AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಭಾರತ

ಭಾರತವು ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎನ್ನುವುದು ವರದಿಯೊಂದರಿಂದ ತಿಳಿದುಬಂದಿದೆ. ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಕ್ರಮೇಣ ಹೆಚ್ಚಿಸುತ್ತಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎಸ್‌ಐಪಿಆರ್‌ಐ) ವರದಿಯಲ್ಲಿ ಇದು ಬಹಿರಂಗವಾಗಿದೆ. ವರದಿಯ ಪ್ರಕಾರ, ಚೀನಾ ತನ್ನ ಪರಮಾಣು ಸಾಮರ್ಥ್ಯಗಳನ್ನು ವಿಸ್ತರಿಸುತ್ತಿದೆ ಮತ್ತು ಆಧುನೀಕರಿಸುತ್ತಿದೆ ಮತ್ತು 2030 ರ ವೇಳೆಗೆ ಇದು ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ (ICBMs) ಯುಎಸ್ ಅಥವಾ ರಷ್ಯಾಗೆ ಸಮನಾಗಿರುತ್ತದೆ ಎಂದು ಅಂದಾಜಿಸಲಾಗಿದೆ.

ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಭಾರತ
ನಯನಾ ರಾಜೀವ್
|

Updated on: Jun 18, 2024 | 10:31 AM

Share

1974ರಲ್ಲೇ ಪರಮಾಣು ಬಾಂಬ್​ ಪರೀಕ್ಷೆ ನಡೆಸುವ ಮೂಲಕ ಭಾರತ ಪರಮಾಣು ಸ್ವಾವಲಂಬನೆಯನ್ನು ಕಂಡಿತ್ತು. ಈ ಪ್ರಾಜೆಕ್ಟ್​ ಹೆಸರು ಸ್ಮೈಲಿಂಗ್ ಬುದ್ಧ ಎಂಬುದಾಗಿತ್ತು. ವಿಶ್ವದೆಲ್ಲೆಡೆ ಪರಮಾಣು ಶಾಸ್ತ್ರಾಸ್ತ್ರಗಳನ್ನು ಸಿದ್ಧಪಡಿಸುವ ಪ್ರಮಾಣ ಹೆಚ್ಚುತ್ತಿದೆ, ಭಾರತವು ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರ​(Nuclear Weapons)ಗಳನ್ನು ಹೊಂದಿದೆ ಎನ್ನುವುದು ವರದಿಯೊಂದರಿಂದ ತಿಳಿದುಬಂದಿದೆ.

ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಕ್ರಮೇಣ ಹೆಚ್ಚಿಸುತ್ತಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎಸ್‌ಐಪಿಆರ್‌ಐ) ವರದಿಯಲ್ಲಿ ಇದು ಬಹಿರಂಗವಾಗಿದೆ. ವರದಿಯ ಪ್ರಕಾರ, ಚೀನಾ ತನ್ನ ಪರಮಾಣು ಸಾಮರ್ಥ್ಯಗಳನ್ನು ವಿಸ್ತರಿಸುತ್ತಿದೆ ಮತ್ತು ಆಧುನೀಕರಿಸುತ್ತಿದೆ ಮತ್ತು 2030 ರ ವೇಳೆಗೆ ಇದು ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ (ICBMs) ಯುಎಸ್ ಅಥವಾ ರಷ್ಯಾಗೆ ಸಮನಾಗಿರುತ್ತದೆ ಎಂದು ಅಂದಾಜಿಸಲಾಗಿದೆ.

ವರದಿಯ ಪ್ರಕಾರ, ವಿಶ್ವಾದ್ಯಂತ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಕಾರ್ಯಾಚರಣಾ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆ ಹೆಚ್ಚುತ್ತಿದೆ. ವರದಿ ಪ್ರಕಾರ ಜನವರಿ ವೇಳೆಗೆ ಚೀನಾದ ಪರಮಾಣು ಸಂಗ್ರಹ ಕಳೆದ ವರ್ಷಕ್ಕೆ ಹೋಲಿಸಿದರೆ 410ರಿಂದ 500ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಭಾರತ ಮತ್ತು ಪಾಕಿಸ್ತಾನ ಹೊಂದಿರುವ ಅಣ್ವಸ್ತ್ರಗಳ ಸಂಖ್ಯೆಯನ್ನೂ ವರದಿಯಲ್ಲಿ ಬಹಿರಂಗಪಡಿಸಲಾಗಿದೆ. ವರದಿಯ ಪ್ರಕಾರ ಭಾರತದಲ್ಲಿ 172 ಪರಮಾಣು ಸಿಡಿತಲೆಗಳಿವೆ. ಆದರೆ ಪಾಕಿಸ್ತಾನವು ಪ್ರಸ್ತುತ 170 ಪರಮಾಣು ಬಾಂಬ್‌ಗಳನ್ನು ಹೊಂದಿದೆ.

ಕಳೆದ ಒಂದು ವರ್ಷದಲ್ಲಿ ಭಾರತ 8 ಹೊಸ ಅಣುಬಾಂಬ್‌ಗಳನ್ನು ತಯಾರಿಸಿದೆ ಎಂದು ವರದಿ ಹೇಳಿದೆ. ಅದೇ ಸಮಯದಲ್ಲಿ, ಕಳೆದ ಒಂದು ವರ್ಷದಲ್ಲಿ ಪಾಕಿಸ್ತಾನವು ಯಾವುದೇ ಹೊಸ ನ್ಯೂಕ್ಲಿಯರ್ ಬಾಂಬ್ ತಯಾರಿಸಿಲ್ಲ.

ವಿಶ್ವಾದ್ಯಂತ ಸರಿಸುಮಾರು 12,121 ಪರಮಾಣು ಶಸ್ತ್ರಾಸ್ತ್ರಗಳಿವೆ ನಿರ್ಮಾಣ ಹಂತದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನವರಿಯಲ್ಲಿ ವಿಶ್ವಾದ್ಯಂತ ಸುಮಾರು 12,121 ಪರಮಾಣು ಶಸ್ತ್ರಾಸ್ತ್ರಗಳಲ್ಲಿ, ಸುಮಾರು 9,585 ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳ ಭಾಗವಾಗಿದೆ. ಇವುಗಳಲ್ಲಿ, ಸುಮಾರು 3,904 ಪರಮಾಣು ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳಲ್ಲಿ ಸ್ಥಾಪಿಸಲಾಗಿದೆ.

ನಿರ್ಮಾಣ ಹಂತದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ವರದಿ ಹೇಳಿದೆ. ಜನವರಿಯಲ್ಲಿ ವಿಶ್ವಾದ್ಯಂತ ಸುಮಾರು 12,121 ಪರಮಾಣು ಶಸ್ತ್ರಾಸ್ತ್ರಗಳಲ್ಲಿ, ಸುಮಾರು 9,585 ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳ ಭಾಗವಾಗಿದೆ. ಇವುಗಳಲ್ಲಿ, ಸುಮಾರು 3,904 ಪರಮಾಣು ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳಲ್ಲಿ ಸ್ಥಾಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ