AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪಾಕಿಸ್ತಾನ ವಿಮಾನ, ಮಿಲಿಟರಿ ವಿಮಾನಗಳ ಮೇಲಿನ ನಿಷೇಧ ಜೂನ್ 23ರವರೆಗೆ ವಿಸ್ತರಣೆ

ಭಾರತದ ನಾಗರಿಕ ವಿಮಾನಯಾನ ಸಚಿವಾಲಯ ಇಂದು ಹೊರಡಿಸಿದ ಸೂಚನೆಗಳ ನಂತರ ಭಾರತೀಯ ನೋಟಮ್ (ವಾಯುಪಡೆ/ವಾಯು ಕಾರ್ಯಾಚರಣೆಗಳಿಗೆ ಸೂಚನೆ) ಹೊರಡಿಸಲಾಗಿದೆ. ಕಳೆದ ತಿಂಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉಂಟಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭಾರತ ಇಂದು ಪಾಕಿಸ್ತಾನಿ ವಿಮಾನಗಳ ಮೇಲಿನ ವಾಯುಪ್ರದೇಶ ನಿಷೇಧವನ್ನು ಜೂನ್ 23ರವರೆಗೆ ಅಂದರೆ ಇನ್ನೂ ಒಂದು ತಿಂಗಳು ವಿಸ್ತರಿಸಿದೆ.

ಭಾರತದಲ್ಲಿ ಪಾಕಿಸ್ತಾನ ವಿಮಾನ, ಮಿಲಿಟರಿ ವಿಮಾನಗಳ ಮೇಲಿನ ನಿಷೇಧ ಜೂನ್ 23ರವರೆಗೆ ವಿಸ್ತರಣೆ
Pakistan Flight
ಸುಷ್ಮಾ ಚಕ್ರೆ
|

Updated on: May 23, 2025 | 9:15 PM

Share

ನವದೆಹಲಿ, ಮೇ 23: ಆಪರೇಷನ್ ಸಿಂಧೂರ (Operation Sindoor) ಮತ್ತು ಕದನ ವಿರಾಮದ (Ceasefire) ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನತೆಯ ಮಧ್ಯೆ ಭಾರತ ಇಂದು ಪಾಕಿಸ್ತಾನ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳ ಮೇಲಿನ ನಿಷೇಧವನ್ನು ಜೂನ್ 23ರವರೆಗೆ ವಿಸ್ತರಿಸಿದೆ. ಈ ಕ್ರಮದ ಪ್ರಕಾರ, ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳು ಗುತ್ತಿಗೆ ಪಡೆದ, ಒಡೆತನದ ಅಥವಾ ನಿರ್ವಹಿಸುವ ವಿಮಾನಗಳು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

“ಭಾರತ- ಪಾಕಿಸ್ತಾನ ವಿಮಾನಗಳಿಗೆ NOTAM ಅನ್ನು 1 ತಿಂಗಳ ಕಾಲ ವಿಸ್ತರಿಸಿದೆ. ಜೂನ್ 23ರವರೆಗೆ ಜಾರಿಯಲ್ಲಿರುತ್ತದೆ. ಪಾಕಿಸ್ತಾನದಲ್ಲಿ ನೋಂದಾಯಿಸಲಾದ ACFTಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳು/ ನಿರ್ವಾಹಕರು ನಿರ್ವಹಿಸುವ/ ಮಾಲೀಕತ್ವದ ಅಥವಾ ಗುತ್ತಿಗೆ ಪಡೆದ ACFTಗಳಿಗೆ ಭಾರತೀಯ ವಾಯುಪ್ರದೇಶವನ್ನು ಅನುಮೋದಿಸಲಾಗಿಲ್ಲ” ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
Image
ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ
Image
ಪಾಕಿಸ್ತಾನದ ದೊಡ್ಡ ನಗರಗಳಲ್ಲಿ ಉಗ್ರರು ಮುಕ್ತವಾಗಿ ಸುತ್ತಾಡುತ್ತಿದ್ದಾರೆ
Image
ಕ್ಯಾಮೆರಾ ಮುಂದೆ ಮಾತ್ರ ರಕ್ತ ಕುದಿಯೋದೇಕೆ? ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಇದನ್ನೂ ಓದಿ: ಪಾಕಿಸ್ತಾನದ ಆರ್ಥಿಕತೆಗೆ ಪೆಟ್ಟು ನೀಡಲು ಭಾರತ ಪ್ಲಾನ್; ಮತ್ತೆ FATFನ ಗ್ರೇ ಪಟ್ಟಿಗೆ ಸೇರುತ್ತಾ ಪಾಕ್?

ಹೊಸ ಕ್ರಮಗಳ ಅಡಿಯಲ್ಲಿ, ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳು ಗುತ್ತಿಗೆ ಪಡೆದ, ಒಡೆತನದ ಅಥವಾ ನಿರ್ವಹಿಸುವ ಎಲ್ಲಾ ವಿಮಾನಗಳು ಈಗ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚುವಿಕೆಯನ್ನು ಮತ್ತೊಂದು ತಿಂಗಳು ವಿಸ್ತರಿಸಿದೆ.

ಲಷ್ಕರ್-ಎ-ತೈಬಾಗೆ ಸಂಬಂಧಿಸಿದ ಕಾರ್ಯಕರ್ತರು ನಡೆಸಿದ ಮಾರಕ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ಏಪ್ರಿಲ್ 23ರಂದು ಪಾಕಿಸ್ತಾನವು ಆರಂಭದಲ್ಲಿ ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಗಳಿಗೆ ಸ್ಥಗಿತಗೊಳಿಸಿತು. ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ನಿಯಮಗಳಿಗೆ ಅನುಸಾರವಾಗಿ, ವಾಯುಪ್ರದೇಶ ನಿರ್ಬಂಧಗಳು 1 ತಿಂಗಳು ಮೀರಬಾರದು ಎಂದು ಷರತ್ತು ವಿಧಿಸುವ ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ನಿಯಮಗಳಿಗೆ ಅನುಸಾರವಾಗಿ 1 ತಿಂಗಳ ಕಾಲ ಮುಚ್ಚುವಿಕೆಯನ್ನು ಪರಿಚಯಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ