AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಅತೀ ಹೆಚ್ಚು ಕ್ಷಯರೋಗ ಪ್ರಕರಣಗಳಿರುವ ದೇಶ ಭಾರತ: ವಿಶ್ವ ಆರೋಗ್ಯ ಸಂಸ್ಥೆ ವರದಿ

30 ರಾಷ್ಟ್ರಗಳು  ವಿಶ್ವದ ಶೇ.87 ರಷ್ಟು ಟಿಬಿ ಪ್ರಕರಣಗಳಿಗೆ  ಕಾರಣವೆಂದು ವರದಿ ಬಹಿರಂಗಪಡಿಸಿದೆ. ಇಂಡೋನೇಷ್ಯಾ (ಶೇ 10), ಚೀನಾ (ಶೇ 7.1), ಫಿಲಿಪೈನ್ಸ್ (ಶೇ 7.0), ಪಾಕಿಸ್ತಾನ (ಶೇ 5.7), ನೈಜೀರಿಯಾ (ಶೇ 4.5), ಬಾಂಗ್ಲಾದೇಶ (ಶೇ 3.6), ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (ಶೇ 3.0) ನಂತರದ ಸ್ಥಾನದಲ್ಲಿದೆ.

ಜಗತ್ತಿನಲ್ಲೇ ಅತೀ ಹೆಚ್ಚು ಕ್ಷಯರೋಗ ಪ್ರಕರಣಗಳಿರುವ ದೇಶ ಭಾರತ: ವಿಶ್ವ ಆರೋಗ್ಯ ಸಂಸ್ಥೆ ವರದಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Nov 09, 2023 | 2:34 PM

ದೆಹಲಿ  ನವೆಂಬರ್ 09:  2022 ರಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಕ್ಷಯರೋಗ (Tuberculosis -TB) ಪ್ರಕರಣಗಳನ್ನು ಹೊಂದಿತ್ತು ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಜಾಗತಿಕ ಟಿಬಿ ವರದಿ 2023 ಹೇಳುತ್ತದೆ. ವಿಶ್ವದ ಒಟ್ಟು ಟಿಬಿ ಪ್ರಕರಣಗಳಲ್ಲಿ ಭಾರತದಲ್ಲಿ ಶೇಕಡಾ 27 ರಷ್ಟು ಪ್ರಕರಣಗಳಿವೆ. 28.2 ಲಕ್ಷ ಪ್ರಕರಣಗಳಿದ್ದು, ಅವುಗಳಲ್ಲಿ ಶೇ 12ರಷ್ಟು (3,42,000 ಜನರು) ಈ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ ಎಂದು ಮಂಗಳವಾರ ಬಿಡುಗಡೆಯಾದ ವರದಿ ತಿಳಿಸಿದೆ.

30 ರಾಷ್ಟ್ರಗಳು  ವಿಶ್ವದ ಶೇ.87 ರಷ್ಟು ಟಿಬಿ ಪ್ರಕರಣಗಳಿಗೆ  ಕಾರಣವೆಂದು ವರದಿ ಬಹಿರಂಗಪಡಿಸಿದೆ. ಇಂಡೋನೇಷ್ಯಾ (ಶೇ 10), ಚೀನಾ (ಶೇ 7.1), ಫಿಲಿಪೈನ್ಸ್ (ಶೇ 7.0), ಪಾಕಿಸ್ತಾನ (ಶೇ 5.7), ನೈಜೀರಿಯಾ (ಶೇ 4.5), ಬಾಂಗ್ಲಾದೇಶ (ಶೇ 3.6), ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (ಶೇ 3.0) ನಂತರದ ಸ್ಥಾನದಲ್ಲಿದೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಭಾರತವು ಪ್ರಗತಿ ಸಾಧಿಸಿದೆ ಎಂದು ವರದಿ ತೋರಿಸುತ್ತದೆ. 2015 ರಲ್ಲಿ 1,00,000 ಜನರ ಪೈಕಿ 258 ರೋಗಿಗಳಿದ್ದರೆ, 2022 ರಲ್ಲಿ 1,00,000 ಜನರಿಗೆ 199 ಕ್ಕೆ ರೋಗ ಪ್ರಕರಣಗಳಿವೆ. ಆದರೆ ದರವು ಇನ್ನೂ ಜಾಗತಿಕ ಸರಾಸರಿ 100,000 ಕ್ಕೆ 133 ಕ್ಕಿಂತ ಹೆಚ್ಚಾಗಿದೆ.

ಸಾವಿನ ಅನುಪಾತ

ರೋಗವು ಎಷ್ಟು ತೀವ್ರವಾಗಿದೆ ಎಂಬುದರ ಮಾಪನಕೇಸ್ ಫರ್ಟಿಲಿಟಿ ರೇಶಿಯೋ (CFR)ಭಾರತದಲ್ಲಿ ಶೇಕಡಾ 12 ರಷ್ಟಿದೆ, ಅಂದರೆ 100 ರೋಗಿಗಳಲ್ಲಿ 12 ಜನರು ಈ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ. ಈ ಅಂಕಿ ಅಂಶವು ಜಾಗತಿಕ ಸರಾಸರಿಯ ದ್ವಿಗುಣವಾಗಿದೆ, ಇದು ಶೇಕಡಾ 5.8 ರಷ್ಟಿದೆ. ಸಿಂಗಾಪುರವು ಶೇಕಡಾ 1 ರಷ್ಟು ಕಡಿಮೆ ಅಂಕಗಳನ್ನು ಹೊಂದಿದ್ದರೆ, ಚೀನಾ ಶೇಕಡಾ 4 ರೊಂದಿಗೆ 14 ನೇ ಸ್ಥಾನದಲ್ಲಿದೆ. ಟಿಬಿ ಗುಣಪಡಿಸಬಹುದಾದರೂ, ತಡವಾಗಿ ಪತ್ತೆಯಾದಾಗ ಸಾವು ಸಂಭವಿಸಬಹುದು.

ಇನ್ನಷ್ಟು ಹದಗೆಡಿಸಿದ ಕೋವಿಡ್

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಸಾವಿನ ಸಂಖ್ಯೆಯು ಹೆಚ್ಚಾಗಿದೆ ಎಂದು ವರದಿ ಅಂದಾಜಿಸಿದೆ. ಪೂರ್ವ-ಸಾಂಕ್ರಾಮಿಕ ಪ್ರವೃತ್ತಿಗಳಿಗೆ ಹೋಲಿಸಿದರೆ, 2020 ಮತ್ತು 2022 ರ ನಡುವೆ ಭಾರತದಲ್ಲಿ ಸುಮಾರು 60,000 ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 2022 ರಲ್ಲಿ 192 ದೇಶಗಳ 75 ಲಕ್ಷಕ್ಕೂ ಹೆಚ್ಚು ಜನರು ಟಿಬಿಯಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ, ಇದು 1995 ರಿಂದ ಪ್ರಪಂಚದಾದ್ಯಂತ WHO ರೋಗವನ್ನು ಮೇಲ್ವಿಚಾರಣೆ ಮಾಡಲು ಪ್ರಾರಂಭಿಸಿದ ನಂತರ ದಾಖಲಾದ ಅತ್ಯಧಿಕ ಅಂಕಿ ಅಂಶವಾಗಿದೆ.

ಇದನ್ನೂ ಓದಿGenital Tuberculosis: ಜನನಾಂಗದ ಕ್ಷಯರೋಗ ಪುರುಷ, ಸ್ತ್ರೀ ಬಂಜೆತಕ್ಕೆ ಕಾರಣ

ಚಿಕಿತ್ಸಾ ಸೇವೆಗಳಲ್ಲಿನ ಚೇತರಿಕೆ

ವರದಿಯು 2022 ರಲ್ಲಿ TB ರೋಗನಿರ್ಣಯ ಮತ್ತು ಚಿಕಿತ್ಸಾ ಸೇವೆಗಳಲ್ಲಿನ ಚೇತರಿಕೆಯ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅದೇ ವೇಳೆ ಟಿಬಿ ನಿಯಂತ್ರಣ ಪ್ರಯತ್ನಗಳ ಮೇಲೆ COVID-19 ಪ್ರಭಾವದ ಸಂಭಾವ್ಯ ಹಿಮ್ಮುಖವನ್ನು ಸೂಚಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Thu, 9 November 23

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ