AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ.

ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದ ಕೇಂದ್ರ ಸರ್ಕಾರ; ಏನಿದು ಹೊಸ ಯೋಜನೆ?
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 09, 2020 | 7:57 PM

Share

ನವದೆಹಲಿ: ಸಾರ್ವಜನಿಕರಿಗೆ ಉಚಿತ ವೈಫೈ ನೀಡಲು ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಒತ್ತು ನೀಡುತ್ತಾ ಬಂದಿದೆ. ಇದರ ಭಾಗವಾಗಿ ಈಗಾಗಲೇ ಸಾಕಷ್ಟು ರೈಲ್ವೆ ನಿಲ್ದಾಣ, ಬಸ್​ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಉಚಿತ ವೈಫೈ ಸೇವೆ ಒದಗಿಸುತ್ತಿದೆ. ಈಗ ಕೇಂದ್ರ ಸರ್ಕಾರ ದೇಶದಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ. ಈ ಮೂಲಕ ದೇಶದಲ್ಲಿ ಹೊಸ ವೈಫೈ ಕ್ರಾಂತಿಗೆ ನಾಂದಿ ಹಾಡಿದೆ.

ಪ್ರಧಾನ ಮಂತ್ರಿ ವೈಫೈ ಆ್ಯಕ್ಸೆಸ್​ ನೆಟ್ವರ್ಕ್​ (PM WANI) ಸ್ಥಾಪನೆಗೆ  ದೂರ ಸಂಪರ್ಕ ಇಲಾಖೆ ಮನವಿ ಇಟ್ಟಿತ್ತು. ಇದಕ್ಕೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಡೇಟಾ ಕೇಂದ್ರಗಳನ್ನು ಸರ್ಕಾರ ಆರಂಭಿಸಲಿದೆ. ಸಾರ್ವಜನಿಕರಿಗೆ ವೈಫೈ ಸೌಲಭ್ಯವು ಪಬ್ಲಿಕ್ ಡೇಟಾ ಆಫೀಸ್ (PDO), ಪಬ್ಲಿಕ್ ಡೇಟಾ ಆಫೀಸ್ ಅಗ್ರಿಗೇಟರ್ಸ್ ಮತ್ತು ಆ್ಯಪ್​ ಪ್ರೊವೈಡರ್​ಗಳ ಮೂಲಕ ಸಿಗಲಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್ ತಿಳಿಸಿದರು.

ಸಾರ್ವಜನಿಕರಿಗೆ ವೈಫೈ ಸೇವೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳುವುದು ಈ ಯೊಜನೆಯ ಮೂಲ ಉದ್ದೇಶ. ಇದರ ಜೊತೆಗೆ ವ್ಯಾಪಾರ ಸ್ನೇಹಿ ಪರಿಸರ ನಿರ್ಮಾಣ ಮಾಡುವುದು ಕೂಡ ಸರ್ಕಾರದ ಗುರಿ ಆಗಿದೆ. ಕೊರೊನಾ ವೈರಸ್​ ಇರುವುದರಿಂದ ಅನೇಕ ಕಡೆಗಳಲ್ಲಿ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ವೇಗದ ಇಂಟರ್​ನೆಟ್​ ಕೊಡುವ ಅನಿವಾರ್ಯತೆ ಎಲ್ಲ ಬ್ರಾಡ್​ಬ್ರ್ಯಾಂಡ್​ ಸಂಸ್ಥೆಗಳಿಗೆ ಎದುರಾಗಿದೆ. ಇದರ ಜೊತೆಗೆ ಮತ್ತಷ್ಟು ಡೇಟಾ ಕೇಂದ್ರಗಳನ್ನು ಸ್ಥಾಪಿಸಿದರೆ ಜನಸಾಮಾನ್ಯರಿಗೆ ಸಹಕಾರಿಯಾಗಲಿದೆ ಎಂಬುದು ಕೇಂದ್ರದ ಚಿಂತನೆ.

ಕೊರೊನಾ ಸಂಕಷ್ಟದ ನಡುವೆ ಚಿಗುರಿಕೊಂಡ ಸ್ಥಳೀಯ ಉದ್ಯಮಗಳಿವು!

Published On - 7:56 pm, Wed, 9 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!