AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿರುವ ವಿದೇಶಿ ಪ್ರಜೆಗಳ ವೀಸಾ ಅವಧಿ ವಿಸ್ತರಣೆ; ಸೆ.30ರವರೆಗೆ ವೀಸಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಹಲವಾರು ದೇಶಗಳಿಗೆ ನಿಯಮಿತ ವಿಮಾನಗಳು ಕಾರ್ಯನಿರ್ವಹಿಸದ ಕಾರಣ ಆಗಸ್ಟ್ 31, 2021 ರವರೆಗೆ ಲಭ್ಯವಿದ್ದ ಈ ಸೌಲಭ್ಯವನ್ನು ಈಗ ಸೆಪ್ಟೆಂಬರ್ 30, 2021 ರವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿರುವ ವಿದೇಶಿ ಪ್ರಜೆಗಳ ವೀಸಾ ಅವಧಿ ವಿಸ್ತರಣೆ; ಸೆ.30ರವರೆಗೆ ವೀಸಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 02, 2021 | 8:59 PM

Share

ದೆಹಲಿ: ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳಿಗೆ ಭಾರತೀಯ ವೀಸಾ ಅಥವಾ ವಾಸ್ತವ್ಯದ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ಮಾನ್ಯವೆಂದು ಪರಿಗಣಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ. ಕೊವಿಡ್ -19 ಹಿನ್ನೆಲೆಯಲ್ಲಿ ವಿಮಾನಗಳ ಮೇಲೆ ನಿರ್ಬಂಧ ಹೇರಿರುವುದರಿಂದ ಮಾರ್ಚ್ 2020 ರ ಮೊದಲು ವಿವಿಧ ರೀತಿಯ ವೀಸಾಗಳಲ್ಲಿ ಭಾರತದಲ್ಲಿದ್ದ ಅನೇಕ ವಿದೇಶಿಯರು ದೇಶದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅಂದಿನಿಂದ ಕೇಂದ್ರ ಸರ್ಕಾರವು ನಿಯಮಿತ ವೀಸಾಗಳಿಗೆ ಹೆಚ್ಚಿನ ವಿಸ್ತರಣೆಗಳನ್ನು ನೀಡಿತು ಅಥವಾ ಯಾವುದೇ ಹೆಚ್ಚುವರಿ ದಂಡವನ್ನು ವಿಧಿಸದೆ ಉಚಿತ ಆಧಾರದ ಮೇಲೆ ನಿಬಂಧನೆ ಅವಧಿಯನ್ನು ಉಳಿಸಿಕೊಂಡಿದೆ. ಹಲವಾರು ದೇಶಗಳಿಗೆ ನಿಯಮಿತ ವಿಮಾನಗಳು ಕಾರ್ಯನಿರ್ವಹಿಸದ ಕಾರಣ ಆಗಸ್ಟ್ 31, 2021 ರವರೆಗೆ ಲಭ್ಯವಿದ್ದ ಈ ಸೌಲಭ್ಯವನ್ನು ಈಗ ಸೆಪ್ಟೆಂಬರ್ 30, 2021 ರವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

“ಅಂತಹ ವಿದೇಶಿ ಪ್ರಜೆಗಳು 2021 ರ ಸೆಪ್ಟೆಂಬರ್ 30 ರವರೆಗೆ ತಮ್ಮ ವೀಸಾಗಳನ್ನು ವಿಸ್ತರಿಸಲು ಸಂಬಂಧಪಟ್ಟ FRRO/FRO ಗೆ ಯಾವುದೇ ಅರ್ಜಿಯನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸಚಿವಾಲಯ ಹೇಳಿದೆ. ಸೌಲಭ್ಯವನ್ನು ಪಡೆಯುತ್ತಿರುವ ವಿದೇಶಿ ಪ್ರಜೆಗಳು ದೇಶವನ್ನು ತೊರೆಯುವ ಮುನ್ನ ಇ-ಎಫ್‌ಆರ್‌ಆರ್‌ಒ ಪೋರ್ಟಲ್‌ನಲ್ಲಿ ನಿರ್ಗಮನ ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು. ಯಾವುದೇ ಹೆಚ್ಚುವರಿ ಅವಧಿಯ ದಂಡವನ್ನು ವಿಧಿಸದೆ ಉಚಿತ ಆಧಾರದ ಮೇಲೆ ಸಂಬಂಧಿತ FRRO/FRO ನಿಂದ ಅನುಮತಿ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಯಾವುದೇ ವರ್ಗದ ವೀಸಾದಲ್ಲಿ ಈಗಾಗಲೇ ಭಾರತದಲ್ಲಿರುವ ಅಫ್ಘಾನ್ ಪ್ರಜೆಗಳಿಗೆ ಅವರಿಗೆ ನೀಡಲಾದ ಪ್ರತ್ಯೇಕ ಮಾರ್ಗಸೂಚಿಗಳ ಅಡಿಯಲ್ಲಿ ವೀಸಾ ವಿಸ್ತರಣೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೇರಳದಲ್ಲಿ ಒಂದೇ ದಿನ 32,097 ಹೊಸ ಕೊವಿಡ್ ಪ್ರಕರಣ ಪತ್ತೆ, 188 ಸಾವು; ಟಿಪಿಆರ್ ಶೇ 18.41 

ಇದನ್ನೂ ಓದಿ: Ind vs Eng: ಓವಲ್ ಟೆಸ್ಟ್​ನಲ್ಲಿ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ; ಟ್ವೀಟ್ ಮಾಡಿ ಕಾರಣ ತಿಳಿಸಿದ ಬಿಸಿಸಿಐ

(India extends visas will be considered valid till September 30 says ministry of home affairs )

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ