AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ

ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿ ಪರಿಷ್ಕರಣೆ: ಏರ್ ಸುವಿಧಾ ಫಾರ್ಮ್ ಸಲ್ಲಿಕೆ ಅಗತ್ಯವಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 21, 2022 | 9:47 PM

Share

ದೆಹಲಿ:  ಭಾರತಕ್ಕೆ ಬರುವಾಗ ಏರ್ ಸುವಿಧಾ(Air Suvidha) ಪೋರ್ಟಲ್‌ನಲ್ಲಿ ಒಳಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಭರ್ತಿ ಮಾಡಬೇಕಾದ ಕೋವಿಡ್ ಲಸಿಕೆಗಾಗಿ (Covid vaccination) ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಕೆ ಇನ್ನು ಮುಂದೆ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಈ ನಿರ್ಧಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಇಂದು ಸಂಜೆ ನಾಗರಿಕ ವಿಮಾನಯಾನ ಸಚಿವಾಲಯದ ಈ ಬಗ್ಗೆ ಸೂಚನೆ ಹೊರಡಿಸಿದೆ. ಇದರ ಪ್ರಕಾರ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವ ಹೊತ್ತಿನಲ್ಲಿ ಜಾಗತಿಕವಾಗಿ ಮತ್ತು ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ನೀಡಿಕೆಯಲ್ಲಿ ಗಮನಾರ್ಹ ಪ್ರಗತಿಯನ್ನು ಮಾಡಲಾಗುತ್ತಿದೆ. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಂತರರಾಷ್ಟ್ರೀಯ ಪ್ರಯಾಣಿಕರ ಆಗಮನದ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಆನ್‌ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಸ್ವಯಂ ಘೋಷಣೆಯ ಫಾರ್ಮ್ ಸಲ್ಲಿಸುವುದನ್ನು ನಿಲ್ಲಿಸಲಾಗಿದೆ.

ಆದಾಗ್ಯೂ, ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿದ್ದರೆ ನಿಯಮವನ್ನು ಪರಿಶೀಲಿಸಬಹುದು ಎಂದು ಕೇಂದ್ರ ಹೇಳಿದೆ.

ಅಂತಾರಾಷ್ಟ್ರೀಯ ಪ್ರಯಾಣದ ಕುರಿತ ಇತ್ತೀಚಿನ ಮಾರ್ಗಸೂಚಿಗಳು ಈ ಕೆಳಗಿನಂತಿವೆ

1. ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿರಬೇಕು.

2. ಪ್ರಯಾಣದ ಸಮಯದಲ್ಲಿ ಕೋವಿಡ್-19 ರೋಗಲಕ್ಷಣಗಳನ್ನು ಹೊಂದಿರುವ ಯಾವುದೇ ಪ್ರಯಾಣಿಕರನ್ನು ಪ್ರಮಾಣಿತ ಪ್ರೋಟೋಕಾಲ್ ಪ್ರಕಾರ ಪ್ರತ್ಯೇಕಿಸಲಾಗುತ್ತದೆ.

3. ಸೋಂಕಿತ ವ್ಯಕ್ತಿ ಮಾಸ್ಕ್ ಧರಿಸಿರಬೇಕು, ವಿಮಾನ/ಪ್ರಯಾಣದಲ್ಲಿ ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ನಂತರದ ಚಿಕಿತ್ಸೆಗಾಗಿ ಪ್ರತ್ಯೇಕ ಸೌಲಭ್ಯಕ್ಕೆ ಸ್ಥಳಾಂತರಿಸಬೇಕು.

4. ಸಾಮಾಜಿಕ ಅಂತರವನ್ನು ಅನುಸರಿಸಿ ಡಿ-ಬೋರ್ಡಿಂಗ್ ಮಾಡಬೇಕು.

5. ಪ್ರವೇಶದ ಸ್ಥಳದಲ್ಲಿ ಇರುವ ಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ಅನ್ನು ಮಾಡಬೇಕು.

6. ಸ್ಕ್ರೀನಿಂಗ್ ಸಮಯದಲ್ಲಿ ರೋಗಲಕ್ಷಣಗಳು ಕಂಡುಬರುವ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲಾಗುತ್ತದೆ, ಆರೋಗ್ಯ ಪ್ರೋಟೋಕಾಲ್ ಪ್ರಕಾರ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.

7. ಎಲ್ಲಾ ಪ್ರಯಾಣಿಕರು ಆಗಮನದ ನಂತರ ತಮ್ಮ ಆರೋಗ್ಯವನ್ನು ಸ್ವಯಂ ಮೇಲ್ವಿಚಾರಣೆ ಮಾಡಬೇಕು ಮತ್ತು ಹತ್ತಿರದ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಬೇಕು ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ (1075) ಅಥವಾ ರಾಜ್ಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!