AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on:Dec 09, 2020 | 7:57 PM

Share

ನವದೆಹಲಿ: ಸಾರ್ವಜನಿಕರಿಗೆ ಉಚಿತ ವೈಫೈ ನೀಡಲು ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಒತ್ತು ನೀಡುತ್ತಾ ಬಂದಿದೆ. ಇದರ ಭಾಗವಾಗಿ ಈಗಾಗಲೇ ಸಾಕಷ್ಟು ರೈಲ್ವೆ ನಿಲ್ದಾಣ, ಬಸ್​ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಉಚಿತ ವೈಫೈ ಸೇವೆ ಒದಗಿಸುತ್ತಿದೆ. ಈಗ ಕೇಂದ್ರ ಸರ್ಕಾರ ದೇಶದಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಈ ಮೂಲಕ ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದೆ.

ಪ್ರಧಾನ ಮಂತ್ರಿ ವೈಫೈ ಆ್ಯಕ್ಸೆಸ್​ ನೆಟ್ವರ್ಕ್​ (PM WANI) ಸ್ಥಾಪನೆಗೆ  ದೂರ ಸಂಪರ್ಕ ಇಲಾಖೆ ಮನವಿ ಇಟ್ಟಿತ್ತು. ಇದಕ್ಕೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಡೇಟಾ ಕೇಂದ್ರಗಳನ್ನು ಸರ್ಕಾರ ಆರಂಭಿಸಲಿದೆ. ಸಾರ್ವಜನಿಕರಿಗೆ ವೈಫೈ ಸೌಲಭ್ಯವು ಪಬ್ಲಿಕ್ ಡೇಟಾ ಆಫೀಸ್ (PDO), ಪಬ್ಲಿಕ್ ಡೇಟಾ ಆಫೀಸ್ ಅಗ್ರಿಗೇಟರ್ಸ್ ಮತ್ತು ಆ್ಯಪ್​ ಪ್ರೊವೈಡರ್​ಗಳ ಮೂಲಕ ಸಿಗಲಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್ ತಿಳಿಸಿದರು.

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ. ಕೊರೊನಾ ವೈರಸ್​ ಇರುವುದರಿಂದ ಅನೇಕ ಕಡೆಗಳಲ್ಲಿ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ವೇಗದ ಇಂಟರ್​ನೆಟ್​ ಕೊಡುವ ಅನಿವಾರ್ಯತೆ ಎಲ್ಲ ಬ್ರಾಡ್​ಬ್ರ್ಯಾಂಡ್​ ಸಂಸ್ಥೆಗಳಿಗೆ ಎದುರಾಗಿದೆ. ಇದರ ಜೊತೆಗೆ ಮತ್ತಷ್ಟು ಡೇಟಾ ಕೇಂದ್ರಗಳನ್ನು ಸ್ಥಾಪಿಸಿದರೆ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ ಎಂಬುದು ಕೇಂದ್ರದ ಚಿಂತನೆ.

ಕೊರೊನಾ ಸಂಕಷ್ಟದ ನಡುವೆ ಚಿಗುರಿಕೊಂಡ ಸ್ಥಳೀಯ ಉದ್ಯಮಗಳಿವು!

Published On - 7:56 pm, Wed, 9 December 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ