AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ
ಕೊರೊನಾವೈರಸ್Image Credit source: NDTV
TV9 Web
| Edited By: |

Updated on: Jun 24, 2022 | 10:13 AM

Share

ನವದೆಹಲಿ: ಭಾರತದಲ್ಲಿ ಕೊವಿಡ್ ಕೇಸುಗಳ (Covid Cases) ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಇಂದು (ಶುಕ್ರವಾರ) 17,336 ಹೊಸ ಕೊವಿಡ್ (Coronavirus) ಸೋಂಕು ಪ್ರಕರಣ ದಾಖಲಾಗಿದೆ. ಈ ಮೂಲಕ ಕಳೆದ 4 ತಿಂಗಳಲ್ಲೇ ಅತಿ ಹೆಚ್ಚು ಕೊವಿಡ್ -19 ಪ್ರಕರಣಗಳ ಜಿಗಿತವನ್ನು ಕಂಡಿದೆ. ಇದೀಗ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 5,218 ಹೊಸ ಕೊರೋನವೈರಸ್ ಸೋಂಕುಗಳು ವರದಿಯಾಗಿತ್ತು. ಹಿಂದಿನ ದಿನದ ಪ್ರಕರಣಗಳಿಗೆ ಹೋಲಿಸಿದರೆ ಕೊರೊನಾವೈರಸ್ ಕೇಸುಗಳ ಸಂಖ್ಯೆ ಶೇ. 60ರಷ್ಟು ಏರಿಕೆಯಾಗಿದೆ. ಮುಂಬೈ ಒಂದರಲ್ಲೇ ಅತಿ ಹೆಚ್ಚು 4,166 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 17,336 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,33,62,294ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13 ಹೊಸ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,954ಕ್ಕೆ ತಲುಪಿದೆ.

ಇದನ್ನೂ ಓದಿ: Virat Kohli Covid-19: ಮಾಲ್ಡೀವ್ಸ್​ಗೆ ತೆರಳಿದ್ದ ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್..!

ರಾಷ್ಟ್ರೀಯ COVID-19 ಚೇತರಿಕೆ ದರವು ಶೇ. 98.60ರಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,294 ಹೆಚ್ಚಾಗಿದೆ. ದೈನಂದಿನ ಪಾಸಿಟಿವ್ ದರವು ಶೇ. 3.94 ಮತ್ತು ವಾರದ ಪಾಸಿಟಿವ್ ದರವು ಶೇ. 2.90ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಗುರುವಾರ ಕರ್ನಾಟಕದಲ್ಲಿ 858 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದ್ದು, ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳು ಕ್ರಮವಾಗಿ 40,072ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ 682 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ತಲುಪಿದೆ.

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು