AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ
ಕೊರೊನಾವೈರಸ್Image Credit source: NDTV
TV9 Web
| Edited By: |

Updated on: Jun 24, 2022 | 10:13 AM

Share

ನವದೆಹಲಿ: ಭಾರತದಲ್ಲಿ ಕೊವಿಡ್ ಕೇಸುಗಳ (Covid Cases) ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇಂದು (ಶುಕ್ರವಾರ) 17,336 ಹೊಸ ಕೊವಿಡ್ (Coronavirus) ಸೋಂಕು ಪ್ರಕರಣ ದಾಖಲಾಗಿದೆ. ಈ ಮೂಲಕ ಕಳೆದ 4 ತಿಂಗಳಲ್ಲೇ ಅತಿ ಹೆಚ್ಚು ಕೊವಿಡ್ -19 ಪ್ರಕರಣಗಳ ಜಿಗಿತವನ್ನು ಕಂಡಿದೆ. ಇದೀಗ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 5,218 ಹೊಸ ಕೊರೋನವೈರಸ್ ಸೋಂಕುಗಳು ವರದಿಯಾಗಿತ್ತು. ಹಿಂದಿನ ದಿನದ ಪ್ರಕರಣಗಳಿಗೆ ಹೋಲಿಸಿದರೆ ಕೊರೊನಾವೈರಸ್ ಕೇಸುಗಳ ಸಂಖ್ಯೆ ಶೇ. 60ರಷ್ಟು ಏರಿಕೆಯಾಗಿದೆ. ಮುಂಬೈ ಒಂದರಲ್ಲೇ ಅತಿ ಹೆಚ್ಚು 4,166 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13 ಹೊಸ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,954ಕ್ಕೆ ತಲುಪಿದೆ.

ಇದನ್ನೂ ಓದಿ: Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!

ರಾಷ್ಟ್ರೀಯ COVID-19 ಚೇತರಿಕೆ ದರವು ಶೇ. 98.60ರಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,294 ಹೆಚ್ಚಾಗಿದೆ. ದೈನಂದಿನ ಪಾಸಿಟಿವ್ ದರವು ಶೇ. 3.94 ಮತ್ತು ವಾರದ ಪಾಸಿಟಿವ್ ದರವು ಶೇ. 2.90ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಗುರುವಾರ ಕರ್ನಾಟಕದಲ್ಲಿ 858 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದ್ದು, ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳು ಕ್ರಮವಾಗಿ 40,072ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ 682 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ತಲುಪಿದೆ.

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ