Covid Rules: ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, 3 ರಾಜ್ಯಗಳಲ್ಲಿ ಕೋವಿಡ್ ನಿಯಮಗಳು ಜಾರಿ

ದೇಶದಲ್ಲಿ ದಿನೇ ದಿನೆ ಕೊರೊನಾ(Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರು ರಾಜ್ಯಗಳಲ್ಲಿ ಮತ್ತೆ ಕೋವಿಡ್​ ನಿಯಮ(Covid Rules) ಗಳನ್ನು ಜಾರಿಗೊಳಿಸಲಾಗಿದೆ.

Covid Rules: ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು, 3 ರಾಜ್ಯಗಳಲ್ಲಿ ಕೋವಿಡ್ ನಿಯಮಗಳು ಜಾರಿ
ಕೊರೊನಾImage Credit source: India Today
Follow us
|

Updated on: Apr 09, 2023 | 10:10 AM

ದೇಶದಲ್ಲಿ ದಿನೇ ದಿನೆ ಕೊರೊನಾ(Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರು ರಾಜ್ಯಗಳಲ್ಲಿ ಮತ್ತೆ ಕೋವಿಡ್​ ನಿಯಮ(Covid Rules) ಗಳನ್ನು ಜಾರಿಗೊಳಿಸಲಾಗಿದೆ. ಈ ಮೂರು ರಾಜ್ಯಗಳಲ್ಲಿ ಮಾಸ್ಕ್(Mask)​ ಧರಿಸುವುದು ಕಡ್ಡಾಯಗೊಳಿಸಲಾಗಿದ್ದು, ಇತರೆ ಎಚ್ಚರಿಕೆವಹಿಸುವಂತೆ ತಿಳಿಸಲಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪರಿಶೀಲನಾ ಸಭೆಯನ್ನು ನಡೆಸಿದರು ಮತ್ತು ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು ಜಾಗರೂಕರಾಗಿರಲು ರಾಜ್ಯಗಳ ಬಳಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳ ತುರ್ತು ಸಿದ್ಧತೆಯನ್ನು ಗಮನಿಸಲು ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಅಣಕು ಡ್ರಿಲ್ ಯೋಜಿಸಲಾಗಿದೆ. ಇತ್ತೀಚಿನ ಸೋಂಕುಗಳ ಉಲ್ಬಣವನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವರು ಭರವಸೆ ನೀಡಿದರು. ಐಸಿಯು ಹಾಸಿಗೆಗಳು, ಆಮ್ಲಜನಕ ಪೂರೈಕೆ ಮತ್ತು ಇತರ ನಿರ್ಣಾಯಕ ಆರೈಕೆ ವ್ಯವಸ್ಥೆಗಳು ಜಾರಿಯಲ್ಲಿವೆ  ಎಂದು ಅವರು ಹೇಳಿದರು.

ಕೋವಿಡ್ ಸಾಂಕ್ರಾಮಿಕದ ನಾಲ್ಕನೇ ವೇವ್ ಬಗ್ಗೆ ಆರೋಗ್ಯ ಸಚಿವರು ಎಚ್ಚರಿಕೆವಹಿಸುವ ಅಗತ್ಯವಿದೆ.

ಮತ್ತಷ್ಟು ಓದಿ: Covid in India: ದೇಶದಲ್ಲಿ ಒಂದೇ ದಿನ 2,994 ಕೋವಿಡ್ ಪ್ರಕರಣ ದಾಖಲು; ರಾಜ್ಯಗಳು ಕೈಗೊಂಡಿರುವ ಕ್ರಮಗಳೇನು?

ಹರ್ಯಾಣ:

ಹರ್ಯಾಣ ಸರ್ಕಾರವು ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸುವುದನ್ನು ಕಡ್ಡಾಯಗೊಳಿಸಿದೆ. ರಾಜ್ಯದ ಆರೋಗ್ಯ ಇಲಾಖೆಯುಕೋವಿಡ್ ಸೂಕ್ತ ನಡವಳಿಯನ್ನು ಅಳವಡಿಸಿಕೊಳ್ಳುವಂತೆ ಸಾರ್ವಜನಿಕರನ್ನು ಒತ್ತಾಯಿಸಿದೆ.

ಕೇರಳ ಗರ್ಭಿಣಿಯರು, ವೃದ್ಧರು ಹಾಗೆಯೇ ಅನೇಕ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕೆಂದು ಕೇರಳ ಆರೋಗ್ಯ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಉತ್ತನ ಮಟ್ಟದ ಸಭೆ ನಡೆಸಿ ನಂತರ ಕೋವಿಡ್ ಸಂಬಂಧಿತ ಸಾವುಗಳು 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹಾಗೂ ಮಧುಮೇಹ ಇನ್ನಿತರೆ ಕಾಯಿಲೆಗಳಿರುವಲ್ಲಿ ಹೆಚ್ಚು ಎಂದು ಸಚಿವೆ ವೀಣಾ ಜಾರ್ಜ್​ ತಿಳಿಸಿದ್ದಾರೆ.

ಪುದುಚೇರಿ ಪುದುಚೇರಿ ಆಡಳಿತವು ತಕ್ಷಣವೇ ಜಾರಿಗೆ ಬರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಆಸ್ಪತ್ರೆ , ಹೋಟೆಲ್​ಗಳು, ರೆಸ್ಟೋರೆಂಟ್​ಗಳು, ಮದ್ಯದ ಅಂಗಡಿಗಳು, ಆತಿಥ್ಯ ಮತ್ತು ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 5,357 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 32 ಸಾವಿರಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ