AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Devi Shakti: ಅಫ್ಘಾನ್​​ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ‘ಆಪರೇಶನ್​ ದೇವಿ ಶಕ್ತಿ’ ಎಂದು ನಾಮಕರಣ

Kabul Airport: ಭಾನುವಾರ ಕಾಬೂಲ್​ನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಸೋಮವಾರದಿಂದ ಭಾರತ ತಮ್ಮ ದೇಶದ ಜನರನ್ನು ಅಲ್ಲಿಂದ ಕರೆದುಕೊಂಡು ಬರಲು ಶುರು ಮಾಡಿದೆ. ಸೋಮವಾರ 40 ಭಾರತೀಯರನ್ನು ಕಾಬೂಲ್ ವಿಮಾನ ನಿಲ್ದಾಣದಿಂದ ಏರ್​ಲಿಫ್ಟ್ ಮಾಡಲಾಗಿತ್ತು.

Operation Devi Shakti: ಅಫ್ಘಾನ್​​ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ‘ಆಪರೇಶನ್​ ದೇವಿ ಶಕ್ತಿ’ ಎಂದು ನಾಮಕರಣ
ಸ್ಥಳಾಂತರ ಪ್ರಕ್ರಿಯೆಯ ಚಿತ್ರ
TV9 Web
| Edited By: |

Updated on:Aug 24, 2021 | 2:55 PM

Share

ಉಗ್ರರ ವಶದಲ್ಲಿರುವ ಅಫ್ಘಾನಿಸ್ತಾನ (Afghanistan)ದಿಂದ ಭಾರತೀಯರನ್ನು ಮರಳಿ ದೇಶಕ್ಕೆ ಕರುವ ಕಾರ್ಯಾಚರಣೆ ಕಳೆದ ಸೋಮವಾರದಿಂದಲೂ ನಡೆಯುತ್ತಿದೆ.  ಹೀಗೆ ಅಫ್ಘಾನ್​ನ ಕಾಬೂಲ್​ ವಿಮಾನ ನಿಲ್ದಾಣದಿಂದ ಭಾರತೀಯರು ಮತ್ತು ಅಫ್ಘಾನ್​ನ ಅಲ್ಪಸಂಖ್ಯಾತರನ್ನು ಭಾರತಕ್ಕೆ ತರುವ ಕಾರ್ಯಾಚರಣೆಗೆ ಇದೀಗ ‘ಆಪರೇಶನ್​ ದೇವಿ ಶಕ್ತಿ (Operation Devi Shakti) ’ಎಂದು ಹೆಸರು ನೀಡಲಾಗಿದೆ.  ಟ್ವೀಟ್​ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈಶಂಕರ್​, ಅಫ್ಘಾನ್​ನಿಂದ ಭಾರತಕ್ಕೆ ಜನರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಗೆ ಆಪರೇಶನ್​ ದೇವಿ ಶಕ್ತಿ ಎಂದು ಇನ್ನು ಮುಂದೆ ಕರೆಯಲಾಗುತ್ತದೆ ಎಂದಿದ್ದಾರೆ. ಹಾಗೇ, ಇಂದು 78ಜನರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾಗಿ ಮಾಹಿತಿ ನೀಡಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರೊಂದಿಗೆ, ಅಲ್ಲಿನ ಅಲ್ಪಸಂಖ್ಯಾತ ಹಿಂದು ಮತ್ತು ಸಿಖ್​ ಸಮುದಾಯದವರನ್ನೂ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗುತ್ತಿದೆ. ಹಾಗೇ, ಇಂದು ಬೆಳಗ್ಗೆ 78 ಜನರ ಒಂದು ಬ್ಯಾಚ್​ ಕಾಬೂಲ್​ ಬಿಟ್ಟಿದ್ದು, ಅದು ತಜಕೀಸ್ತಾನದ ರಾಜಧಾನಿ ದುಶಾಂಬೆ ಮೂಲಕ ಭಾರತ ತಲುಪಲಿದೆ. ಈ ಬಗ್ಗೆ ಟ್ವೀಟ್ ಮಾಡಿದ ಎಸ್​.ಜೈಶಂಕರ್​, ಆಪರೇಶನ್​ ದೇವಿ ಶಕ್ತಿ ಮುಂದುವರಿಯುತ್ತಿದೆ. ಇಂದು 78 ಜನರ ಬ್ಯಾಚ್​ವೊಂದು ಕಾಬೂಲ್​ ಬಿಟ್ಟಿದೆ. ದುಶಾಂಬೆ ಮೂಲಕ ಆಗಮಿಸಲಿದೆ. ಸ್ಥಳಾಂತರ ಪ್ರಕ್ರಿಯೆ ನಡೆಸುತ್ತಿರುವ ಐಎಎಫ್​ ಎಂಸಿಸಿ, ಏರ್​ ಇಂಡಿಯಾ ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳಿಗೆ ಧನ್ಯವಾದಗಳು ಎಂದಿದ್ದಾರೆ. ಜೈಶಂಕರ್ ತಮ್ಮ ಟ್ವೀಟ್​ನಲ್ಲಿ ಆಪರೇಶನ್​ ದೇವಿ ಶಕ್ತಿ ಎಂದು ಉಲ್ಲೇಖಿಸಿದಾಗಲೇ, ಭಾರತ ಸರ್ಕಾರ ಹೀಗೊಂದು ಹೆಸರಿಟ್ಟಿದೆ ಎಂಬುದು ಗೊತ್ತಾಗಿದ್ದು.

ಭಾನುವಾರ ಕಾಬೂಲ್​ನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಸೋಮವಾರದಿಂದ ಭಾರತ ತಮ್ಮ ದೇಶದ ಜನರನ್ನು ಅಲ್ಲಿಂದ ಕರೆದುಕೊಂಡು ಬರಲು ಶುರು ಮಾಡಿದೆ. ಸೋಮವಾರ 40 ಭಾರತೀಯರನ್ನು ಕಾಬೂಲ್ ವಿಮಾನ ನಿಲ್ದಾಣದಿಂದ ಏರ್​ಲಿಫ್ಟ್ ಮಾಡಲಾಗಿತ್ತು. ಅಂದಿನಿಂದಲೂ ಕಾಬೂಲ್​ನಲ್ಲಿ ಭದ್ರತಾ ವ್ಯವಸ್ಥೆ ಹದಗೆಡುತ್ತಿದೆ. ಈ ಮಧ್ಯೆಯೂ ಭಾರತ ಇಲ್ಲಿಯವರೆಗೆ 800ಕ್ಕೂ ಹೆಚ್ಚು ಜನರನ್ನು ಅಫ್ಘಾನ್​ನಿಂದ ಕರೆದುಕೊಂಡು ಬಂದಿದೆ.

ಏರ್​ಪೋರ್ಟ್ ಹೊರಗೆ ಜನಸಂದಣಿ ಅಫ್ಘಾನಿಸ್ತಾನದಲ್ಲಿ ಇರುವ ವಿವಿಧ ದೇಶಗಳ ಜನರನ್ನು ಸ್ಥಳಾಂತರ ಮಾಡುವ ಕೆಲಸವನ್ನು ಆಯಾ ದೇಶಗಳು ಮಾಡುತ್ತಿವೆ. ಹಾಗೇ, ಅಫ್ಘಾನ್ ನಾಗರಿಕರು ಬೇರೆ ದೇಶಗಳಿಗೆ ಹೋಗಲು ಇಚ್ಛಿಸುವವರಿಗೂ ಕೈಲಾದ ಸಹಾಯ ಮಾಡುತ್ತಿವೆ. ಈ ಮಧ್ಯೆ ಉಗ್ರರ ಆಡಳಿತಕ್ಕೆ ಹೆದರಿ, ಅಫ್ಘಾನ್ ತೊರೆಯಲು ಸಾವಿರಾರು ಜನರು ಕಾಬೂಲ್​ ಏರ್​ಪೋರ್ಟ್​ ಹೊರಗೆ ಸೇರುತ್ತಿದ್ದಾರೆ. ಅನೇಕರು ಒಂದು ವಾರದಿಂದಲೂ ವಿಮಾನ ನಿಲ್ದಾಣದ ಹೊರಗಿನ ಆವರಣದಲ್ಲಿ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

Bay of Bengal Earthquake: ಬಂಗಾಳ ಕೊಲ್ಲಿಯಲ್ಲಿ ಭೂಕಂಪ; ಚೆನ್ನೈ ಭಾಗದಲ್ಲಿ ಕಂಪಿಸಿದ ನೆಲ

(India gave a name as operation Devi Shakti to the evacuation drive of Indian nationals)

Published On - 2:39 pm, Tue, 24 August 21

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌