AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on:Dec 09, 2020 | 7:57 PM

Share

ನವದೆಹಲಿ: ಸಾರ್ವಜನಿಕರಿಗೆ ಉಚಿತ ವೈಫೈ ನೀಡಲು ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಒತ್ತು ನೀಡುತ್ತಾ ಬಂದಿದೆ. ಇದರ ಭಾಗವಾಗಿ ಈಗಾಗಲೇ ಸಾಕಷ್ಟು ರೈಲ್ವೆ ನಿಲ್ದಾಣ, ಬಸ್​ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಉಚಿತ ವೈಫೈ ಸೇವೆ ಒದಗಿಸುತ್ತಿದೆ. ಈಗ ಕೇಂದ್ರ ಸರ್ಕಾರ ದೇಶದಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಈ ಮೂಲಕ ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದೆ.

ಪ್ರಧಾನ ಮಂತ್ರಿ ವೈಫೈ ಆ್ಯಕ್ಸೆಸ್​ ನೆಟ್ವರ್ಕ್​ (PM WANI) ಸ್ಥಾಪನೆಗೆ  ದೂರ ಸಂಪರ್ಕ ಇಲಾಖೆ ಮನವಿ ಇಟ್ಟಿತ್ತು. ಇದಕ್ಕೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಡೇಟಾ ಕೇಂದ್ರಗಳನ್ನು ಸರ್ಕಾರ ಆರಂಭಿಸಲಿದೆ. ಸಾರ್ವಜನಿಕರಿಗೆ ವೈಫೈ ಸೌಲಭ್ಯವು ಪಬ್ಲಿಕ್ ಡೇಟಾ ಆಫೀಸ್ (PDO), ಪಬ್ಲಿಕ್ ಡೇಟಾ ಆಫೀಸ್ ಅಗ್ರಿಗೇಟರ್ಸ್ ಮತ್ತು ಆ್ಯಪ್​ ಪ್ರೊವೈಡರ್​ಗಳ ಮೂಲಕ ಸಿಗಲಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್ ತಿಳಿಸಿದರು.

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ. ಕೊರೊನಾ ವೈರಸ್​ ಇರುವುದರಿಂದ ಅನೇಕ ಕಡೆಗಳಲ್ಲಿ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ವೇಗದ ಇಂಟರ್​ನೆಟ್​ ಕೊಡುವ ಅನಿವಾರ್ಯತೆ ಎಲ್ಲ ಬ್ರಾಡ್​ಬ್ರ್ಯಾಂಡ್​ ಸಂಸ್ಥೆಗಳಿಗೆ ಎದುರಾಗಿದೆ. ಇದರ ಜೊತೆಗೆ ಮತ್ತಷ್ಟು ಡೇಟಾ ಕೇಂದ್ರಗಳನ್ನು ಸ್ಥಾಪಿಸಿದರೆ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ ಎಂಬುದು ಕೇಂದ್ರದ ಚಿಂತನೆ.

ಕೊರೊನಾ ಸಂಕಷ್ಟದ ನಡುವೆ ಚಿಗುರಿಕೊಂಡ ಸ್ಥಳೀಯ ಉದ್ಯಮಗಳಿವು!

Published On - 7:56 pm, Wed, 9 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್