AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashmir Issue: ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಬೇಡ; ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಅಧಿವೇಶನದಲ್ಲಿ ಪಾಕ್​​​​ಗೆ ಭಾರತ ಖಡಕ್ ಎಚ್ಚರಿಕೆ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 55 ನೇ ನಿಯಮಿತ ಅಧಿವೇಶನದಲ್ಲಿ, ಭಾರತದ ಮೊದಲ ಕಾರ್ಯದರ್ಶಿ ಅನುಪಮಾ ಸಿಂಗ್, ಪಾಕಿಸ್ತಾನ ಭಾರತದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗ. ಪಾಕಿಸ್ತಾನ ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಪ್ರಚಾರ ಮಾಡಲು ಮಂಡಳಿಯನ್ನು ಮತ್ತೆ ದುರ್ಬಳಕೆ ಮಾಡಿಕೊಂಡಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ

Kashmir Issue: ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಬೇಡ; ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಅಧಿವೇಶನದಲ್ಲಿ ಪಾಕ್​​​​ಗೆ ಭಾರತ ಖಡಕ್ ಎಚ್ಚರಿಕೆ
ಅನುಪಮಾ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on:Feb 29, 2024 | 1:54 PM

ದೆಹಲಿ ಫೆಬ್ರವರಿ 29: ಜಮ್ಮು ಮತ್ತು ಕಾಶ್ಮೀರ (Jammu and Kashmir) ಕುರಿತಂತೆ ಪಾಕಿಸ್ತಾನದ (Pakistan) ಆರೋಪಕ್ಕೆ ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (UN Human Rights Council) ದಿಟ್ಟ ಉತ್ತರ ನೀಡಿದ್ದು, ಇಂತಹ ‘ಕೆಟ್ಟ’ ದಾಖಲೆ ಹೊಂದಿರುವ ದೇಶವು ಇತರ ರಾಷ್ಟ್ರದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದೆ. ‘ಪ್ರತ್ಯುತ್ತರ ನೀಡುವ ಹಕ್ಕನ್ನು’ ಚಲಾಯಿಸಿದ ಭಾರತ, ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 55 ನೇ ನಿಯಮಿತ ಅಧಿವೇಶನದಲ್ಲಿ, ಭಾರತದ ಮೊದಲ ಕಾರ್ಯದರ್ಶಿ ಅನುಪಮಾ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗ. ಪಾಕಿಸ್ತಾನ ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಪ್ರಚಾರ ಮಾಡಲು ಮಂಡಳಿಯನ್ನು ಮತ್ತೆ ದುರ್ಬಳಕೆ ಮಾಡಿಕೊಂಡಿರುವುದು ದುರದೃಷ್ಟಕರ ಎಂದು  ಹೇಳಿದರು. “ಭಾರತದ ಬಗ್ಗೆ ಪಾಕಿಸ್ತಾನ ಮಾಡಿದ ವ್ಯಾಪಕ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಕೌನ್ಸಿಲ್‌ನ ವೇದಿಕೆಯನ್ನು ಮತ್ತೊಮ್ಮೆ ಭಾರತದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ದುರುಪಯೋಗಪಡಿಸಿಕೊಳ್ಳುವುದು ದುರದೃಷ್ಟಕರ ” ಎಂದು ಅನುಪಮಾ ಸಿಂಗ್ ಹೇಳಿದ್ದಾರೆ.

ಪಾಕ್ ಆರೋಪಕ್ಕೆ ಭಾರತ ದಿಟ್ಟ ಉತ್ತರ

ಭಾರತೀಯ ರಾಜತಾಂತ್ರಿಕರು ಪಾಕಿಸ್ತಾನದ ನಿಲುವಿನಲ್ಲಿನ ವ್ಯಂಗ್ಯವನ್ನು ಇಲ್ಲಿ ಎತ್ತಿ ತೋರಿಸಿದ್ದಾರೆ. ಪಾಕಿಸ್ತಾನದವರ ಮಾನವ ಹಕ್ಕುಗಳ ದಾಖಲೆಯನ್ನು “ನಿಜವಾಗಿಯೂ ಕಳಪೆ ” ಎಂದು ಅನುಪಮಾ ಸಿಂಗ್ ಹೇಳಿದ್ದಾರೆ. ಆಗಸ್ಟ್ 2023 ರಲ್ಲಿ ಜರನ್‌ವಾಲಾ ನಗರದಲ್ಲಿ ಕ್ರಿಶ್ಚಿಯನ್ ಸಮುದಾಯದ ವಿರುದ್ಧ ಕಿರುಕುಳದ ನಿರ್ದಿಷ್ಟ ಉದಾಹರಣೆಯನ್ನು ಅವರು ಇಲ್ಲಿ ಉಲ್ಲೇಖಿಸಿದ್ದಾರೆ. ಈ ಗಲಭೆಯಲ್ಲಿ 19 ಚರ್ಚ್‌ಗಳನ್ನು ನಾಶಪಡಿಸಲಾಯಿತು ಮತ್ತು 89 ಕ್ರಿಶ್ಚಿಯನ್ ಮನೆಗಳನ್ನು ಸುಟ್ಟುಹಾಕಲಾಗಿತ್ತು.

“ತನ್ನದೇ ಆದ ಅಲ್ಪಸಂಖ್ಯಾತರ ವ್ಯವಸ್ಥಿತ ಕಿರುಕುಳವನ್ನು ಸಾಂಸ್ಥಿಕಗೊಳಿಸಿದ ಮತ್ತು ಕಳಪೆಮಟ್ಟದ ಮಾನವ ಹಕ್ಕುಗಳ ದಾಖಲೆಯನ್ನು ಹೊಂದಿರುವ ದೇಶವು ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ನ್ಯಾಯವನ್ನು ಸಾಧಿಸುವಲ್ಲಿ ಪ್ರತ್ಯಕ್ಷವಾಗಿ ಮಹತ್ತರವಾದ ಪ್ರಗತಿಯನ್ನು ಸಾಧಿಸುತ್ತಿರುವ ಭಾರತದ ಬಗ್ಗೆ ಪ್ರತಿಕ್ರಿಯಿಸುವುದು ವ್ಯಂಗ್ಯ ಎಂದು ಅನುಪಮಾ ಸಿಂಗ್ ಹೇಳಿದ್ದಾರೆ.

UNSC ಅನುಮೋದಿತ ಭಯೋತ್ಪಾದಕರಿಗೆ ಪಾಕಿಸ್ತಾನದ ಬೆಂಬಲದ ಬಗ್ಗೆಯೂ ಅನುಪಮಾ ಸಿಂಗ್ ಗಮನ ಸೆಳೆದಿದ್ದು ಆ ದೇಶವು ಜಾಗತಿಕವಾಗಿ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿದೆ ಎಂದು ಆರೋಪಿಸಿದರು. ಫೆಬ್ರವರಿ 26 ರಂದು ಪ್ರಾರಂಭವಾದ ಎನ್‌ಎಚ್‌ಆರ್‌ಸಿ ಅಧಿವೇಶನವು ಏಪ್ರಿಲ್ 5 ರವರೆಗೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿನಿಮಯವು ಎರಡು ರಾಷ್ಟ್ರಗಳ ನಡುವಿನ ವಿಶಾಲವಾದ ರಾಜತಾಂತ್ರಿಕ ಸಂವಾದದ ಭಾಗವಾಗಿದೆ. ಹಿಂದಿನ ವರ್ಷದ ಆಗಸ್ಟ್‌ನಲ್ಲಿ, ಪಾಕಿಸ್ತಾನದೊಂದಿಗಿನ ಸಾಮಾನ್ಯ ಸಂಬಂಧಕ್ಕಾಗಿ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ವಾತಾವರಣದ ಅಗತ್ಯವನ್ನು ಭಾರತ ಒತ್ತಿಹೇಳಿತ್ತು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಮಾನ್ಯ ನೆರೆಹೊರೆ ಸಂಬಂಧಗಳ ಬಯಕೆಯನ್ನು ವ್ಯಕ್ತಪಡಿಸಿ, ಭಯೋತ್ಪಾದನೆ ಮುಕ್ತ ವಾತಾವರಣದ ಮಹತ್ವವನ್ನು ಒತ್ತಿಹೇಳಿತು.

ಇದನ್ನೂ ಓದಿ: ಭಾರತದ ಟಾಪ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ ನಂಬರ್​ 1, ಟಾಪ್ 10 ರಲ್ಲಿ ಸಿಜೆಐ ಚಂದ್ರಚೂಡ್

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಪಾಕಿಸ್ತಾನದ ಭವಿಷ್ಯವು ಅದರ ಕಾರ್ಯಗಳು ಮತ್ತು ಆಯ್ಕೆಗಳ ಮೇಲೆ ಅನಿಶ್ಚಿತವಾಗಿದೆ ಎಂದು ಗಮನಿಸಿದ್ದರು. ಕ್ಷೀಣಿಸುತ್ತಿರುವ ವಿದೇಶೀ ವಿನಿಮಯ ಮೀಸಲು, ಹೆಚ್ಚಿನ ಹಣದುಬ್ಬರ ಮತ್ತು ಅದರ ಕರೆನ್ಸಿಯ ಮೌಲ್ಯ ಕುಸಿತ ಸೇರಿದಂತೆ ತನ್ನ ಆರ್ಥಿಕ ತೊಂದರೆಗಳಿಂದ ಹೊರಬರಲು ಒಂದು ಮಾರ್ಗವನ್ನು ಕಂಡುಕೊಳ್ಳುವುದು ಪಾಕಿಸ್ತಾನದ ಕರ್ತವ್ಯವಾಗಿದೆ ಎಂದು ಅವರು ಸಲಹೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Thu, 29 February 24

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ