AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ

ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 21, 2022 | 9:47 PM

Share

ದೆಹಲಿ:  ಭಾರತಕ್ಕೆ ಬರುವಾಗ ಏರ್ ಸುವಿಧಾ(Air Suvidha) ಪೋರ್ಟಲ್‌ನಲ್ಲಿ ಒಳಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಭರ್ತಿ ಮಾಡಬೇಕಾದ ಕೋವಿಡ್ ಲಸಿಕೆಗಾಗಿ (Covid vaccination) ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಕೆ ಇನ್ನು ಮುಂದೆ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಈ ನಿರ್ಧಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಇಂದು ಸಂಜೆ ನಾಗರಿಕ ವಿಮಾನಯಾನ ಸಚಿವಾಲಯದ ಈ ಬಗ್ಗೆ ಸೂಚನೆ ಹೊರಡಿಸಿದೆ. ಇದರ ಪ್ರಕಾರ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವ ಹೊತ್ತಿನಲ್ಲಿ ಜಾಗತಿಕವಾಗಿ ಮತ್ತು ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ನೀಡಿಕೆಯಲ್ಲಿ ಗಮನಾರ್ಹ ಪ್ರಗತಿಯನ್ನು ಮಾಡಲಾಗುತ್ತಿದೆ. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಂತರರಾಷ್ಟ್ರೀಯ ಪ್ರಯಾಣಿಕರ ಆಗಮನದ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಆದಾಗ್ಯೂ, ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿದ್ದರೆ ನಿಯಮವನ್ನು ಪರಿಶೀಲಿಸಬಹುದು ಎಂದು ಕೇಂದ್ರ ಹೇಳಿದೆ.

ಅಂತಾರಾಷ್ಟ್ರೀಯ ಪ್ರಯಾಣದ ಕುರಿತ ಇತ್ತೀಚಿನ ಮಾರ್ಗಸೂಚಿಗಳು ಈ ಕೆಳಗಿನಂತಿವೆ

1. ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿರಬೇಕು.

2. ಪ್ರಯಾಣದ ಸಮಯದಲ್ಲಿ ಕೋವಿಡ್-19 ರೋಗಲಕ್ಷಣಗಳನ್ನು ಹೊಂದಿರುವ ಯಾವುದೇ ಪ್ರಯಾಣಿಕರನ್ನು ಪ್ರಮಾಣಿತ ಪ್ರೋಟೋಕಾಲ್ ಪ್ರಕಾರ ಪ್ರತ್ಯೇಕಿಸಲಾಗುತ್ತದೆ.

3. ಸೋಂಕಿತ ವ್ಯಕ್ತಿ ಮಾಸ್ಕ್ ಧರಿಸಿರಬೇಕು, ವಿಮಾನ/ಪ್ರಯಾಣದಲ್ಲಿ ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ನಂತರದ ಚಿಕಿತ್ಸೆಗಾಗಿ ಪ್ರತ್ಯೇಕ ಸೌಲಭ್ಯಕ್ಕೆ ಸ್ಥಳಾಂತರಿಸಬೇಕು.

4. ಸಾಮಾಜಿಕ ಅಂತರವನ್ನು ಅನುಸರಿಸಿ ಡಿ-ಬೋರ್ಡಿಂಗ್ ಮಾಡಬೇಕು.

5. ಪ್ರವೇಶದ ಸ್ಥಳದಲ್ಲಿ ಇರುವ ಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ಅನ್ನು ಮಾಡಬೇಕು.

6. ಸ್ಕ್ರೀನಿಂಗ್ ಸಮಯದಲ್ಲಿ ರೋಗಲಕ್ಷಣಗಳು ಕಂಡುಬರುವ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲಾಗುತ್ತದೆ, ಆರೋಗ್ಯ ಪ್ರೋಟೋಕಾಲ್ ಪ್ರಕಾರ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.

7. ಎಲ್ಲಾ ಪ್ರಯಾಣಿಕರು ಆಗಮನದ ನಂತರ ತಮ್ಮ ಆರೋಗ್ಯವನ್ನು ಸ್ವಯಂ ಮೇಲ್ವಿಚಾರಣೆ ಮಾಡಬೇಕು ಮತ್ತು ಹತ್ತಿರದ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಬೇಕು ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ (1075) ಅಥವಾ ರಾಜ್ಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು.

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?