AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ- ಉಕ್ರೇನ್ ಸಂಘರ್ಷ ಬಗ್ಗೆ ಕಳವಳ, ರಾಜತಾಂತ್ರಿಕತೆಗೆ ಮರಳಲು ಕರೆ ನೀಡಿದ ಭಾರತ

"ಮೂಲಸೌಕರ್ಯ ಮತ್ತು ನಾಗರಿಕರ ಸಾವು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ" ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾ- ಉಕ್ರೇನ್ ಸಂಘರ್ಷ ಬಗ್ಗೆ ಕಳವಳ, ರಾಜತಾಂತ್ರಿಕತೆಗೆ ಮರಳಲು ಕರೆ ನೀಡಿದ ಭಾರತ
TV9 Web
| Edited By: |

Updated on:Oct 10, 2022 | 7:45 PM

Share

ದೆಹಲಿ: ಉಕ್ರೇನ್‌ನಲ್ಲಿ (Ukraine) ಸಂಘರ್ಷ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದ್ದು ಮತ್ತು ರಾಜತಾಂತ್ರಿಕತೆಗೆ ಮರಳಲು ಕರೆ ನೀಡಿದೆ. ಅದೇ ವೇಳೆ ಸೇನೆಯನ್ನು ಹಿಂಪಡೆಯುವ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ ಎಂದು ಭಾರತ ಇಂದು ಹೇಳಿದೆ. “ಮೂಲಸೌಕರ್ಯ ಮತ್ತು ನಾಗರಿಕರ ಸಾವು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಯುದ್ಧವನ್ನು ತಕ್ಷಣವೇ ನಿಲ್ಲಿಸಲು ಮತ್ತು ರಾಜತಾಂತ್ರಿಕತೆ ಮತ್ತು ಸಂವಾದದ ಹಾದಿಗೆ ತುರ್ತು ಮರಳಲು ನಾವು ಒತ್ತಾಯಿಸುತ್ತೇವೆ.ಸೇನೆ ಹಿಂಪಡೆಯುವ ಗುರಿಯನ್ನು ಹೊಂದಿರುವ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಾಗತಿಕ ಕ್ರಮವು ಯುಎನ್ ಚಾರ್ಟರ್, ಅಂತರಾಷ್ಟ್ರೀಯ ಕಾನೂನು ಮತ್ತು ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವದ ತತ್ವಗಳಲ್ಲಿ ತಳವೂರಿದೆ ಎಂಬುದನ್ನು ಸಂಘರ್ಷದ ಆರಂಭದಿಂದಲೂ ಭಾರತವು ನಿರಂತರವಾಗಿ ಉಳಿಸಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಉಕ್ರೇನ್‌ನ ಸೇನೆಯು ಉಕ್ರೇನ್‌ನಲ್ಲಿ 84 ಕ್ರೂಸ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದೆ. ಎರಡು ದಿನಗಳ ಹಿಂದೆ ರಷ್ಯಾವನ್ನು ಕ್ರೈಮಿಯಾಕ್ಕೆ ಸಂಪರ್ಕಿಸುವ ಸೇತುವೆಯನ್ನು ಹಾನಿಗೊಳಿಸಿದ್ದು ಕೈವ್ ಎಂದು ಮಾಸ್ಕೋ ಆರೋಪಿಸಿದೆ.

ಉಕ್ರೇನ್ ರಾಜಧಾನಿ ಕೈವ್ ಮೇಲೆ  ರಷ್ಯಾ ದಾಳಿ ನಡೆಸಿದ್ದು , ಇದರಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಎಂಟು ಪ್ರದೇಶಗಳು ಮತ್ತು ಕೈವ್‌ನಾದ್ಯಂತ 11 “ಪ್ರಮುಖ ಮೂಲಸೌಕರ್ಯ ಸೌಲಭ್ಯಗಳು” ಹಾನಿಗೊಳಗಾಗಿವೆ. ತಾತ್ಕಾಲಿಕ ವಿದ್ಯುತ್, ನೀರು ಮತ್ತು ಸಂವಹನ ಕಡಿತದ ಎಚ್ಚರಿಕೆಯನ್ನು ಉಕ್ರೇನ್‌ನ ಪ್ರಧಾನ ಮಂತ್ರಿ ಡೆನಿಸ್ ಶ್ಮಿಗಲ್ ಹೇಳಿದ್ದಾರೆ.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಕಾಳಜಿಯ ಮಾತುಗಳನ್ನಾಡಿದ್ದಾರೆ. “ಇಂದಿನ ಯುಗ ಯುದ್ಧದ್ದಲ್ಲ” ಎಂದು ಕಳೆದ ತಿಂಗಳು ಸಮರ್‌ಕಂಡ್‌ನಲ್ಲಿ ಪ್ರಧಾನಿ ಮೋದಿ ಪುಟಿನ್‌ಗೆ ಹೇಳಿದ್ದರು. ಈ ಮಾತುಗಳನ್ನು ಅನೇಕ ವಿಶ್ವ ನಾಯಕರು ಸಾರ್ವಜನಿಕ ಖಂಡನೆಯಾಗಿ ನೋಡಿದ್ದಾರೆ.

Published On - 6:30 pm, Mon, 10 October 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ