AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 24ಗಂಟೆಯಲ್ಲಿ 90,928 ಕೊರೊನಾ ಕೇಸ್​ಗಳು ದಾಖಲು, ನಿನ್ನೆಗಿಂತಲೂ ಶೇ.56ರಷ್ಟು ಹೆಚ್ಚು; 325 ಮಂದಿ ಸಾವು

Covid 19 Updates: ದೇಶದಲ್ಲಿ ವಾರದ ಪಾಸಿಟಿವಿಟಿ ದರ ಶೇ.3.47ರಷ್ಟಿದೆ. 24 ಗಂಟೆಯಲ್ಲಿ 19,206ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ.

ಭಾರತದಲ್ಲಿ 24ಗಂಟೆಯಲ್ಲಿ 90,928 ಕೊರೊನಾ ಕೇಸ್​ಗಳು ದಾಖಲು, ನಿನ್ನೆಗಿಂತಲೂ ಶೇ.56ರಷ್ಟು ಹೆಚ್ಚು; 325 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 06, 2022 | 10:00 AM

Share

ಭಾರತದಲ್ಲಿ ಇಂದು 24 ಗಂಟೆಯಲ್ಲಿ ಬರೋಬ್ಬರಿ 90,928 ಕೊರೊನಾ ಕೇಸ್​(Corona Cases In India)ಗಳು ದಾಖಲಾಗಿದ್ದು, ನಿನ್ನೆಗಿಂತಲೂ ಇಂದು ಶೇ.56.5ರಷ್ಟು ಅಧಿಕವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,51,09,286 ಕ್ಕೆ ಏರಿಕೆಯಾಗಿದೆ. ಹಾಗೇ 24ಗಂಟೆಯಲ್ಲಿ 325 ಜನರು ಮೃತಪಟ್ಟಿದ್ದಾರೆ. ಅಲ್ಲಿಗೆ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4,82,876ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ದರ ಶೇ.6.43ಕ್ಕೆ ಏರಿಕೆಯಾಗಿದೆ. ಹಾಗೇ, ಸಕ್ರಿಯ ಪ್ರಕರಣಗಳ ಸಂಖ್ಯೆ 2,85,401ಕ್ಕೆ ತಲುಪಿದೆ. ಅಂದಹಾಗೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 2630ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 955ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ವಾರದ ಪಾಸಿಟಿವಿಟಿ ದರ ಶೇ.3.47ರಷ್ಟಿದೆ. 24 ಗಂಟೆಯಲ್ಲಿ 19,206ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ. ಆದರೆ ಒಂದು ದಿನದಲ್ಲಿ ಪತ್ತೆಯಾಗುವ ಕೊವಿಡ್​ 19 ಹೊಸ ಸೋಂಕಿತರ ಸಂಖ್ಯೆಗೂ, ಚೇತರಿಸಿಕೊಂಡು ಡಿಸ್​ಚಾರ್ಜ್ ಆಗುತ್ತಿರುವವರ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸ ಇದೆ.  ಒಟ್ಟಾರೆ ದಾಖಲಾದ 90 ಸಾವಿರಕ್ಕೂ ಅಧಿಕ ಪ್ರಕರಣದಲ್ಲಿ 26,538 ಕೊರೊನಾ ಕೇಸ್​ಗಳು ಮಹಾರಾಷ್ಟ್ರದಲ್ಲಿಯೇ ದಾಖಲಾಗಿದೆ. ಅದರಲ್ಲೂ ಮುಂಬೈನಲ್ಲಿ 15,166 ಪ್ರಕರಣಗಳು ಪತ್ತೆಯಾಗಿವೆ. ಹಾಗೇ, ದೆಹಲಿಯಲ್ಲಿ 10,665 ಕೇಸ್​ಗಳು 24ಗಂಟೆಯಲ್ಲಿ ದಾಖಲಾಗಿವೆ. ಇದು ನಿನ್ನೆಗಿಂತಲೂ ಎರಡುಪಟ್ಟು ಹೆಚ್ಚು.

30 ರೆಸಿಡೆಂಟ್ ವೈದ್ಯರಿಗೆ ಕೊರೊನಾ ಸೋಂಕು ಮುಂಬೈನ ಸಿಯೋನ್​ ಆಸ್ಪತ್ರೆಯಲ್ಲಿ ಮತ್ತೆ 30 ರೆಸಿಡೆಂಟ್​ ವೈದ್ಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲಿಗೆ ಮಹಾರಾಷ್ಟ್ರದಲ್ಲಿ ಒಟ್ಟು 260 ರೆಸಿಡೆಂಟ್ ವೈದ್ಯರು ಕೊರೊನಾಕ್ಕೆ ಒಳಗಾದ ಹಾಗೆ ಆಗಿದೆ. ಚಂಡಿಗಢ್​ನ ಪಿಜಿಐ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಸೇರಿ 146 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.  ಸದ್ಯ ಇವರೆಲ್ಲರಲ್ಲೂ ಕೊರೊನಾದ ಸೌಮ್ಯ ಲಕ್ಷಣಗಳಿದ್ದು, ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಒಮಿಕ್ರಾನ್​ ಕೂಡ ಮಹಾರಾಷ್ಟ್ರದಲ್ಲೇ ಹೆಚ್ಚು ಇನ್ನು ಒಮಿಕ್ರಾನ್ ಸೋಂಕಿತರ ಸಂಖ್ಯೆ  ಕೂಡ ಮಹಾರಾಷ್ಟ್ರದಲ್ಲಿಯೇ ಹೆಚ್ಚು. ಅಲ್ಲಿ ಸೋಂಕಿತರ ಸಂಖ್ಯೆ 797ಕ್ಕೆ ಏರಿದೆ. ಎರಡನೇ ಸ್ಥಾನದಲ್ಲಿ ದೆಹಲಿಯಿದ್ದು, ಒಮಿಕ್ರಾನ್ ಸೋಂಕಿತರ ಸಂಖ್ಯೆ 465ಕ್ಕೆ ತಲುಪಿದೆ. ರಾಜಸ್ಥಾನ, ಕೇರಳ, ಕರ್ನಾಟ, ಗುಜರಾತ್​​ ರಾಜ್ಯಗಳಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 200ರ ಗಡಿದಾಟಿದೆ.

ಇದನ್ನೂ ಓದಿ: ಸಂಗಾತಿಯನ್ನು ಕಳೆದುಕೊಂಡು ಮರುಗುತ್ತಿರುವ ನವಿಲು: ಮನಕಲಕುವ ವೀಡಿಯೋ ವೈರಲ್​

Published On - 9:37 am, Thu, 6 January 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?