AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ

ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 9:29 PM

Share

ದೆಹಲಿ: 2021ರ ಹಣಕಾಸು ವರ್ಷದಲ್ಲಿ ಭಾರತ ಶೇ 11.5 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂಗಳವಾರ ಹೇಳಿದೆ. ಕೊರೊನಾ ಸೋಂಕಿನ ಮಧ್ಯೆಯೂ ಈ ವರ್ಷ ಎರಡಂಕಿ ಬೆಳವಣಿಗೆ ದಾಖಲಿಸಲಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ ಆಗಿದೆ ಎಂದು ಐಎಂಎಫ್ ಹೇಳಿದೆ.

ಕೊರೊನಾ ವೈರಸ್​ನಿಂದಾಗಿ 2020ರಲ್ಲಿ ದೇಶದ ಅಭಿವೃದ್ಧಿ ಕುಂಟಿತವಾಗಿತ್ತು. ಲಾಕ್​ಡೌನ್​ನಿಂದ ದೇಶದ ಆರ್ಥಿಕತೆ ಸಂಪೂರ್ಣವಾಗಿ ನೆಲಕಚ್ಚಿತ್ತು. ಆದರೆ, ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಭಾರತದ ನಂತರ ಚೀನಾ ಇದೆ. ಈ ದೇಶ 2021ರಲ್ಲಿ ಶೇ. 8.1 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ. ಉಳಿದಂತೆ ಸ್ಪೇನ್​ (ಶೇ 5.9), ಫ್ರಾನ್ಸ್​ (ಶೇ 5.5) ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಆರ್ಥಿಕತೆಗೆ ಚೇತರಿಕೆ ನೀಡಲು ಭಾರತ ಸಾಕಷ್ಟು ಕ್ರಮ ಕೈಗೊಂಡಿದೆ. ಇದರಿಂದ ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂದು ಐಎಂಎಫ್​ ಹೇಳಿದೆ.

ಕೇಂದ್ರ ಬಜೆಟ್ 2021-22: ಚೇತರಿಸಿಕೊಳ್ಳುತ್ತಾ ಆರ್ಥಿಕತೆ? ದೇಶದ ಜನರ ನಿರೀಕ್ಷೆಗಳೇನು?

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ