AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ

ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 19, 2021 | 9:54 AM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಅಲೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಬಹುತೇಕ ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಾಗುತ್ತಿವೆ. ಗುಜರಾತ್​ನಲ್ಲಿ ಜನರು ಸ್ವಯಂ ನಿರ್ಬಂಧ ಹೇರಿಕೊಳ್ಳಬೇಕು ಎಂದು ತಜ್ಞರು ಕರೆ ನೀಡಿದ್ದಾರೆ. ಹಾಗೇ ರಾಜಸ್ಥಾನದಲ್ಲಿ ಇಂದಿನಿಂದ ಮೇ 3ರವರೆಗೆ ಕಚೇರಿ, ಮಾರುಕಟ್ಟೆಗಳು ಬಂದ್ ಆಗಲಿವೆ. ಇದನ್ನು ‘ಸಾರ್ವಜನಿಕ ಶಿಸ್ತಿನ ಹದಿನೈದು ದಿನಗಳು’ ಎಂದು ಕರೆಯಲಾಗಿದೆ. ಈ ಹೈದಿನೈದು ದಿನಗಳ ಕಾಲ ರಾಜಸ್ಥಾನದಲ್ಲಿ ಅಗತ್ಯವಸ್ತುಗಳ ಸೇವೆ ಮಾತ್ರ ಇರಲಿದೆ.

ಇನ್ನು ದೇಶದಲ್ಲಿ ಕಳೆದ 24ಗಂಟೆಯಲ್ಲಿ 2,73,810ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದು, 1,619 ಜನರು ಮೃತಪಟ್ಟಿದ್ದಾರೆ. ಹಾಗೇ 1,44,178 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 19,29,329. ಒಟ್ಟು ಚೇತರಿಕೆ ಕಂಡವರ ಸಂಖ್ಯೆ 1,29,53,821  ಮತ್ತು ಕೊರೊನಾದಿಂದ ಜೀವ ಕಳೆದುಕೊಂಡವರು 1,78,769  ಜನರು.

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಬಾಯಿ ಒಣಗುವುದು, ಗ್ಯಾಸ್ಟ್ರಿಕ್​, ಲೂಸ್​ ಮೋಶನ್​, ಕೆಂಪು ಕಣ್ಣು, ತಲೆನೋವುಗಳು ಕಾಣಿಸಿಕೊಳ್ಳುತ್ತಿವೆ. ಈ ಬಾರಿ ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ ಎಂದು ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥರಾದ ಗೌರಿ ಅಗರ್ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ 86.62ಕ್ಕೆ ಕುಸಿದಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 18,01,316 ಇದ್ದು, ಒಟ್ಟು ಸೋಂಕಿತರ ಸಂಖ್ಯೆಯ ಶೇ.12.18ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಆಗಸ್ಟ್​ 7ರಂದು. 30 ಲಕ್ಷ ದಾಟಿದ್ದು ಆಗಸ್ಟ್​ 23ರಂದು, 40 ಲಕ್ಷ ದಾಟಿದ್ದು ಸೆಪ್ಟೆಂಬರ್​ 5 ಮತ್ತು 50 ಲಕ್ಷ ದಾಟಿದ್ದು ಸೆಪ್ಟೆಂಬ್ 16ರಂದು. ಕಳೆದ ಬಾರಿಗೆ ಹೋಲಿಸಿದರೆ ಸೋಂಕಿನ ಪ್ರಸರಣ ತುಂಬ ವೇಗವಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಕೊರೊನಾ ಕರ್ಫ್ಯೂ; ಗಣಿನಾಡಿನಲ್ಲಿ ನಿಯಂತ್ರಣಕ್ಕೆ ಬಾರದ ಕೊವಿಡ್ 19

Covid-19 Karnataka Update: ಕರ್ನಾಟಕದಲ್ಲಿ ಇಂದು 19,067 ಜನರಿಗೆ ಕೊರೊನಾ ದೃಢ, 81 ಸಾವು

Published On - 9:13 am, Mon, 19 April 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!