಲವಂತ ಮಾಡಿ ತೆಗೆಸಿದ್ದಾರೆ

ಸಿಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ಅವರು ಈ ಗುರುದ್ವಾರಕ್ಕೆ ಒಮ್ಮೆ ಭೇಟಿ ನೀಡಿದ್ದರಿಂದ ಸಿಖ್ ಸಮುದಾಯ ಅದನ್ನು ಪವಿತ್ರ ಎಂದು ಪರಿಗಣಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಪೋಸ್ಟ್ ಆ ಗುರುದ್ವಾರದ ಇಮೇಜುಗಳಲ್ಲಿ ಧ್ವಜ ಕಾಣಿಸುತ್ತಿಲ್ಲ.

‘ಗುರುದ್ವಾರ ತಾಲಾ ಸಾಹಿಬ್ ಮಾಳಿಗೆ ಮೇಲಿಂದ ನಿಶಾನ್ ಸಾಹಿಬ್ ತೆಗೆದುಹಾಕಿರುವುದನ್ನು ನಾವು ಮಾಧ್ಯಮ ವರದಿಗಳ ಮೂಲಕ ತಿಳಿದುಕೊಂಡಿದ್ದೇವೆ. ಭಾರತ ಇದನ್ನು ಉಗ್ರವಾಗಿ ಖಂಡಿಸುತ್ತದೆ ಮತ್ತು ಎಲ್ಲ ಸಮುದಾಯಗಳನ್ನು ಜೊತೆಗೂಡಿಸಿಕೊಂಡು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಯುವುದು ಅಫ್ಘಾನಿಸ್ತಾನದ ಭವಿಷ್ಯದ ಉದ್ದೇಶವಾಗಿರಬೇಕು, ಎಂದು ಈ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಮತ್ತು ಹೆಸರು ಹೇಳಿಕೊಳ್ಳಲಿಚ್ಛಿಸದ ವ್ಯಕ್ತಿಯೊಬ್ಬರು ಹೇಳಿದರು.

ಕಳೆದ ವರ್ಷ ಜೂನ್ನಲ್ಲಿ ಅಫ್ಘಾನಿಸ್ತಾನದ ಹಿಂದೂ ಮತ್ತು ಸಿಖ್ ಅಲ್ಪಸಂಖ್ಯಾತರ ನಾಯಕರಾಗಿರುವ ನಿದಾನ ಸಿಂಗ್ ಸಚದೇವ ಅವರನ್ನು ತಾಲಿಬಾನಿಗಳು ಇದೇ ಗುರುದ್ವಾರದಿಂದ ಅಪಹರಿಸಿದ್ದರು. ಅಫ್ಘನ್ ಸರ್ಕಾರ ಮತ್ತು ಸಮುದಾಯದ ನಾಯಕರ ಪ್ರಯತ್ನಗಳ ಮೂಲಕ ಸಚದೇವ ಅವರನ್ನು ಬಿಡುಗಡೆ ಮಾಡಿಸಿಕೊಳ್ಳಲಾಗಿತ್ತು.

ಅದಕ್ಕೆ ಮೊದಲು ಕಾಬೂಲ್ನ ಪ್ರಾರ್ಥಾನಾ ಮಂದಿರವೊಂದರ ಮೇಲೆ ನಡೆದ ಉಗ್ರರ ದಾಳಿಯೊಂದರಲ್ಲಿ ಸಿಖ್ ಸಮುದಾಯದ 30 ಜನರು ಮರಣ ಹೊಂದಿದ್ದರು. ಅ ದಾಳಿ ತಾನಿ ನಡೆಸಿದ್ದು ಅಂತ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೊಂಡಿತ್ತು. ಆದರೆ ಅದನ್ನು ಅಲ್ಲಗಳೆದ ಭಾರತದ ಅಧಿಕಾರಿಗಳು ಆ ಕೃತ್ಯದ ಹಿಂದೆ ಹಕ್ಕಾನಿ ನೆಟ್ವರ್ಕ್ ಮತ್ತು ಲಷ್ಕರ್-ಎ-ತೈಬಾ ಕೈವಾಡವಿದೆ ಎಂದು ಹೇಳಿದ್ದರು.

ಅಮೆರಿಕ ಮತ್ತು ನ್ಯಾಟೋ ಪಡೆಗಳು ಅಫ್ಘಾನಿಸ್ತಾನದಿಂದ ವಾಪಸ್ಸು ಹೋದ ನಂತರ ಅಫ್ಘಾನಿಸ್ತಾನ ಮತ್ತು ತಾಲಿಬಾನ ನಡುವೆ ಕಾದಾಟ ಆರಂಭವಾಗಿದೆ.

ಇದನ್ನೂ ಓದಿ: ತಾಲಿಬಾನಿಗಳಿಗೆ ಕುಮ್ಮಕ್ಕು ನೀಡುವುದು ನಿಲ್ಲಿಸಿ, ದೇವರು ತನಗೆ ಮಾತ್ರ ಸೇರಿದ್ದೆಂಬ ಧೋರಣೆ ಬಿಡುವಂತೆ ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದ ಎಚ್ಚರಿಕೆ

Published On - 1:42 am, Sat, 7 August 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ