Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಲಾಲೂ ಪ್ರಸಾದ್ ಯಾದವ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​
ಲಾಲೂ ಪ್ರಸಾದ್ ಯಾದವ್​
Follow us
TV9 Web
| Updated By: Lakshmi Hegde

Updated on: Feb 09, 2022 | 5:07 PM

ಪಾಟ್ನಾ: ಉತ್ತರ ಪ್ರದೇಶದಲ್ಲಿ ನಾಳೆಯಿಂದ (ಫೆ.10) ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಳೆ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇರುವಾಗ, ಬಿಹಾರ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav )​ ತಮ್ಮ ಬೆಂಬಲವನ್ನು ಸಮಾಜವಾದಿ ಪಕ್ಷಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ (Uttar Pradesh Assembly Election) ಸೋಲಲು ಏನೇನು ಬೇಕೋ, ಅದೆಲ್ಲವನ್ನೂ ಬಿಜೆಪಿ ಮಾಡಿಕೊಂಡಿದೆ ಎಂದೂ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. 75ವರ್ಷಗಳ ಹಿಂದೆ ಭಾರತವನ್ನು ಬಿಟ್ಟು ಹೋಗಿದ್ದ ಬ್ರಿಟಿಷರು ಇದೀಗ ಬಿಜೆಪಿಯ ರೂಪದಲ್ಲಿ ಮತ್ತೆ ವಾಪಸ್ ಬಂದಂತೆ ಆಗಿದೆ ಎಂದು ಲಾಲೂ ಪ್ರಸಾದ್ ಯಾದವ್​ ತಿಳಿಸಿದ್ದಾರೆ. ಬಿಜೆಪಿಯವರು ಈ ಬಾರಿ ಚುನಾವಣೆಯಲ್ಲಿ ಸೋಲುತ್ತಾರೆ. ಆ ಪಕ್ಷ ಹಣದುಬ್ಬರ, ಬಡತನದ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಅಯೋಧ್ಯೆ, ವಾರಣಾಸಿ ಎಂದು ಜಪಿಸುತ್ತಿದೆ. ಒಟ್ಟಾರೆ ಸೂಕ್ಷ್ಮ ವಿಷಯಗಳನ್ನಿಟ್ಟುಕೊಂಡು ಆಡಳಿತ ಮಾಡುತ್ತಿದೆ ಎಂದೂ ಹೇಳಿದರು. ಇದೇ ವೇಳೆ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆಯೂ ಮಾತನಾಡಿದರು.

ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸಕ್ರಿಯವಾಗುವ ಬಗ್ಗೆಯೂ ಲಾಲೂ ಪ್ರಸಾದ್ ಯಾದವ್ ಸುಳಿವು ನೀಡಿದರು. ನಾನು ಟಿವಿಯಲ್ಲಿ ಸಂಸತ್ತಿನ ಕಲಾಪಗಳನ್ನು ನೋಡುತ್ತಲೇ ಇದ್ದೇನೆ. ಹೇಗೆ ನಡೆಯಬೇಕೋ ಹಾಗೆ ನಡೆಯುತ್ತಿಲ್ಲ. ಅಲ್ಲಿ ಉಳಿದವರಿಗೆ ಮಾತನಾಡಲು ಅವಕಾಶ ಇಲ್ಲದಂತಾಗಿದೆ. ಖಂಡಿತ ನಾನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಸಂಸತ್ತಿಗೆ ಪ್ರವೇಶ ಮಾಡುತ್ತೇನೆ. ಕೋರ್ಟ್​​ನಿಂದ ಸ್ವಲ್ಪ ನಿರ್ಬಂಧವಿದ್ದು, ಅದು ಸರಿಯಾಗಲಿದೆ. ಅಲ್ಲಿವರೆಗೂ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ. ನಾನು ಬಂದು ಉತ್ತರ ನೀಡುತ್ತೇನೆ ಎಂದೂ ಹೇಳಿದ್ದಾರೆ. ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು,  ಬಿಹಾರಕ್ಕೆ ವಿಶೇಷ ಸ್ಥಾನಮಾನ ತರುವ ಉದ್ದೇಶದಿಂದ ಬಿಜೆಪಿಯೊಂದಿಗೆ ಹೋದರು. ಆದರೆ ಅವರ ಕೈಯಲ್ಲಿ ಏನೂ ಆಗಲಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್