AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಿಕ್ಕಟ್ಟು: ಜರ್ಮನಿಯಿಂದ 23 ಆಮ್ಲಜನಕ ಉತ್ಪಾದನಾ ಘಟಕಗಳ ಏರ್​ಲಿಫ್ಟ್​ಗೆ ಮುಂದಾದ ಭಾರತ

ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ದೇಶದಲ್ಲಿ ಕೊವಿಡ್-19 ಸೋಂಕು ಸೃಷ್ಟಿಸಿರುವ ತಲ್ಲಣದ ಹಿನ್ನೆಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲು ಮೂರು ಸೇನಾ ಪಡೆಗಳಿಗೆ ಮತ್ತು ಇತರ ರಕ್ಷಣಾ ಸಂಸ್ಥೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ನೀಡಿದ 4 ದಿನಗಳ ನಂತರ ಅವರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ.

ಕೊವಿಡ್ ಬಿಕ್ಕಟ್ಟು: ಜರ್ಮನಿಯಿಂದ 23 ಆಮ್ಲಜನಕ ಉತ್ಪಾದನಾ ಘಟಕಗಳ ಏರ್​ಲಿಫ್ಟ್​ಗೆ ಮುಂದಾದ ಭಾರತ
ಆಕ್ಸಿಜನ್ ಟ್ಯಾಂಕರ್​ಗಳನ್ನು ಏರ್​ಲಿಫ್ಟ್ ಮಾಡಲು ಭಾರತೀಯ ವಾಯುಪಡೆಯ ನೆರವು ಪಡೆಯಲಾಗಿದೆ.
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Apr 23, 2021 | 9:52 PM

Share

ನವದೆಹಲಿ: ವೈದ್ಯಕೀಯ ಬಳಕೆಯ ಆಮ್ಲಜನಕ (ಮೆಡಿಕಲ್ ಆಕ್ಸಿಜನ್) ತೀವ್ರ ಅಭಾವ ದೇಶದಲ್ಲಿ ತಲೆದೋರಿರುವುದರಿಂದ, ಜರ್ಮನಿಯಿಂದ 23 ಆಮ್ಲಜನಕ ಉತ್ಪದನಾ ಘಟಕಗಳನ್ನು ವಿಮಾನಗಳ ಮೂಲಕ ಭಾರತಕ್ಕೆ ಏರ್​ಲಿಫ್ಟ್ ಮಾಡುವ ನಿರ್ಧಾರವನ್ನು ಭಾರತದ ರಕ್ಷಣಾ ಸಚಿವಾಲಯ ತೆಗೆದುಕೊಂಡಿರುವುದು ಅಧಿಕೃತ ಮೂಲಗಳಿಂದ ಗೊತ್ತಾಗಿದೆ. ಈ ಘಟಕಗಳು ಪ್ರತಿ ನಿಮಿಷಕ್ಕೆ 40 ಲೀಟರ್ ಮತ್ತು ಪ್ರತಿ ಗಂಟೆಗೆ 2,400 ಲೀಟರ್​ನಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ. ಜರ್ಮನಿಯಿಂದ ಸ್ಥಳಾಂತರಗೊಳ್ಳುವ ಆಮ್ಲಜನಕ ಘಟಕಗಳನ್ನು ಕೊವಿಡ್​-19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆ ಆಸ್ಪತ್ರೆಗಳಲ್ಲಿ (ಎಎಫ್​ಎಮ್​ಎಸ್​) ನಿಯೋಜಿಸಲಾಗುವುದೆಂದು ರಕ್ಷಣಾ ಇಲಾಖೆಯ ಪ್ರಧಾನ ಭಾತ್ಮೀದಾರ ಎ.ಭರತ್ ಭೂಷಣ ಬಾಬು ಹೇಳಿದರು.

ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ದೇಶದಲ್ಲಿ ಕೊವಿಡ್-19 ಸೋಂಕು ಸೃಷ್ಟಿಸಿರುವ ತಲ್ಲಣದ ಹಿನ್ನೆಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲು ಮೂರು ಸೇನಾ ಪಡೆಗಳಿಗೆ ಮತ್ತು ಇತರ ರಕ್ಷಣಾ ಸಂಸ್ಥೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ನೀಡಿದ 4 ದಿನಗಳ ನಂತರ  ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ.

‘ಜರ್ಮನಿಯಿಂದ 23 ಸಂಚಾರಿ ಆಕ್ಸಿಜನ್ ಉತ್ಪಾದನೆ ಘಟಕಗಳನ್ನು ವಿಮಾನಗಳ ಮೂಲಕ ಭಾರತಕ್ಕೆ ತರಲಾಗುವುದು. ಅವುಗಳನ್ನು ಕೊವಿಡ್-19 ಸೋಂಕಿತರಿಗೆ ಚಿಕಿತ್ಸೆ ಒದಗಿಸುತ್ತಿರುವ ಎಎಫ್​ಎಮ್​ಎಸ್​ ಆಸ್ಪತ್ರೆಗಳಲ್ಲಿ ನಿಯೋಜಿಸಲಾಗುವುದು ಎಂದು ಬಾಬು ಹೇಳಿದರು. ಒಂದು ವಾರದ ಅವಧಿಯಲ್ಲಿ ಘಟಕಗಳು ಭಾರತಕ್ಕೆ ಬರಲಿವೆ’ ಎಂದು ಬಾಬು ಹೇಳಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಾಡಿದ ಮತ್ತೊಬ್ಬ ಅಧಿಕಾರಿಯು, ಆಮ್ಲಜನಕ ಘಟಕಗಳನ್ನು ಜರ್ಮನಿಯಿಂದ ತರಲು ಭಾರತೀಯ ವಾಯುದಳದ ವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದ್ದು ಕಾಗದ ಪತ್ರಗಳ ಕೆಲಸ ಮುಗಿದ ಕೂಡಲೇ ವಿಮಾನಗಳು ಜರ್ಮನಿಗೆ ಹಾರಲಿವೆ ಎಂದು ಹೇಳಿದರು. ಜರ್ಮನಿಯಲ್ಲದೆ ಬೇರೆ ದೇಶಗಳಿಂದಲೂ ಆಮ್ಲಜನಕ ಘಟಕಗಳನ್ನು ತರುವ ಯೋಜನೆ ಇದೆಯೆಂದು ಅವರು ಹೇಳಿದರು.

ಈ ಘಟಕಗಳು ಅನುಕೂಲಕರವಾಗಿದ್ದು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ಕೊಂಡೊಯ್ಯಬಹುದು, ಎಂದು ಬಾಬು ಹೇಳಿದರು. ಕೊರೊನಾ ವೈರಸ್​ನ ಎರಡನೇ ಅಲೆಯಿಂದ ಭಾರತ ತಲ್ಲಣಗೊಂಡಿದೆ. ದೇಶದಾದ್ಯಂತ ಅನೇಕ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಲಿಂಡರ್​ಗಳ ತೀವ್ರ ಅಭಾವ ತಲೆದೋರಿದೆ. ಸೋಂಕಿತರಿಗೆ ಬೆಡ್​ ಸಹ ಸಿಗದಂಥ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಶುಕ್ರವಾರ ದೊರಕಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 3.32 ಲಕ್ಷ ಹೊಸ ಕೊರೊನಾ ವೈರಸ್​ ಪ್ರಕರಣಗಳು ದಾಖಲಾಗಿದ್ದು 2,263 ಜನರನ್ನು ಮಹಾಮಾರಿ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

ಇದನ್ನೂ ಓದಿ: Explainer: ಕೊವಿಡ್ ಚಿಕಿತ್ಸೆಗಾಗಿ ಸ್ಟೆಪ್ ಡೌನ್ ಆಸ್ಪತ್ರೆ; ಯಾರು ಕೊಡ್ತಾರೆ ಚಿಕಿತ್ಸೆ? ಎಷ್ಟಿರುತ್ತೆ ದರ? ದಾಖಲಾಗುವುದು ಹೇಗೆ?

Published On - 8:43 pm, Fri, 23 April 21

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ