AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ; ಹೆಮ್ಮೆಯ ಕ್ಷಣವೆಂದ ಪ್ರಧಾನಿ ಮೋದಿ

ಭಾರತ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ತಲುಪಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕಲ್ಲಿದ್ದಲು ಸಚಿವಾಲಯವನ್ನು ಅಭಿನಂದಿಸಿದ್ದಾರೆ. ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯಾಗಿರುವುದು ದೇಶಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ ಎಂದು ಮೋದಿ ಬಣ್ಣಿಸಿದ್ದಾರೆ. 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಮೈಲಿಗಲ್ಲನ್ನು ದಾಟುವುದು ಗಮನಾರ್ಹ ಸಾಧನೆಯಾಗಿದೆ. ಇದು ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ನಮ್ಮ ಬದ್ಧತೆಯನ್ನು ಎತ್ತಿ ತೋರಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ; ಹೆಮ್ಮೆಯ ಕ್ಷಣವೆಂದ ಪ್ರಧಾನಿ ಮೋದಿ
Coal Mining
ಸುಷ್ಮಾ ಚಕ್ರೆ
|

Updated on: Mar 21, 2025 | 6:41 PM

Share

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ ಇಂದು 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ಸಾಧಿಸಿದ್ದಕ್ಕಾಗಿ ಕಲ್ಲಿದ್ದಲು ಸಚಿವಾಲಯವನ್ನು ಅಭಿನಂದಿಸಿದ್ದಾರೆ. ಎಕ್ಸ್​ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಈ ಸಾಧನೆಯು “ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ಗಮನಾರ್ಹ ಬದ್ಧತೆಯನ್ನು” ಸೂಚಿಸುತ್ತದೆ. ಇದು “ಭಾರತಕ್ಕೆ ಹೆಮ್ಮೆಯ ಕ್ಷಣ” ಎಂದು ಕರೆದಿದ್ದಾರೆ. ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು ಎಕ್ಸ್​ ನಲ್ಲಿ ಮೈಲಿಗಲ್ಲನ್ನು ಹಂಚಿಕೊಂಡಿದ್ದರು. ಭಾರತ ಈ ಮಹತ್ವದ ಉತ್ಪಾದನಾ ಮಟ್ಟವನ್ನು ತಲುಪಿದೆ ಎಂದಿದ್ದರು.

“ಭಾರತವು 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ದಾಟಿದೆ! ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ದಕ್ಷ ವಿಧಾನಗಳೊಂದಿಗೆ, ನಾವು ಉತ್ಪಾದನೆಯನ್ನು ಹೆಚ್ಚಿಸಿದ್ದೇವೆ. ಇಷ್ಟು ಮಾತ್ರವಲ್ಲದೆ ಸುಸ್ಥಿರ ಮತ್ತು ಜವಾಬ್ದಾರಿಯುತ ಗಣಿಗಾರಿಕೆಯನ್ನು ನಡೆಸುತ್ತಿದ್ದೇವೆ. ಈ ಸಾಧನೆಯು ದೇಶದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸಲು, ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲು ಮತ್ತು ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರತಿಯೊಬ್ಬ ಭಾರತೀಯನ ಉಜ್ವಲ ಭವಿಷ್ಯಕ್ಕೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ” ಎಂದು ಕಿಶನ್ ರೆಡ್ಡಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು.

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಬಿಲ್ ಗೇಟ್ಸ್; ಭಾರತದ ಅಭಿವೃದ್ಧಿಯ ಪ್ರಗತಿಗೆ ಶ್ಲಾಘನೆ

ಇದಕ್ಕೆ ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಾಧನೆಯು ಕಲ್ಲಿದ್ದಲು ವಲಯಕ್ಕೆ ಸಂಬಂಧಿಸಿದ ಎಲ್ಲರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದಿರುವ ಮೋದಿ, ಇದೊಂದು ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಕೇಂದ್ರ ಸರ್ಕಾರವು 2025-26ರ ಹಣಕಾಸು ವರ್ಷಕ್ಕೆ ವಿದ್ಯುತ್ ವಲಯಕ್ಕೆ 906.1 ಮಿಲಿಯನ್ ಟನ್ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿತ್ತು. ಮುಂದಿನ ಹಣಕಾಸು ವರ್ಷಕ್ಕೆ ಕಲ್ಲಿದ್ದಲು ಅವಶ್ಯಕತೆಗಳ ಕುರಿತು ವಿದ್ಯುತ್ ಸಚಿವಾಲಯದಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ಕಲ್ಲಿದ್ದಲು ಸಚಿವಾಲಯವು ಈ ಯೋಜನೆಯನ್ನು ಸಂಸತ್ತಿನಲ್ಲಿ ಮಂಡಿಸಿತು. ಕೇಂದ್ರ ವಿದ್ಯುತ್ ಪ್ರಾಧಿಕಾರ (ಸಿಇಎ) ಪ್ರಕಾರ, ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳು 53.49 ಮೆಟ್ರಿಕ್ ಟನ್ ದಾಸ್ತಾನು ಹೊಂದಿದ್ದು, 2024 ರಲ್ಲಿ ಅದೇ ದಿನ ದಾಖಲಾದ 44.51 ಮೆಟ್ರಿಕ್ ಟನ್ ಕಲ್ಲಿದ್ದಲು ಉತ್ಪಾದನೆಗಿಂತ 20.2% ಹೆಚ್ಚಳವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ