Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ದೇಶದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಿಕೆ ಪೂರ್ಣ; ಇದು ಭಾರತೀಯರ ಸಾಮರ್ಥ್ಯದ ಸಂಕೇತ ಎಂದ ಪ್ರಧಾನಿ ಮೋದಿ

India Completes 150 Cr Vaccination: ಭಾರತವು 150 ಕೋಟಿ ಡೋಸ್ ಲಸಿಕೆ ನೀಡಿ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ. ಈ ಕುರಿತು ಪ್ರಧಾನಿ ಮಾಹಿತಿ ನೀಡಿ ಸಂತಸ ವ್ಯಕ್ತಪಡಿಸಿದ್ದು, ಇದು ಭಾರತದ ಸಾಮರ್ಥ್ಯದ ಸಂಕೇತ ಎಂದು ಶ್ಲಾಘಿಸಿದ್ದಾರೆ.

PM Modi: ದೇಶದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಿಕೆ ಪೂರ್ಣ; ಇದು ಭಾರತೀಯರ ಸಾಮರ್ಥ್ಯದ ಸಂಕೇತ ಎಂದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: shivaprasad.hs

Updated on:Jan 07, 2022 | 2:50 PM

ಹೊಸದಿಲ್ಲಿ: ಭಾರತವು ಇಂದು (ಶುಕ್ರವಾರ) 150 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ನುಡಿದಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ (Kolkata) ಚಿತ್ತರಂಜನ್ ನ್ಯಾಷನಲ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (ಸಿಎನ್​ಸಿಐ- CNCI) ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಪ್ರಧಾನಿ ಮಾತನಾಡಿದರು. 15-18 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಪ್ರಮಾಣವನ್ನು ಪ್ರಾರಂಭಿಸುವ ಮೂಲಕ 2022 ಅನ್ನು ಉನ್ನತ ಮಟ್ಟದಲ್ಲಿ ಪ್ರಾರಂಭಿಸಿದ್ದೇವೆ. 5 ದಿನಗಳಲ್ಲಿ, 1.5 ಕೋಟಿಗೂ ಹೆಚ್ಚು ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಭಾರತದ ವಯಸ್ಕ ಜನಸಂಖ್ಯೆಯ 90 ಪ್ರತಿಶತಕ್ಕೂ ಹೆಚ್ಚು ಜನರು ಈಗಾಗಲೇ ಕೋವಿಡ್ ಲಸಿಕೆಯ (Covid Vaccination) ಮೊದಲ ಡೋಸ್ ಪಡೆದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

‘‘ಅಂಕಿಅಂಶಗಳ ದೃಷ್ಟಿಯಿಂದ ಇದು ಒಂದು ದೊಡ್ಡ ಸಂಖ್ಯೆ. ಇದು ಪ್ರಪಂಚದ ಹೆಚ್ಚಿನ ದೊಡ್ಡ ದೇಶಗಳನ್ನೂ ಚಕಿತಗೊಳಿಸುತ್ತದೆ ಎಂದರೆ ತಪ್ಪಿಲ್ಲ. ಆದರೆ ಇದು ಭಾರತದ 130 ಕೋಟಿ ನಾಗರಿಕರ ಸಾಮರ್ಥ್ಯದ ಸಂಕೇತವಾಗಿದೆ. ಇದು ವಿಶ್ವಾಸ ಮತ್ತು ಸ್ವಾವಲಂಬನೆಯ ಸಂಕೇತ’’ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯಿಂದ ಲಸಿಕೆಯವರೆಗೆ ಭಾರತವು ರಚಿಸಿದ ಮೂಲಸೌಕರ್ಯವು ಕೊವಿಡ್ ವಿರುದ್ಧ ಹೋರಾಡುವ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ‘‘ಸುರಕ್ಷಿತ ಭವಿಷ್ಯಕ್ಕಾಗಿ ಶ್ರೀಮಂತರು ಮತ್ತು ಬಡವರು ಎಂಬ ಭೇದವಿಲ್ಲದೇ ಆರೋಗ್ಯ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ದಣಿವರಿಯದೆ ಕೆಲಸ ಮಾಡುತ್ತಿದ್ದೇವೆ’’ ಎಂದು ಪ್ರಧಾನಮಂತ್ರಿ ಇದೇ ವೇಳೆ ನುಡಿದರು.

ಏತನ್ಮಧ್ಯೆ, PM-JAY ಯೋಜನೆಯ ಅಡಿಯಲ್ಲಿ, 2.6 ಕೋಟಿಗೂ ಹೆಚ್ಚು ಕ್ಯಾನ್ಸರ್ ರೋಗಿಗಳು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಬಂಗಾಳದಲ್ಲಿ 5000 ಕ್ಕೂ ಹೆಚ್ಚು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಪ್ರಸ್ತಾಪಿಸಿದ ಪ್ರಧಾನಿ, ಸುಮಾರು 11 ಕೋಟಿ ಕೊವಿಡ್ ಲಸಿಕೆಗಳನ್ನು ಕೇಂದ್ರವು ರಾಜ್ಯಕ್ಕೆ ಉಚಿತವಾಗಿ ಒದಗಿಸಿದೆ ಎಂದರು. ರಾಜ್ಯಕ್ಕೆ 1500 ಕ್ಕೂ ಹೆಚ್ಚು ವೆಂಟಿಲೇಟರ್‌ಗಳು ಮತ್ತು 9000 ಕ್ಕೂ ಹೆಚ್ಚು ಹೊಸ ಆಮ್ಲಜನಕ ಸಿಲಿಂಡರ್‌ಗಳನ್ನು ಸಹ ನೀಡಲಾಗಿದೆ. 49 ಪಿಎಸ್‌ಎ ಹೊಸ ಆಮ್ಲಜನಕ ಘಟಕಗಳು ಸಹ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ ಎಂದು ಇದೇ ವೇಳೆ ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ:

ಕೊಲ್ಕತ್ತಾದಲ್ಲಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನ ಎರಡನೇ ಕ್ಯಾಂಪಸ್ ಉದ್ಘಾಟಿಸಿದ ಮೋದಿ

R Ashok: ಸಚಿವ ಆರ್​ ಅಶೋಕ್​ಗೆ ಕೊರೊನಾ ಪಾಸಿಟಿವ್; ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 2:42 pm, Fri, 7 January 22

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ