Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದೇಶಗಳನ್ನು ಆಹ್ವಾನಿಸಲು ನಿರ್ಧರಿಸಿದ ಬ್ರಿಕ್ಸ್; ಇದು ಗುಂಪನ್ನು ಬಲಪಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ವಿಸ್ತರಣೆಯನ್ನು ಭಾರತ ಯಾವಾಗಲೂ ಸಂಪೂರ್ಣವಾಗಿ ಬೆಂಬಲಿಸುತ್ತದೆ.ಹೊಸ ಸದಸ್ಯರು ಸಂಸ್ಥೆಯನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂದು ನಂಬುತ್ತೇನೆ ಎಂದಿದ್ದಾರೆ. ವಿಸ್ತರಣಾ ಪ್ರಕ್ರಿಯೆಯಲ್ಲಿ ಭಾರತದ ಪ್ರಯತ್ನಗಳು ಪಾಲುದಾರರ ಸೇರ್ಪಡೆಯ ಮೇಲೆ ಕೇಂದ್ರೀಕರಿಸಿದೆ ಎಂದು ವಿಷಯದ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ಭಾರತವು ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿಲ್ಲದ ಹೊಸ ಪ್ರವೇಶಗಳಲ್ಲಿ ಇಥಿಯೋಪಿಯಾ ಮಾತ್ರ ಒಂದಾಗಿದೆ.

6 ದೇಶಗಳನ್ನು ಆಹ್ವಾನಿಸಲು ನಿರ್ಧರಿಸಿದ ಬ್ರಿಕ್ಸ್;  ಇದು ಗುಂಪನ್ನು ಬಲಪಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 24, 2023 | 3:27 PM

ದೆಹಲಿ ಆಗಸ್ಟ್ 24: ಬ್ರಿಕ್ಸ್ ಗುಂಪು (BRICS) ಗುರುವಾರ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಅನ್ನು ಗುಂಪಿನ ಸದಸ್ಯರಾಗಲು ಆಹ್ವಾನಿಸಿದೆ. 17 ವರ್ಷದಿಂದ ಇರುವ ಈ ಗುಂಪಿನ ನಾಯಕರು ತತ್ವಗಳು ಮತ್ತು ಮಾನದಂಡಗಳನ್ನು ಒಪ್ಪಿಕೊಂಡ ನಂತರ ಈ ವಿಸ್ತರಣೆ ಆಗಲಿದೆ. 2010 ರಿಂದ ದಕ್ಷಿಣ ಆಫ್ರಿಕಾವು(South Africa) ಬ್ರಿಕ್ಸ್‌ನ ಐದನೇ ಸದಸ್ಯರಾದ ನಂತರ ಇದು ಗುಂಪಿನ ಮೊದಲ ವಿಸ್ತರಣೆಯಾಗಿದೆ.

ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ಗುಂಪಿನ ಪ್ರಸ್ತುತ ಅಧ್ಯಕ್ಷರಾದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರು ಬ್ರೆಜಿಲ್, ಭಾರತ ಮತ್ತು ಚೀನಾದ ನಾಯಕರು ಉಪಸ್ಥಿತರಿದ್ದ ಸುದ್ದಿಗೋಷ್ಠಿಯಲ್ಲಿ ವಿಸ್ತರಣೆಯನ್ನು ಘೋಷಿಸಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಇದರಲ್ಲಿ ಭಾಗಿಯಾಗಿದ್ದಾರೆ.

ಬ್ರಿಕ್ಸ್ ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಪೂರ್ಣ ಸದಸ್ಯರಾಗಲು ಆಹ್ವಾನಿಸುತ್ತಿದೆ ಎಂದು ರಾಮಾಫೋಸಾ ಹೇಳಿದರು. ಅವರ ಸದಸ್ಯತ್ವವು ಜನವರಿ 1, 2024 ರಿಂದ ಜಾರಿಗೆ ಬರಲಿದೆ ಎಂದು ಅವರು ಹೇಳಿದರು.

ಬ್ರಿಕ್ಸ್ ವೈವಿಧ್ಯಮಯ ದೃಷ್ಟಿಕೋನಗಳನ್ನು ಹೊಂದಿರುವ ದೇಶಗಳ ಸಮಾನ ಪಾಲುದಾರಿಕೆಯಾಗಿದೆ. ಗುಂಪುಗಳ ವಿಸ್ತರಣೆಗೆ ಮಾರ್ಗದರ್ಶಿ ತತ್ವಗಳು ಮತ್ತು ಮಾನದಂಡಗಳ ಮೇಲೆ ಸದಸ್ಯರು ಒಮ್ಮತ ಸೂಚಿಸಿದ್ದಾರೆ. ಮೊದಲ ಹಂತದ ವಿಸ್ತರಣೆ ಬಗ್ಗೆಯೂ ಒಮ್ಮತ ಮೂಡಿದ್ದು, ಮುಂದಿನ ಹಂತಗಳಲ್ಲಿ ಸದಸ್ಯರು ಕೆಲಸ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ವಿಸ್ತರಣೆಯನ್ನು ಭಾರತ ಯಾವಾಗಲೂ ಸಂಪೂರ್ಣವಾಗಿ ಬೆಂಬಲಿಸುತ್ತದೆ.ಹೊಸ ಸದಸ್ಯರು ಸಂಸ್ಥೆಯನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂದು ನಂಬುತ್ತೇನೆ ಎಂದಿದ್ದಾರೆ.

ಈ 3 ದಿನಗಳ ಸಭೆಯಲ್ಲಿ, ಬಹಳಷ್ಟು ಸಕಾರಾತ್ಮಕ ಫಲಿತಾಂಶಗಳು ಹೊರಬಂದಿವೆ ಎಂದು ನನಗೆ ಖುಷಿಯಾಗಿದೆ. ಬ್ರಿಕ್ಸ್‌ನ ಸದಸ್ಯರ ವಿಸ್ತರಣೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ. ನಮ್ಮ ತಂಡಗಳು ಬ್ರಿಕ್ಸ್ ವಿಸ್ತರಣೆಗೆ ಮಾರ್ಗದರ್ಶಿ ಸೂತ್ರಗಳು, ಮಾನದಂಡಗಳು,  ಕಾರ್ಯವಿಧಾನಗಳನ್ನು ಒಟ್ಟಿಗೆ ಒಪ್ಪಿಕೊಂಡಿರುವುದು ನನಗೆ ಸಂತೋಷವಾಗಿದೆ. ಬ್ರಿಕ್ಸ್‌ನ ವಿಸ್ತರಣೆ ಮತ್ತು ಆಧುನೀಕರಣವು ವಿಶ್ವದ ಸಂಸ್ಥೆಗಳು ಬದಲಾಗುತ್ತಿರುವ ಸಮಯಕ್ಕೆ ಒಗ್ಗಿಕೊಳ್ಳಬೇಕಾದ ಸೂಚನೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಸ್ತರಣಾ ಪ್ರಕ್ರಿಯೆಯಲ್ಲಿ ಭಾರತದ ಪ್ರಯತ್ನಗಳು ಪಾಲುದಾರರ ಸೇರ್ಪಡೆಯ ಮೇಲೆ ಕೇಂದ್ರೀಕರಿಸಿದೆ ಎಂದು ವಿಷಯದ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ಭಾರತವು ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿಲ್ಲದ ಹೊಸ ಪ್ರವೇಶಗಳಲ್ಲಿ ಇಥಿಯೋಪಿಯಾ ಮಾತ್ರ ಒಂದಾಗಿದೆ.

ಎಲ್ಲಾ ಆರು ಹೊಸ ಸೇರ್ಪಡೆದಾರರು ಚೀನಾದ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ (BRI) ಗೆ ಸೇರಲು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ, ಭಾರತ ಇದರ ಭಾಗವಾಗಿಲ್ಲ.

ಕರೆನ್ಸಿ ಸ್ವಾಪ್ ಲೈನ್ ಮೂಲಕ ಎರವಲು ಪಡೆದ ಹಣದ ಭಾಗವನ್ನು ಚೀನಾಕ್ಕೆ ಮರುಪಾವತಿಸಲು ಅರ್ಜೆಂಟೀನಾ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) $ 7.5 ಬಿಲಿಯನ್ ವಿತರಣೆಯನ್ನು ಪಡೆಯಲು ಯೋಜಿಸಿದೆ ಎಂದು ರಾಯಿಟರ್ಸ್ ಈ ವಾರ ವರದಿ ಮಾಡಿದೆ. ಇಥಿಯೋಪಿಯಾವು ಚೀನಾಕ್ಕೆ US$13.7 ಶತಕೋಟಿಯ ಅಂದಾಜು ಸಾಲವನ್ನು ಹೊಂದಿದೆ. ಅದರಲ್ಲಿ ಹೆಚ್ಚಿನವು 2000-2021ರ ಅವಧಿಯಲ್ಲಿ ಚೀನಾ ಎಕ್ಸಿಮ್ ಬ್ಯಾಂಕ್‌ನಿಂದ ಮುಂದುವರೆದಿದೆ.

ಬ್ರಿಕ್ಸ್‌ನಲ್ಲಿ ಚಂದ್ರಯಾನ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಚಂದ್ರಯಾನ-3 ಯಶಸ್ಸನ್ನು ಪ್ರಸ್ತಾಪಿಸಿದ್ದಾರೆ. ಬುಧವಾರ, ಚಂದ್ರಯಾನ-3ದ ವಿಕ್ರಮ್ ಲ್ಯಾಂಡರ್ ಸಂಜೆ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವ ಮೂಲಕ ಇತಿಹಾಸವನ್ನು ಬರೆದಿದೆ.ಈ ಮೈಲಿಗಲ್ಲಿನ ಬಗ್ಗೆ ಅತ್ಯಂತ ಹೆಮ್ಮೆಯಿಂದ ಮಾತನಾಡಿದ ಪ್ರಧಾನಿ, “ನಿನ್ನೆ ಭಾರತದ ಚಂದ್ರಯಾನ-3 ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿತು. ಇದು ಭಾರತಕ್ಕೆ ಮಾತ್ರವಲ್ಲದೆ ಜಾಗತಿಕ ವೈಜ್ಞಾನಿಕ ಸಮುದಾಯಕ್ಕೂ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದ್ದಾರೆ.

ಈ ಸಾಧನೆಯನ್ನು ಎಲ್ಲಾ ಮಾನವೀಯತೆಯ ಸಾಧನೆ ಎಂದು ಒಪ್ಪಿಕೊಳ್ಳುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಭಾರತ, ಅದರ ಜನರು ಮತ್ತು ನಮ್ಮ ವಿಜ್ಞಾನಿಗಳ ಪರವಾಗಿ ಈ ಐತಿಹಾಸಿಕ ಕ್ಷಣದಲ್ಲಿ ಹಾರೈಸಿದ ವಿಜ್ಞಾನಿಗಳು ಮತ್ತು ವಿಶ್ವದ ವೈಜ್ಞಾನಿಕ ಸಮುದಾಯಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Thu, 24 August 23

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ