AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಏಕೈಕ ಅಜೆಂಡಾವಿರುವ ರಾಜಕೀಯ ರಂಗ ಬೇಕಾಗಿಲ್ಲ: ಕೆಸಿಆರ್

ಇತರ ಕೆಲವು ಪಕ್ಷಗಳೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ವಿಷಯವನ್ನು ಎತ್ತಿದವು. ಇದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ನಾನು ಅವರಿಗೆ ಹೇಳಿದೆ. ಮೋದಿಯನ್ನು ಕೆಳಗಿಳಿಸಿ ಕೆಲವು ಟಾಮ್, ಡಿಕ್ ಮತ್ತು ಹ್ಯಾರಿಯನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡುವತ್ತ ಗಮನ ಹರಿಸಿಲ್ಲ ಎಂದು ಕೆಸಿಆರ್ ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಏಕೈಕ ಅಜೆಂಡಾವಿರುವ ರಾಜಕೀಯ ರಂಗ ಬೇಕಾಗಿಲ್ಲ: ಕೆಸಿಆರ್
ತೆಲಂಗಾಣ ಸಿಎಂ ಕೆಸಿಆರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 27, 2022 | 6:58 PM

Share

ಹೈದರಾಬಾದ್: ಕೇಂದ್ರದಲ್ಲಿ ಬಿಜೆಪಿಯನ್ನು(BJP) ಅಧಿಕಾರದಿಂದ ತೆಗೆದುಹಾಕುವ ಏಕೈಕ ಅಜೆಂಡಾವಿರುವ ರಾಜಕೀಯ ರಂಗ ಅಥವಾ  ಗುಂಪು  ಭಾರತಕ್ಕೆ ಅಗತ್ಯವಿಲ್ಲ ಎಂದು ತೆಲಂಗಾಣ (Telangana) ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao) ಬುಧವಾರ ಹೇಳಿದ್ದಾರೆ.  ರಾವ್ ಅವರು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪರ್ಯಾಯವಾದ ಜನರ ಕಾರ್ಯಸೂಚಿಗೆ ಕರೆ ನೀಡಿದರು. 2024 ರ ರಾಷ್ಟ್ರೀಯ ಚುನಾವಣೆಗೆ ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಳ್ಳುವ ಪ್ರಯತ್ನಗಳ ಭಾಗವಾಗಿ ಅವರು ಸರಣಿ ಸಭೆಗಳನ್ನು ನಡೆಸುತ್ತಿರುವಾಗ ರಾವ್ ಅವರ ಈ ಹೇಳಿಕೆಗಳು ಬಂದಿವೆ. ಕೆಸಿಆರ್ ಮಾರ್ಚ್‌ನಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಫೆಬ್ರವರಿ 20 ರಂದು ಮುಂಬೈನಲ್ಲಿ ಪ್ರತ್ಯೇಕವಾಗಿ ಭೇಟಿಯಾದರು.  ಠಾಕ್ರೆ ಅವರ ಶಿವಸೇನೆ ಮತ್ತು ಎನ್‌ಸಿಪಿ ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಜಾರ್ಖಂಡ್‌ನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಸರ್ಕಾರದ ಭಾಗವಾಗಿ ಕಾಂಗ್ರೆಸ್ ಕೂಡ ಇದೆ. ಮುಂಬೈನಲ್ಲಿ ತಮ್ಮ ಸಭೆಗಳ ನಂತರ, ಕೆಸಿಆರ್ ಅವರು “ವಿಭಜಕ, ಕೋಮುವಾದಿ ಶಕ್ತಿಗಳ” ವಿರುದ್ಧ ಹೋರಾಡಲು ಮತ್ತು ದೇಶದ ಆಡಳಿತದಲ್ಲಿ ಬದಲಾವಣೆಯನ್ನು ತರಲು ರಾಷ್ಟ್ರೀಯ ರಾಜಕೀಯದಲ್ಲಿ ಪಾತ್ರವಹಿಸಲು ಪ್ರತಿಜ್ಞೆ ಮಾಡಿದರು. ತನಗೆ ರಾಜಕೀಯ ಅಜೆಂಡಾ ಅಗತ್ಯವಿಲ್ಲ, ಆದರೆ ದೇಶವನ್ನು ಪ್ರಗತಿ ಮತ್ತು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವ ಪರ್ಯಾಯವಾದ ಜನರ ಅಜೆಂಡಾ ಬೇಕಾಗಿದೆ.ಯಾವುದೇ ಹೊಸ ಪ್ರಯೋಗವು ಈ ತತ್ವಶಾಸ್ತ್ರವನ್ನು ಆಧರಿಸಿರಬೇಕು” ಎಂದು ತೆಲಂಗಾಣ ರಾಷ್ಟ್ರ ಸಮಿತಿಯ 21 ನೇ ಸಂಸ್ಥಾಪನಾ ದಿನದಂದು ತಮ್ಮ ಭಾಷಣದಲ್ಲಿ ರಾವ್ ಹೇಳಿದರು.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಕಿತ್ತೊಗೆಯಲು ಕಮ್ಯುನಿಸ್ಟ್ ನಾಯಕರು ತಮ್ಮ ಸಹಾಯ ಕೋರಿದ್ದಾರೆ ಎಂದರು. “ಇತರ ಕೆಲವು ಪಕ್ಷಗಳೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ವಿಷಯವನ್ನು ಎತ್ತಿದವು. ಇದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ನಾನು ಅವರಿಗೆ ಹೇಳಿದೆ. ಮೋದಿಯನ್ನು ಕೆಳಗಿಳಿಸಿ ಕೆಲವು ಟಾಮ್, ಡಿಕ್ ಮತ್ತು ಹ್ಯಾರಿಯನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡುವತ್ತ ಗಮನ ಹರಿಸಿಲ್ಲ ಎಂದು ಕೆಸಿಆರ್ ಹೇಳಿದ್ದಾರೆ.

ಭಾರತೀಯ ರಾಷ್ಟ್ರ ಸಮಿತಿಗೆ ಸಲಹೆಗಳನ್ನು ಪಡೆಯುತ್ತಿದ್ದಾರೆ. “ದೇಶಕ್ಕೆ ಖಂಡಿತವಾಗಿಯೂ ಹೊಸ ದಿಕ್ಕು ಮತ್ತು ಸರಿಯಾದ ಮಾರ್ಗವನ್ನು ತೋರಿಸುವ ಪರ್ಯಾಯ ಕಾರ್ಯಸೂಚಿಯ ಅಗತ್ಯವಿದೆ. ಅದನ್ನು ನಿಜವಾಗಿಸಲು ನಾವು ಮಾರ್ಗಗಳನ್ನು ಕಂಡುಕೊಳ್ಳಬೇಕು. ಹೈದರಾಬಾದ್‌ನಿಂದ ಈ ವೇದಿಕೆಯಲ್ಲಿ ಹೊಸ ಪ್ರಸ್ತಾಪ, ಹೊಸ ಕಾರ್ಯಸೂಚಿ ಮತ್ತು ಹೊಸ ತತ್ವಶಾಸ್ತ್ರ ಹೊರಹೊಮ್ಮಿ ಇಡೀ ದೇಶಕ್ಕೆ ಹರಡಿದರೆ, ಅದು ನಮಗೆ ಹೆಮ್ಮೆಯ ವಿಷಯವಾಗಿದೆ.

ದೇಶಕ್ಕೆ ಹೊಸ ಕೃಷಿ, ಆರ್ಥಿಕ ಮತ್ತು ಕೈಗಾರಿಕಾ ನೀತಿಗಳ ಅಗತ್ಯವಿದೆ . “ಅದಕ್ಕಾಗಿ, ನಮಗೆ ಸರಿಯಾದ ವೇದಿಕೆ ಬೇಕು. ಕ್ಷುಲ್ಲಕ ಮತ್ತು ಸಂಕುಚಿತ ರಾಜಕಾರಣವನ್ನು ಮೀರಿ ಬೆಳೆಯಬೇಕು. ನಮಗೆ ದೇಶಕ್ಕಾಗಿ ಪ್ರಗತಿಪರ ಮಾರ್ಗ ಬೇಕು ಮತ್ತು ಆಗ ಮಾತ್ರ ನಾವು ಬಲಿಷ್ಠ ರಾಷ್ಟ್ರವನ್ನು ನೋಡಬಹುದು ಎಂದಿದ್ದಾರೆ ಕೆಸಿಆರ್.

ಇದನ್ನೂ ಓದಿ:Video: ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರೆ, ಅರವಿಂದ್ ಕೇಜ್ರಿವಾಲ್ ಹೀಗೆ ಕುಳಿತುಕೊಳ್ಳೋದಾ?- ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ