ಏಷ್ಯಾದ 3ನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ; ಮೋದಿ ನಾಯಕತ್ವಕ್ಕೆ ಹರ್ದೀಪ್ ಪುರಿ ಶ್ಲಾಘನೆ

ಚೀನಾದಂತಹ ದೇಶಗಳು ನಿಧಾನಗತಿಯನ್ನು ಎದುರಿಸುತ್ತಿರುವಾಗ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ ಏಷ್ಯಾದ ಹೊಸ ಕಿಂಗ್ ಮೇಕರ್ ಆಗಿ ಸಿಂಹಾಸನವನ್ನು ಏರಲು ಸಜ್ಜಾಗಿದೆ. ಅದಕ್ಕೆ ಉತ್ತಮ ನಾಯಕತ್ವವೇ ಕಾರಣ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅಭಿಪ್ರಾಯಪಟ್ಟಿದ್ದಾರೆ.

ಏಷ್ಯಾದ 3ನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ; ಮೋದಿ ನಾಯಕತ್ವಕ್ಕೆ ಹರ್ದೀಪ್ ಪುರಿ ಶ್ಲಾಘನೆ
ಹರ್ದೀಪ್ ಪುರಿ
Follow us
|

Updated on: Sep 24, 2024 | 5:45 PM

ನವದೆಹಲಿ: ಸಿಡ್ನಿ ಮೂಲದ ಲೋವಿ ಇನ್‌ಸ್ಟಿಟ್ಯೂಟ್ ತನ್ನ ಏಷ್ಯಾ ಪವರ್ ಇಂಡೆಕ್ಸ್ 2024ರಲ್ಲಿ ಚೀನಾ ಮತ್ತು ಜಪಾನ್‌ನ ನಂತರ ಭಾರತವನ್ನು ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಗುರುತಿಸಿದೆ. ಈ ಕುರಿತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಂತಸ ವ್ಯಕ್ತಪಡಿಸಿದ್ದು, ಭಾರತ ಜಾಗತಿಕ ಸೂಪರ್ ಪವರ್ ಸ್ಥಾನಮಾನಕ್ಕೆ ಏರಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ ಎಂದಿದ್ದಾರೆ.

ಭಾರತದ ಉದಯವು ಆಕಸ್ಮಿಕವಲ್ಲ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಕ್ರಮಣಕಾರಿ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ವಿಶ್ವದಲ್ಲಿ ಭಾರತದ ಸ್ಥಾನವನ್ನು ಮರುರೂಪಿಸುವ ಅವರ ದಿಟ್ಟ ಮಹತ್ವಾಕಾಂಕ್ಷೆಗಳ ನೇರ ಫಲಿತಾಂಶವಾಗಿದೆ. ಅವರ ನಾಯಕತ್ವವಿಲ್ಲದಿದ್ದರೆ ಭಾರತವು ಇನ್ನೂ ಹಿಂದುಳಿದಿರುತ್ತಿತ್ತು. ಆದರೆ, ಇಂದು ನಮ್ಮ ರಾಷ್ಟ್ರವು ಸೂಪರ್ ಪವರ್ ಸ್ಥಾನಮಾನ ಪಡೆಯುವ ಸನ್ನಾಹದಲ್ಲಿದೆ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಇದನ್ನೂ ಓದಿ: PM Modi: ಮಾನವೀಯತೆಯ ಯಶಸ್ಸು ಒಗ್ಗಟ್ಟಿನಲ್ಲಿದೆಯೇ ವಿನಃ ಯುದ್ಧಭೂಮಿಯಲ್ಲಿಲ್ಲ; ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ

“ಏಷ್ಯಾದಲ್ಲಿ ಭಾರತದ ಶಕ್ತಿಯು ಬೆಳೆಯುತ್ತಿದೆ. ಲೋವಿ ಇನ್‌ಸ್ಟಿಟ್ಯೂಟ್ ವರದಿಯು ಆರ್ಥಿಕ ಸಾಮರ್ಥ್ಯ, ರಾಜತಾಂತ್ರಿಕ ಚಟುವಟಿಕೆ ಮತ್ತು ಭವಿಷ್ಯದ ಸಂಪನ್ಮೂಲಗಳಲ್ಲಿ ಭಾರತದ ಸಾಧನೆಗಳನ್ನು ಉಲ್ಲೇಖಿಸುತ್ತದೆ. ಇದು ಜನಸಂಖ್ಯಾ ಲಾಭಾಂಶವನ್ನು ಸೂಚಿಸುತ್ತದೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಹೇಳಿದ್ದಾರೆ.

ಭಾರತದ ಉದಯದ ಮೇಲೆ ಮೋದಿಯವರ ಪ್ರಭಾವವನ್ನು ಪ್ರಶ್ನಿಸುವವರು ಕೇವಲ ಸತ್ಯಗಳನ್ನು ಮಾತ್ರ ನೋಡಬೇಕಾಗಿದೆ. ಭಾರತದ ಪಥವು ಹೆಚ್ಚಿದೆ. ಜಗತ್ತು ಇನ್ನು ಮುಂದೆ ಅದನ್ನು ನಿರ್ಲಕ್ಷಿಸುವುದಿಲ್ಲ ಎಂದು ಹರ್ದೀಪ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಪ್ರಧಾನಿ ಮೋದಿ

2043ರ ವೇಳೆಗೆ ಭಾರತದ ಆರ್ಥಿಕತೆಯು ಮೂರನೇ ಅತಿ ದೊಡ್ಡದಾಗಿರುತ್ತದೆ. ಪ್ರಧಾನಿ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಅದು ಸಾಧ್ಯವಾಗಲಿದೆ ಎಂದು ಭರವಸೆ ನೀಡುತ್ತಿದ್ದಾರೆ. 2027ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು IMF ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಮೋದಿಯ ನಾಯಕತ್ವ ಇಲ್ಲದಿದ್ದರೆ ಭಾರತವು ಯಾವುದೇ ಪವರ್ ಇಂಡೆಕ್ಸ್‌ನಲ್ಲಿ ಮೊದಲ 3 ಸ್ಥಾನಗಳಿಗೆ ಎಂದಿಗೂ ಬರುತ್ತಿರಲಿಲ್ಲ ಎಂದು ಹರ್ದೀಪ್ ಪುರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು