AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಲಾಲೂ ಪ್ರಸಾದ್ ಯಾದವ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ, ನಾನು ಬಂದು ಉತ್ತರಿಸುತ್ತೇನೆ: ಲಾಲೂ ಪ್ರಸಾದ್ ಯಾದವ್​
ಲಾಲೂ ಪ್ರಸಾದ್ ಯಾದವ್​
TV9 Web
| Edited By: |

Updated on: Feb 09, 2022 | 5:07 PM

Share

ಪಾಟ್ನಾ: ಉತ್ತರ ಪ್ರದೇಶದಲ್ಲಿ ನಾಳೆಯಿಂದ (ಫೆ.10) ವಿಧಾನಸಭೆ ಚುನಾವಣೆ ನಡೆಯಲಿದ್ದು, ನಾಳೆ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇರುವಾಗ, ಬಿಹಾರ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav )​ ತಮ್ಮ ಬೆಂಬಲವನ್ನು ಸಮಾಜವಾದಿ ಪಕ್ಷಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ (Uttar Pradesh Assembly Election) ಸೋಲಲು ಏನೇನು ಬೇಕೋ, ಅದೆಲ್ಲವನ್ನೂ ಬಿಜೆಪಿ ಮಾಡಿಕೊಂಡಿದೆ ಎಂದೂ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವಡಿ ದೇಶವು ಆಂತರಿಕ ಯುದ್ಧದತ್ತ ಸಾಗುತ್ತಿದೆ. ದಂಗೆಗಳು, ಧರ್ಮ, ದೇಗುಲಗಳಂತಹ ಸೂಕ್ಷ್ಮ ವಿಷಯಗಳನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. 75ವರ್ಷಗಳ ಹಿಂದೆ ಭಾರತವನ್ನು ಬಿಟ್ಟು ಹೋಗಿದ್ದ ಬ್ರಿಟಿಷರು ಇದೀಗ ಬಿಜೆಪಿಯ ರೂಪದಲ್ಲಿ ಮತ್ತೆ ವಾಪಸ್ ಬಂದಂತೆ ಆಗಿದೆ ಎಂದು ಲಾಲೂ ಪ್ರಸಾದ್ ಯಾದವ್​ ತಿಳಿಸಿದ್ದಾರೆ. ಬಿಜೆಪಿಯವರು ಈ ಬಾರಿ ಚುನಾವಣೆಯಲ್ಲಿ ಸೋಲುತ್ತಾರೆ. ಆ ಪಕ್ಷ ಹಣದುಬ್ಬರ, ಬಡತನದ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಅಯೋಧ್ಯೆ, ವಾರಣಾಸಿ ಎಂದು ಜಪಿಸುತ್ತಿದೆ. ಒಟ್ಟಾರೆ ಸೂಕ್ಷ್ಮ ವಿಷಯಗಳನ್ನಿಟ್ಟುಕೊಂಡು ಆಡಳಿತ ಮಾಡುತ್ತಿದೆ ಎಂದೂ ಹೇಳಿದರು. ಇದೇ ವೇಳೆ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆಯೂ ಮಾತನಾಡಿದರು.

ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸಕ್ರಿಯವಾಗುವ ಬಗ್ಗೆಯೂ ಲಾಲೂ ಪ್ರಸಾದ್ ಯಾದವ್ ಸುಳಿವು ನೀಡಿದರು. ನಾನು ಟಿವಿಯಲ್ಲಿ ಸಂಸತ್ತಿನ ಕಲಾಪಗಳನ್ನು ನೋಡುತ್ತಲೇ ಇದ್ದೇನೆ. ಹೇಗೆ ನಡೆಯಬೇಕೋ ಹಾಗೆ ನಡೆಯುತ್ತಿಲ್ಲ. ಅಲ್ಲಿ ಉಳಿದವರಿಗೆ ಮಾತನಾಡಲು ಅವಕಾಶ ಇಲ್ಲದಂತಾಗಿದೆ. ಖಂಡಿತ ನಾನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಸಂಸತ್ತಿಗೆ ಪ್ರವೇಶ ಮಾಡುತ್ತೇನೆ. ಕೋರ್ಟ್​​ನಿಂದ ಸ್ವಲ್ಪ ನಿರ್ಬಂಧವಿದ್ದು, ಅದು ಸರಿಯಾಗಲಿದೆ. ಅಲ್ಲಿವರೆಗೂ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಲೇ ಇರಲಿ. ನಾನು ಬಂದು ಉತ್ತರ ನೀಡುತ್ತೇನೆ ಎಂದೂ ಹೇಳಿದ್ದಾರೆ. ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು,  ಬಿಹಾರಕ್ಕೆ ವಿಶೇಷ ಸ್ಥಾನಮಾನ ತರುವ ಉದ್ದೇಶದಿಂದ ಬಿಜೆಪಿಯೊಂದಿಗೆ ಹೋದರು. ಆದರೆ ಅವರ ಕೈಯಲ್ಲಿ ಏನೂ ಆಗಲಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ