AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್

ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (GHI) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿವೆ. 2020 ರಲ್ಲಿ ಭಾರತ 107 ದೇಶಗಳ ಪೈಕಿ 94 ನೇ ಸ್ಥಾನದಲ್ಲಿತ್ತು. ಈಗ ಈ ಪಟ್ಟಿಯಲ್ಲಿ 116 ದೇಶಗಳಿದ್ದರೆ, ಭಾರತ 101 ನೇ ಸ್ಥಾನಕ್ಕೆ ಕುಸಿದಿದೆ

Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್
ಕಪಿಲ್ ಸಿಬಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 15, 2021 | 2:31 PM

Share

ದೆಹಲಿ: ಜಾಗತಿಕ ಹಸಿವು ಸೂಚ್ಯಂಕದಲ್ಲಿ (Global Hunger Index) ದೇಶದ ಕಳಪೆ ಶ್ರೇಯಾಂಕದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ (Kapil Sibal) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತವು 2020ರಲ್ಲಿ 94 ನೇ ಸ್ಥಾನದಲ್ಲಿತ್ತು. ಇದೀಗ 101 ನೇ ಸ್ಥಾನಕ್ಕೆ ಕುಸಿದಿದ್ದು, ಪಾಕಿಸ್ತಾನ ಸೇರಿದಂತೆ ತನ್ನ ನೆರೆಹೊರೆಯ ರಾಷ್ಟ್ರಗಳಿಗಿಂತ ಹಿಂದುಳಿದಿದೆ. ಜಾಗತಿಕ ಹಸಿವಿನ ಸೂಚ್ಯಂಕ ವರದಿಯು ಭಾರತದಲ್ಲಿ ಹಸಿವಿನ ಮಟ್ಟವನ್ನು “ಆತಂಕಕಾರಿ” ಎಂದು ಬಣ್ಣಿಸಿದೆ. ಬಡತನ, ಹಸಿವನ್ನು ನಿವಾರಿಸಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡುವ ಸರ್ಕಾರದ ಭರವಸೆಗಳನ್ನು ಲೇವಡಿ ಮಾಡಿ ಸಿಬಲ್ ಟ್ವೀಟ್ ಮಾಡಿದ್ದಾರೆ.

ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (GHI) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿವೆ.

2020 ರಲ್ಲಿ ಭಾರತ 107 ದೇಶಗಳ ಪೈಕಿ 94 ನೇ ಸ್ಥಾನದಲ್ಲಿತ್ತು. ಈಗ ಈ ಪಟ್ಟಿಯಲ್ಲಿ 116 ದೇಶಗಳಿದ್ದರೆ, ಭಾರತ 101 ನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಜಿಹೆಚ್ಐ ಸ್ಕೋರ್ ಕೂಡ ಕಡಿಮೆಯಾಗಿದೆ. 2000 ರಲ್ಲಿ 38.8 ಇದ್ದ್ದು 2012 ಮತ್ತು 2021 ರ ನಡುವೆ 28.8 – 27.5 ರ ಒಳಗೆ ಇದೆ.

ನೇಪಾಳ (76), ಬಾಂಗ್ಲಾದೇಶ (76), ಮ್ಯಾನ್ಮಾರ್ (71) ಮತ್ತು ಪಾಕಿಸ್ತಾನ (92) ನಂತಹ ನೆರೆಯ ದೇಶಗಳು ತನ್ನ ಪ್ರಜೆಗಳಿಗೆ ಭಾರತಕ್ಕಿಂತ ಉತ್ತಮ ಆಹಾರ ನೀಡಿದರೂ, ಈ ದೇಶಗಳನ್ನು ‘ಆತಂಕಕಾರಿ’ ಹಸಿವಿನ ವರ್ಗದಲ್ಲಿ ಸೇರಿಸಲಾಗಿದೆ.

ವರದಿಯ ಪ್ರಕಾರ ಭಾರತದಲ್ಲಿ 1998-2002ರ ನಡುವೆ ಮಕ್ಕಳಲ್ಲಿ ಅಪೌಷ್ಟಿಕತೆ ಪಾಲು 17.1 ಶೇಕಡದಿಂದ 17.3 ಪ್ರತಿಶತಕ್ಕೆ ಏರಿಕೆಯಾಗಿದೆ. “ಕೊವಿಡ್ -19 ಮತ್ತು ಭಾರತದಲ್ಲಿ ಸಾಂಕ್ರಾಮಿಕ ಸಂಬಂಧಿತ ನಿರ್ಬಂಧಗಳಿಂದ ಜನರು ತೀವ್ರವಾಗಿ ತೊಂದರೆಗೊಳಗಾಗಿದ್ದಾರೆ, ವಿಶ್ವದಾದ್ಯಂತ ಅತಿಹೆಚ್ಚು ಮಕ್ಕಳ ಅಪೌಷ್ಟಿಕತೆ ಹೊಂದಿರುವ ದೇಶ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಕೇಂದ್ರದ 7 ಹೊಸ ರಕ್ಷಣಾ ಕಂಪನಿಗಳು ಮಿಲಿಟರಿ ಪಡೆಗೆ ಶಕ್ತಿ ತುಂಬಲಿದೆ: ಪ್ರಧಾನಿ ನರೇಂದ್ರ ಮೋದಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ