AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UN Women ಗೆ 500,000 ಯುಎಸ್​ ಡಾಲರ್ ನೀಡಿದ ಭಾರತ; ಟಿ.ಎಸ್​.ತಿರುಮೂರ್ತಿಯವರಿಂದ ಟ್ವೀಟ್​

ಯುಎನ್​ ವುಮೆನ್​ ವಿಭಾಗಕ್ಕೆ ಭಾರತ ತನ್ನ ಕೈಲಾದಷ್ಟು ಕೊಡುಗೆ ನೀಡಿದ್ದಕ್ಕೆ ಸೀಮಾ ಬಹೋಸ್​ ಧನ್ಯವಾದ ಸಲ್ಲಿಸಿದ್ದಾರೆ. ಹಾಗೇ,ಯುಎನ್​ ವುಮೆನ್​ಗೆ ಭಾರತದ ಸಹಕಾರ ಅನಿವಾರ್ಯ ಮತ್ತು ಅತ್ಯವಶ್ಯವಾದದ್ದು ಎಂದೂ ಹೇಳಿದ್ದಾರೆ.

UN Women ಗೆ 500,000 ಯುಎಸ್​ ಡಾಲರ್ ನೀಡಿದ ಭಾರತ; ಟಿ.ಎಸ್​.ತಿರುಮೂರ್ತಿಯವರಿಂದ ಟ್ವೀಟ್​
ಯುಎನ್​ ವುಮೆನ್​ಗೆ ಕೊಡುಗೆ ನೀಡಿದ ಭಾರತ
TV9 Web
| Edited By: |

Updated on: Apr 02, 2022 | 1:27 PM

Share

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಇರುವ ವಿಶ್ವಸಂಸ್ಥೆಯ ಘಟಕ ಯುಎನ್​ ವುಮೆನ್​ (UN Women) ಗೆ ಭಾರತ 500,000 ಯುಎಸ್​ ಡಾಲರ್​ (3 ಕೋಟಿ ರೂಪಾಯಿಗೂ ಹೆಚ್ಚು)ಗಳನ್ನು ನೀಡಿದೆ.  ವಿಶ್ವ ಸಂಸ್ಥೆಯ (United Nations) ಭಾರತದ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸ್ತ್ರೀ ನೇತೃತ್ವದ ಅಭಿವೃದ್ಧಿ ಮತ್ತು ಲಿಂಗ ಸಮಾನತೆಯಲ್ಲಿ ಭಾರತ ಸದಾ ಸಹಭಾಗಿಯಾಗಿದೆ. ಮಹಿಳಾ ಸಬಲೀಕರಣ ಧ್ಯೇಯ ಹೊಂದಿರುವ UN Women ಘಟಕದೊಟ್ಟಿಗೆ ಸಂಬಂಧವನ್ನು ವೃದ್ಧಿ ಮಾಡಿಕೊಳ್ಳಲು ನಾವು ಇನ್ನೂ ಹೆಚ್ಚಿನ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.  ಹಾಗೇ, ಯುಎನ್​ ವುಮೆನ್​ಗೆ 500,000 ಯುಎಸ್​ ಡಾಲರ್​ಗಳಷ್ಟನ್ನು ನೀಡಲು ತುಂಬ ಖುಷಿಯಾಗುತ್ತಿದೆ. ಈ ಹಣವನ್ನು ಯುಎನ್​ ವುಮೆನ್​ನ ಕಾರ್ಯನಿರ್ವಾಹಕ ನಿರ್ದೇಶಕರಾದ ಸೀಮಾ ಬಹೋಸ್​​ರಿಗೆ ಹಸ್ತಾಂತರ ಮಾಡಲು ತುಂಬ ಖುಷಿಯಾಗುತ್ತಿದೆ ಎಂದೂ ತಿರುಮೂರ್ತಿ ಹೇಳಿದ್ದಾರೆ.

ಯುಎನ್​ ವುಮೆನ್​ ವಿಭಾಗಕ್ಕೆ ಭಾರತ ತನ್ನ ಕೈಲಾದಷ್ಟು ಕೊಡುಗೆ ನೀಡಿದ್ದಕ್ಕೆ ಸೀಮಾ ಬಹೋಸ್​ ಧನ್ಯವಾದ ಸಲ್ಲಿಸಿದ್ದಾರೆ. ಹಾಗೇ,ಯುಎನ್​ ವುಮೆನ್​ಗೆ ಭಾರತದ ಸಹಕಾರ ಅನಿವಾರ್ಯ ಮತ್ತು ಅತ್ಯವಶ್ಯವಾದದ್ದು ಎಂದೂ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸೀಮಾ, ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ಟಿ.ಎಸ್​.ತಿರುಮೂರ್ತಿಯವರೊಂದಿಗೆ ಮಹತ್ವಪೂರ್ಣ ಚರ್ಚೆ ನಡೆಸಲಾಯಿತು.  ಜಾಗತಿಕವಾಗಿ ಮಹಿಳೆಯರು ಮತ್ತು ಎಲ್ಲ ವರ್ಗದ ಹೆಣ್ಣುಮಕ್ಕಳ ಹಕ್ಕು ರಕ್ಷಣೆಗಾಗಿ ಈ ಯುಎನ್​ ವುಮೆನ್​ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಭಾರತದ ಸಹಕಾರ ಎಂದಿಗೂ ಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಟ್ಟಿಗೆಗೆ ನುಗ್ಗಿ, ಜನರನ್ನ ಹೆದರಿಸಿ 30 ಕುರಿ ಹೊತ್ತೊಯ್ದ ಕಳ್ಳರು; ಕುರಿಗಳನ್ನು ಕಳೆದುಕೊಂಡ ಕುರಿಗಾಹಿ ಕಣ್ಣೀರು

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ