AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ಕುರಿತು ಎನ್ಎಸ್ಎ ಮಟ್ಟದ ಶೃಂಗಸಭೆ ಆಯೋಜಿಸಿದ ಭಾರತ; 7 ರಾಷ್ಟ್ರಗಳು ಹಾಜರು

ಸಮ್ಮೇಳನದ ಅಧ್ಯಕ್ಷತೆಯನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ವಹಿಸಿದ್ದಾರೆ. ಇರಾನ್, ರಷ್ಯಾ, ಕಜಕಿಸ್ತಾನ್, ಕಿರ್ಗಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ತಜಕಿಸ್ತಾನ್‌ನ ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿದ್ದಾರೆ.

ಅಫ್ಘಾನಿಸ್ತಾನ ಕುರಿತು ಎನ್ಎಸ್ಎ ಮಟ್ಟದ ಶೃಂಗಸಭೆ ಆಯೋಜಿಸಿದ ಭಾರತ; 7 ರಾಷ್ಟ್ರಗಳು ಹಾಜರು
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್
TV9 Web
| Edited By: |

Updated on: Nov 10, 2021 | 12:25 PM

Share

ದೆಹಲಿ: ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಪತನ ಮತ್ತ ತಾಲಿಬಾನ್ (Taliban) ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ ನೆರೆಯ ಅಫ್ಘಾನಿಸ್ತಾನದಲ್ಲಿ (Afghanistan) ನಡೆಯುತ್ತಿರುವ ಪರಿಸ್ಥಿತಿಯನ್ನು ಚರ್ಚಿಸಲು ಭಾರತವು ಬುಧವಾರ ಪ್ರಾದೇಶಿಕ ಶೃಂಗಸಭೆಯನ್ನು ಆಯೋಜಿಸಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ವಹಿಸಿದ್ದಾರೆ. ಇರಾನ್, ರಷ್ಯಾ, ಕಜಕಿಸ್ತಾನ್, ಕಿರ್ಗಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ತಜಕಿಸ್ತಾನ್‌ನ ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿದ್ದಾರೆ. ಶೃಂಗಸಭೆಯಲ್ಲಿ ಇರಾನ್‌ನ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಡ್ಮಿರಲ್ ಅಲಿ ಶಮ್ಖಾನಿ ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ಭದ್ರತಾ ಸಮಿತಿಯ ಅಧ್ಯಕ್ಷರಾದ ಕಝಾಕಿಸ್ತಾನ್‌ನ ಕರೀಮ್ ಮಾಸ್ಸಿಮೊವ್, ಕಿರ್ಗಿಜ್ ಗಣರಾಜ್ಯದ ಭದ್ರತಾ ಮಂಡಳಿಯ ಕಾರ್ಯದರ್ಶಿ ಮರಾಟ್ ಮುಕನೋವಿಚ್ ಇಮಾನ್ಕುಲೋವ್, ರಷ್ಯಾದ ಒಕ್ಕೂಟದ ಭದ್ರತಾ ಕಾರ್ಯದರ್ಶಿ ನಿಕೊಲಾಯ್ ಪಿ ಪಟ್ರುಶೆವ್, ತಜಕಿಸ್ತಾನ್ ಭದ್ರತಾ ಮಂಡಳಿಯ ಕಾರ್ಯದರ್ಶಿ ನಸ್ರುಲ್ಲೊ ರಹಮತ್ಜೋನ್ ಮಹ್ಮುದ್ಜೋಡಾ, ತುರ್ಕೆಮೆನಿಸ್ತಾನದ ಸಚಿವ ಸಂಪುಟದ ಉಪ ಅಧ್ಯಕ್ಷರು ಚಾರ್ಮಿರತ್ ಕಾಕಲಿಯೆವಿಚ್ ಅಮಾವೊವ್ ಮತ್ತು ಭದ್ರತಾ ಮಂಡಳಿಯ ಕಾರ್ಯದರ್ಶಿ ಉಜ್ಬೇಕಿಸ್ತಾನ್‌ನ ವಿಕ್ಟರ್ ಮಖ್ಮುಡೋವ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ಭಾರತವು ರಷ್ಯಾ, ಇರಾನ್, ಚೀನಾ, ಪಾಕಿಸ್ತಾನ, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್‌ನ ಎನ್‌ಎಸ್‌ಎಗಳನ್ನು ಸಭೆಗೆ ಔಪಚಾರಿಕವಾಗಿ ಆಹ್ವಾನಿಸಿತ್ತು. ಆದರೆ ಚೀನಾ ಮತ್ತು ಪಾಕಿಸ್ತಾನ ಈಗಾಗಲೇ ಸಮ್ಮೇಳನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದವು. ಅಫ್ಘಾನಿಸ್ತಾನದಿಂದ ಯಾವುದೇ ನಿಯೋಗವನ್ನು ಆಹ್ವಾನಿಸಲಾಗಿಲ್ಲ.

ಎಲ್ಲಾ ಮಧ್ಯ ಏಷ್ಯಾದ ದೇಶಗಳು ಮತ್ತು ಅಫ್ಘಾನಿಸ್ತಾನದ ತಕ್ಷಣದ ಭೂ ನೆರೆಯ ದೇಶಗಳಾದ ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ,ಕಝಾಕಿಸ್ತಾನ್ ಮತ್ತು ಕಿರ್ಗಿಜ್ ರಿಪಬ್ಲಿಕ್ ಜೊತೆಗೆ ಈ ಸ್ವರೂಪದಲ್ಲಿ ಚರ್ಚೆಯಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು ಎಂದು ಈ ಬೆಳವಣಿಗೆ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಪತನವನ್ನು ಪರಿಹರಿಸುವಲ್ಲಿ ಪ್ರಸ್ತುತವಾಗಿ ಉಳಿಯುವ ಭಾರತೀಯ ಪ್ರಯತ್ನಗಳ ಭಾಗವಾಗಿ ಈ ಸಭೆಯನ್ನು ನೋಡಲಾಗುತ್ತಿದೆ. ಅಫ್ಘಾನ್ ಪರಿಸ್ಥಿತಿ ಕುರಿತು ನಡೆಯುತ್ತಿರುವ ಮೂರನೇ ಸಭೆ ಇದಾಗಿದೆ. ಈ ಸ್ವರೂಪದಲ್ಲಿ ಹಿಂದಿನ ಎರಡು ಪ್ರಾದೇಶಿಕ ಸಭೆಗಳನ್ನು ಸೆಪ್ಟೆಂಬರ್ 2018 ಮತ್ತು ಡಿಸೆಂಬರ್ 2019 ರಲ್ಲಿ ಇರಾನ್‌ನಲ್ಲಿ ನಡೆಸಲಾಯಿತು.

ಏತನ್ಮಧ್ಯೆ, ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕಾಬೂಲ್ ಸಮ್ಮೇಳನವನ್ನು “ಅಫ್ಘಾನಿಸ್ತಾನಕ್ಕೆ ನೆರವು ನೀಡಲು ಅನುಕೂಲವಾಗುವಂತೆ” ಭರವಸೆಯ ಹೆಜ್ಜೆಯಾಗಿ ನೋಡುತ್ತಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಇತರ ನ್ಯಾಟೋ ಮಿತ್ರರಾಷ್ಟ್ರಗಳು ಸೈನ್ಯವನ್ನು ಹಿಂತೆಗೆದುಕೊಂಡ ನಂತರ ಮಿಲಿಟರಿ ಆಕ್ರಮಣದಲ್ಲಿ ತಾಲಿಬಾನ್ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿತು. ಅಸ್ತವ್ಯಸ್ತವಾಗಿರುವ ನಿರ್ಗಮನವು ಅಫ್ಘಾನಿಸ್ತಾನದಲ್ಲಿ ಪ್ರಮುಖ ಮಾನವೀಯ ಬಿಕ್ಕಟ್ಟಿಗೆ ಕಾರಣವಾಯಿತು.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರವನ್ನು ಯಾವುದೇ ದೇಶವು ಔಪಚಾರಿಕವಾಗಿ ಗುರುತಿಸಿಲ್ಲ ಮತ್ತು ಅಂತರರಾಷ್ಟ್ರೀಯ ನೆರವು ಸ್ಥಗಿತಗೊಂಡಿರುವುದರಿಂದ ದೇಶವು ಆರ್ಥಿಕ ಕುಸಿತದ ಅಂಚಿನಲ್ಲಿದೆ. ಅಫ್ಘಾನಿಸ್ತಾನವು ಇಸ್ಲಾಮಿಕ್ ಸ್ಟೇಟ್‌ನಿಂದ ಬೆದರಿಕೆಯನ್ನು ಎದುರಿಸುತ್ತಿದೆ, ಇದು ಕಳೆದ ಕೆಲವು ತಿಂಗಳುಗಳಿಂದ ದಾಳಿಗಳನ್ನು ಹೆಚ್ಚಿಸಿದೆ.

ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಾಬೂಲ್‌ನಲ್ಲಿ ರಚಿಸಲಾದ ಸರ್ಕಾರದ ಯಾವುದೇ ಔಪಚಾರಿಕ ಮನ್ನಣೆಗೆ ಧಾವಿಸದಂತೆ ಭಾರತ ಸರ್ಕಾರ ಜಾಗತಿಕ ಸಮುದಾಯಕ್ಕೆ ಎಚ್ಚರಿಕೆ ನೀಡಿದೆ. ಅಫ್ಘಾನ್ ನೆಲವನ್ನು ಭಯೋತ್ಪಾದಕ ಗುಂಪುಗಳು, ವಿಶೇಷವಾಗಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಸಂಘಟನೆಗಳು ಬಳಸುವುದಿಲ್ಲ ಎಂಬ ತಮ್ಮ ಬದ್ಧತೆಯನ್ನು ತಾಲಿಬಾನ್ ತಲುಪಿಸುವಂತೆ ಅದು ವಿಶ್ವ ನಾಯಕರನ್ನು ಒತ್ತಾಯಿಸಿದೆ.

ಇದನ್ನೂ ಓದಿ: ತಾಲಿಬಾನ್​ಗೆ ಸಂದೇಶ ರವಾನಿಸಲು ಆಫ್ಘನ್​ ಕುರಿತು ಸಭೆ ಆಯೋಜನೆ: ಸಭೆಯಿಂದ ಹೊರಗಾದ ಪಾಕ್​-ಚೀನಾ ಜೋಡಿ!

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ