AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on:Dec 09, 2020 | 7:57 PM

Share

ನವದೆಹಲಿ: ಸಾರ್ವಜನಿಕರಿಗೆ ಉಚಿತ ವೈಫೈ ನೀಡಲು ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಒತ್ತು ನೀಡುತ್ತಾ ಬಂದಿದೆ. ಇದರ ಭಾಗವಾಗಿ ಈಗಾಗಲೇ ಸಾಕಷ್ಟು ರೈಲ್ವೆ ನಿಲ್ದಾಣ, ಬಸ್​ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಉಚಿತ ವೈಫೈ ಸೇವೆ ಒದಗಿಸುತ್ತಿದೆ. ಈಗ ಕೇಂದ್ರ ಸರ್ಕಾರ ದೇಶದಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಈ ಮೂಲಕ ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದೆ.

ಪ್ರಧಾನ ಮಂತ್ರಿ ವೈಫೈ ಆ್ಯಕ್ಸೆಸ್​ ನೆಟ್ವರ್ಕ್​ (PM WANI) ಸ್ಥಾಪನೆಗೆ  ದೂರ ಸಂಪರ್ಕ ಇಲಾಖೆ ಮನವಿ ಇಟ್ಟಿತ್ತು. ಇದಕ್ಕೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಡೇಟಾ ಕೇಂದ್ರಗಳನ್ನು ಸರ್ಕಾರ ಆರಂಭಿಸಲಿದೆ. ಸಾರ್ವಜನಿಕರಿಗೆ ವೈಫೈ ಸೌಲಭ್ಯವು ಪಬ್ಲಿಕ್ ಡೇಟಾ ಆಫೀಸ್ (PDO), ಪಬ್ಲಿಕ್ ಡೇಟಾ ಆಫೀಸ್ ಅಗ್ರಿಗೇಟರ್ಸ್ ಮತ್ತು ಆ್ಯಪ್​ ಪ್ರೊವೈಡರ್​ಗಳ ಮೂಲಕ ಸಿಗಲಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್ ತಿಳಿಸಿದರು.

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ. ಕೊರೊನಾ ವೈರಸ್​ ಇರುವುದರಿಂದ ಅನೇಕ ಕಡೆಗಳಲ್ಲಿ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ವೇಗದ ಇಂಟರ್​ನೆಟ್​ ಕೊಡುವ ಅನಿವಾರ್ಯತೆ ಎಲ್ಲ ಬ್ರಾಡ್​ಬ್ರ್ಯಾಂಡ್​ ಸಂಸ್ಥೆಗಳಿಗೆ ಎದುರಾಗಿದೆ. ಇದರ ಜೊತೆಗೆ ಮತ್ತಷ್ಟು ಡೇಟಾ ಕೇಂದ್ರಗಳನ್ನು ಸ್ಥಾಪಿಸಿದರೆ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ ಎಂಬುದು ಕೇಂದ್ರದ ಚಿಂತನೆ.

ಕೊರೊನಾ ಸಂಕಷ್ಟದ ನಡುವೆ ಚಿಗುರಿಕೊಂಡ ಸ್ಥಳೀಯ ಉದ್ಯಮಗಳಿವು!

Published On - 7:56 pm, Wed, 9 December 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ