AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯಾಹ್ನದ ಹೊತ್ತಿಗೇ 72 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ವಿತರಣೆ; 1 ಕೋಟಿಯ ಗುರಿಯತ್ತ ದಾಪುಗಾಲು

Covid 19 Vaccine: ಆಗಸ್ಟ್ ತಿಂಗಳಲ್ಲಿ​ 21-27ರವರೆಗೆ ಅತ್ಯಂತ ಹೆಚ್ಚು ಡೋಸ್​ ಲಸಿಕೆ ನೀಡಲಾಗಿದೆ. ಇದನ್ನು ಅತಿ ಹೆಚ್ಚು ಡೋಸ್​ ಲಸಿಕೆ ನೀಡಿದ ವಾರ ಎಂದು ಪರಿಗಣಿಸಲಾಗಿದ್ದು, ಈ ಅವಧಿಯಲ್ಲಿ ಬರೋಬ್ಬರಿ 4.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇಂದು ಮಧ್ಯಾಹ್ನದ ಹೊತ್ತಿಗೇ 72 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ವಿತರಣೆ; 1 ಕೋಟಿಯ ಗುರಿಯತ್ತ ದಾಪುಗಾಲು
ಕೊವಿಡ್ ಲಸಿಕೆ ಪಡೆಯುತ್ತಿರುವ ಮಹಿಳೆ
TV9 Web
| Updated By: Lakshmi Hegde|

Updated on: Aug 31, 2021 | 6:02 PM

Share

ಆಗಸ್ಟ್​ 27 (ಶುಕ್ರವಾರ) ಭಾರತದಲ್ಲಿ 1 ಕೋಟಿ ಡೋಸ್​ ಲಸಿಕೆ ( Covid 19 Vaccine) ನೀಡಿ, ದಾಖಲೆ ಮಾಡಲಾಗಿದೆ. 138 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಪ್ರತಿದಿನ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಲಸಿಕಾ ಅಭಿಯಾನದ ವೇಗ ಹೆಚ್ಚಿಸಬೇಕು ಎಂಬುದು ಕೇಂದ್ರ ಸರ್ಕಾರ(Central Government)ದ ಉದ್ದೇಶ. ಅದನ್ನು ಸಾಧಿಸುವತ್ತ ಮುಂದಡಿ ಇಡಲಾಗುತ್ತಿದೆ. ಹಾಗೇ, ಇಂದು (ಮಂಗಳವಾರ) ಕೂಡ ಮಧ್ಯಾಹ್ನ 3 ಗಂಟೆಯ ಹೊತ್ತಿಗೇ 72 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ನೀಡಲಾಗಿದ್ದು, 1 ಕೋಟಿ ಡೋಸ್​ ತಲುಪುವ ನಿರೀಕ್ಷೆ ಇದೆ.

ಇಲ್ಲಿಯವರೆಗೆ ಅತಿಹೆಚ್ಚು ಅಂದರೆ 1,00,64,032ಗಳಷ್ಟು ಡೋಸ್​ ಲಸಿಕೆಯನ್ನು ಶುಕ್ರವಾರ ನೀಡಲಾಗಿತ್ತು. ಉತ್ತರಪ್ರದೇಶದಲ್ಲಿ 29 ಲಕ್ಷಕ್ಕೂ ಅಧಿಕ ಡೋಸ್​ ಲಸಿಕೆ ನೀಡಲಾಗಿತ್ತು. ಭಾರತ ಶುಕ್ರವಾರ ಮಾಡಿದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಸೇರಿ ಹಲವು ಗಣ್ಯರು ಶ್ಲಾಘಿಸಿದ್ದರು. ಡಬ್ಲ್ಯೂಎಚ್​ಒ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಕೂಡ ಈ ಪ್ರಯತ್ನವನ್ನು ಹೊಗಳಿದ್ದರು.

ಆಗಸ್ಟ್ ತಿಂಗಳಲ್ಲಿ​ 21-27ರವರೆಗೆ ಅತ್ಯಂತ ಹೆಚ್ಚು ಡೋಸ್​ ಲಸಿಕೆ ನೀಡಲಾಗಿದೆ. ಇದನ್ನು ಅತಿ ಹೆಚ್ಚು ಡೋಸ್​ ಲಸಿಕೆ ನೀಡಿದ ವಾರ ಎಂದು ಪರಿಗಣಿಸಲಾಗಿದ್ದು, ಈ ಅವಧಿಯಲ್ಲಿ ಬರೋಬ್ಬರಿ 4.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದನ್ನು ಬಿಟ್ಟರೆ ಜೂನ್​ ಮೂರನೇ ವಾರದಲ್ಲಿ 4.12 ಡೋಸ್​ ಲಸಿಕೆ ನೀಡಲಾಗಿತ್ತು. ಆಗಸ್ಟ್​ ತಿಂಗಳಲ್ಲಿ ಪ್ರತಿ ವಾರವೂ ಸಾಮಾನ್ಯವಾಗಿ 3.5 ಕೋಟಿ ಡೋಸ್​ಗೂ ಅಧಿಕ ಲಸಿಕೆ ನೀಡಲಾಗಿದೆ.

ಆಗಸ್ಟ್​​ನಲ್ಲಿ, ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳು  ಅತಿ ಹೆಚ್ಚು ಜನರಿಗೆ ಲಸಿಕೆ ಕೊಟ್ಟಿವೆ. ಆಗಸ್ಟ್​ ಡಾಟಾ ಪ್ರಕಾರ ಈ ಉತ್ತರ ಪ್ರದೇಶ 2.15 ಕೋಟಿ ಡೋಸ್​, ಮಧ್ಯಪ್ರದೇಶ 1.3 ಕೋಟಿ ಡೋಸ್​ ಮತ್ತು ಮಹಾರಾಷ್ಟ್ರ 1.1 ಕೋಟಿ ಡೋಸ್​ ಲಸಿಕೆ ವಿತರಿಸಿದೆ.

ಇದನ್ನೂ ಓದಿ: Aadhaar Link: ಆಧಾರ್ ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವುದೇ ಅಡಚಣೆಯಿಲ್ಲ; ಯುಐಡಿಎಐ ಸ್ಪಷ್ಟನೆ

ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ