AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸುಧಾರಣೆಗಳು ಎಕ್ಸ್​ಪ್ರೆಸ್​ ರೈಲಿನ ವೇಗದಲ್ಲಿ ಓಡುತ್ತಿವೆ: ನರೇಂದ್ರ ಮೋದಿ

ಭಾರತದಲ್ಲಿ ನಡೆಯುತ್ತಿರುವ ಸುಧಾರಣೆಗಳು ಎಕ್ಸ್​ಪ್ರೆಸ್​ ರೈಲಿನ ವೇಗದಲ್ಲಿ ಓಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅದನ್ನು ರಿಫಾರ್ಮ್​ ಎಕ್ಸ್​ಪ್ರೆಸ್(Reform Express)​ ಎಂದು ವ್ಯಾಖ್ಯಾನಿಸಿದ್ದಾರೆ. ಸುಧಾರಣೆಗಳು ವೇಗವಾಗಿ ಮತ್ತು ಸ್ಪಷ್ಟ ಉದ್ದೇಶದೊಂದಿಗೆ ಮುನ್ನುಗ್ಗುತ್ತಿವೆ ಎಂದು ಎನ್​ಡಿಎ ಸಂಸದೀಯ ಸಭೆಯಲ್ಲಿ ಹೇಳಿದ್ದಾರೆ. ಸರ್ಕಾರದ ಸುಧಾರಣೆಗಳು ಕೇವಲ ಆರ್ಥಿಕ ಅಥವಾ ಆದಾಯ ಕೇಂದ್ರಿತವಲ್ಲ, ಸಂಪೂರ್ಣವಾಗಿ ನಾಗರಿಕ ಕೇಂದ್ರಿತವಾಗಿವೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸಾಮಾನ್ಯ ನಾಗರಿಕರ ದೈನಂದಿನ ಕಷ್ಟಗಳನ್ನು ನಿವಾರಿಸುವುದು ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು.

ಭಾರತದಲ್ಲಿ ಸುಧಾರಣೆಗಳು ಎಕ್ಸ್​ಪ್ರೆಸ್​ ರೈಲಿನ ವೇಗದಲ್ಲಿ ಓಡುತ್ತಿವೆ: ನರೇಂದ್ರ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Dec 09, 2025 | 2:37 PM

Share

ನವದೆಹಲಿ, ಡಿಸೆಂಬರ್ 09: ಭಾರತದಲ್ಲಿ ನಡೆಯುತ್ತಿರುವ ಸುಧಾರಣೆಗಳು ಎಕ್ಸ್​ಪ್ರೆಸ್​ ರೈಲಿನ ವೇಗದಲ್ಲಿ ಓಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅದನ್ನು ರಿಫಾರ್ಮ್​ ಎಕ್ಸ್​ಪ್ರೆಸ್(Reform Express)​ ಎಂದು ವ್ಯಾಖ್ಯಾನಿಸಿದ್ದಾರೆ. ಸುಧಾರಣೆಗಳು ವೇಗವಾಗಿ ಮತ್ತು ಸ್ಪಷ್ಟ ಉದ್ದೇಶದೊಂದಿಗೆ ಮುನ್ನುಗ್ಗುತ್ತಿವೆ ಎಂದು ಎನ್​ಡಿಎ ಸಂಸದೀಯ ಸಭೆಯಲ್ಲಿ ಹೇಳಿದ್ದಾರೆ. ಸರ್ಕಾರದ ಸುಧಾರಣೆಗಳು ಕೇವಲ ಆರ್ಥಿಕ ಅಥವಾ ಆದಾಯ ಕೇಂದ್ರಿತವಲ್ಲ, ಸಂಪೂರ್ಣವಾಗಿ ನಾಗರಿಕ ಕೇಂದ್ರಿತವಾಗಿವೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸಾಮಾನ್ಯ ನಾಗರಿಕರ ದೈನಂದಿನ ಕಷ್ಟಗಳನ್ನು ನಿವಾರಿಸುವುದು ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು.

ಇದರಿಂದ ಪ್ರತಿಯೊಬ್ಬರೂ ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಬಹುದು. ರಿಫಾರ್ಮ್ ಎಕ್ಸ್‌ಪ್ರೆಸ್ ಪ್ರತಿ ಮನೆಯನ್ನು ತಲುಪಬೇಕು ಮತ್ತು ದೈನಂದಿನ ಸಮಸ್ಯೆಗಳನ್ನು ನಿವಾರಿಸಬೇಕು. ಪ್ರಧಾನಿ ಮೋದಿ ಅವರು ಸಂಸದರಿಗೆ ತಮ್ಮ ಕ್ಷೇತ್ರಗಳಲ್ಲಿ ಸಾಮಾನ್ಯ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಆಲಿಸುವಂತೆ ಮನವಿ ಮಾಡಿದರು. ಸುಧಾರಣೆಗಳ ಪ್ರಯೋಜನಗಳು ಕಟ್ಟ ಕಡೆಯ ವ್ಯಕ್ತಿವರೆಗೆ ತಲುಪುವಂತೆ ಸಮಸ್ಯೆಗಳ ಆಧಾರದ ಮೇಲೆ ನೀತಿಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು.

30-40 ಪುಟಗಳ ಫಾರ್ಮ್‌ಗಳನ್ನು ಭರ್ತಿ ಮಾಡಿ ಒಂದೇ ರೀತಿಯ ಡೇಟಾವನ್ನು ಪದೇ ಪದೇ ಕೇಳುವ ಸಂಸ್ಕೃತಿಯನ್ನು ನಿರ್ಮೂಲನೆ ಮಾಡಬೇಕು ನಾಗರಿಕರ ಮನೆ ಬಾಗಿಲಿಗೆ ಸೇವೆಗಳನ್ನು ತಲುಪಿಸಬೇಕು. ನಾಗರಿಕರನ್ನು ನಂಬಿ ಸರ್ಕಾರ ಸ್ವಯಂ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ಇದನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಅವರು ಒತ್ತಿ ಹೇಳಿದರು.

ಮತ್ತಷ್ಟು ಓದಿ: ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; ಹಳೆಯ 29 ಕಾನೂನುಗಳ ಬದಲು ಹೊಸ 4 ಕಾನೂನು ಸಂಹಿತೆ ಜಾರಿಗೆ

ಸಭೆಯಲ್ಲಿ ಹಾಜರಿದ್ದ ನಾಯಕರು ಇದನ್ನು ಮೋದಿ ಸರ್ಕಾರದ ಮೂರನೇ ಅವಧಿಯ ನಿರ್ದೇಶನ ಮತ್ತು ದೃಷ್ಟಿಕೋನಕ್ಕೆ ಸ್ಪಷ್ಟ ನೀಲನಕ್ಷೆ ಎಂದು ಬಣ್ಣಿಸಿದರು. ಪ್ರಧಾನ ಮಂತ್ರಿಯವರ ಭಾಷಣವು ಮುಂಬರುವ ದಿನಗಳಲ್ಲಿ ಮತ್ತಷ್ಟು ಡಿಜಿಟಲೀಕರಣ, ಅಧಿಕಾರಶಾಹಿಯ ವಿಮೋಚನೆ ಮತ್ತು ಸರ್ಕಾರಿ ಯೋಜನೆಗಳು ಮತ್ತು ಸೇವೆಗಳಿಗೆ ನಾಗರಿಕ ಕೇಂದ್ರಿತ ವಿಧಾನವನ್ನು ನೋಡಲಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಜೆಡಿಯು ಸಂಸದ ಸಂಜಯ್ ಝಾ , ಎನ್‌ಸಿಪಿ ಸಂಸದ ಪ್ರಫುಲ್ ಪಟೇಲ್, ಕೇಂದ್ರ ಸಚಿವರಾದ ಎಸ್ ಜೈಶಂಕರ್, ಎಲ್ ಮುರುಗನ್ ಮತ್ತು ಇತರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ನಿಯಮಗಳು ಮತ್ತು ಕಾನೂನುಗಳು ಒಳ್ಳೆಯದು ಆದರೆ ವ್ಯವಸ್ಥೆಯನ್ನು ಸರಿಪಡಿಸಲು ಜನರಿಗೆ ಕಿರುಕುಳ ನೀಡುವುದು ಸರಿಯಲ್ಲ ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು