AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಲಾಲೂ ಪ್ರಸಾದ್ ಯಾದವ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​
ಲಾಲೂ ಪ್ರಸಾದ್ ಯಾದವ್​
TV9 Web
| Updated By: Lakshmi Hegde|

Updated on: Feb 09, 2022 | 5:07 PM

Share

ಪಾಟ್ನಾ: ಉತ್ತರ ಪ್ರದೇಶದಲ್ಲಿ ನಾಳೆಯಿಂದ (ಫೆ.10) ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಳೆ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇರುವಾಗ, ಬಿಹಾರ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav )​ ತಮ್ಮ ಬೆಂಬಲವನ್ನು ಸಮಾಜವಾದಿ ಪಕ್ಷಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ (Uttar Pradesh Assembly Election) ಸೋಲಲು ಏನೇನು ಬೇಕೋ, ಅದೆಲ್ಲವನ್ನೂ ಬಿಜೆಪಿ ಮಾಡಿಕೊಂಡಿದೆ ಎಂದೂ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. 75ವರ್ಷಗಳ ಹಿಂದೆ ಭಾರತವನ್ನು ಬಿಟ್ಟು ಹೋಗಿದ್ದ ಬ್ರಿಟಿಷರು ಇದೀಗ ಬಿಜೆಪಿಯ ರೂಪದಲ್ಲಿ ಮತ್ತೆ ವಾಪಸ್ ಬಂದಂತೆ ಆಗಿದೆ ಎಂದು ಲಾಲೂ ಪ್ರಸಾದ್ ಯಾದವ್​ ತಿಳಿಸಿದ್ದಾರೆ. ಬಿಜೆಪಿಯವರು ಈ ಬಾರಿ ಚುನಾವಣೆಯಲ್ಲಿ ಸೋಲುತ್ತಾರೆ. ಆ ಪಕ್ಷ ಹಣದುಬ್ಬರ, ಬಡತನದ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಅಯೋಧ್ಯೆ, ವಾರಣಾಸಿ ಎಂದು ಜಪಿಸುತ್ತಿದೆ. ಒಟ್ಟಾರೆ ಸೂಕ್ಷ್ಮ ವಿಷಯಗಳನ್ನಿಟ್ಟುಕೊಂಡು ಆಡಳಿತ ಮಾಡುತ್ತಿದೆ ಎಂದೂ ಹೇಳಿದರು. ಇದೇ ವೇಳೆ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆಯೂ ಮಾತನಾಡಿದರು.

ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸಕ್ರಿಯವಾಗುವ ಬಗ್ಗೆಯೂ ಲಾಲೂ ಪ್ರಸಾದ್ ಯಾದವ್ ಸುಳಿವು ನೀಡಿದರು. ನಾನು ಟಿವಿಯಲ್ಲಿ ಸಂಸತ್ತಿನ ಕಲಾಪಗಳನ್ನು ನೋಡುತ್ತಲೇ ಇದ್ದೇನೆ. ಹೇಗೆ ನಡೆಯಬೇಕೋ ಹಾಗೆ ನಡೆಯುತ್ತಿಲ್ಲ. ಅಲ್ಲಿ ಉಳಿದವರಿಗೆ ಮಾತನಾಡಲು ಅವಕಾಶ ಇಲ್ಲದಂತಾಗಿದೆ. ಖಂಡಿತ ನಾನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಸಂಸತ್ತಿಗೆ ಪ್ರವೇಶ ಮಾಡುತ್ತೇನೆ. ಕೋರ್ಟ್​​ನಿಂದ ಸ್ವಲ್ಪ ನಿರ್ಬಂಧವಿದ್ದು, ಅದು ಸರಿಯಾಗಲಿದೆ. ಅಲ್ಲಿವರೆಗೂ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ. ನಾನು ಬಂದು ಉತ್ತರ ನೀಡುತ್ತೇನೆ ಎಂದೂ ಹೇಳಿದ್ದಾರೆ. ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು,  ಬಿಹಾರಕ್ಕೆ ವಿಶೇಷ ಸ್ಥಾನಮಾನ ತರುವ ಉದ್ದೇಶದಿಂದ ಬಿಜೆಪಿಯೊಂದಿಗೆ ಹೋದರು. ಆದರೆ ಅವರ ಕೈಯಲ್ಲಿ ಏನೂ ಆಗಲಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್