AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Innovation Index 2021: ನೀತಿ ಆಯೋಗದ ಭಾರತ ಇನೋವೇಷನ್ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಭಾರತ ಇನೋವೇಷನ್ ಇಂಡೆಕ್ಸ್​​ ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದು, ತೆಲಂಗಾಣ 2ನೇ ಸ್ಥಾನದಲ್ಲಿದೆ.

India Innovation Index 2021: ನೀತಿ ಆಯೋಗದ ಭಾರತ ಇನೋವೇಷನ್ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ
ನೀತಿ ಆಯೋಗ
TV9 Web
| Edited By: |

Updated on:Jul 21, 2022 | 12:20 PM

Share

ನವದೆಹಲಿ: ನೀತಿ ಆಯೋಗದ (NITI Aayog) ಭಾರತ ಆವಿಷ್ಕಾರ ಸೂಚ್ಯಂಕದ ಮೂರನೇ ಆವೃತ್ತಿಯಲ್ಲಿ ಕರ್ನಾಟಕ, ಮಣಿಪುರ ಮತ್ತು ಚಂಡೀಗಢಗಳು ಆಯಾ ವಿಭಾಗಗಳಲ್ಲಿ ಅಗ್ರಸ್ಥಾನದಲ್ಲಿವೆ. ನೀತಿ ಆಯೋಗದ ಸದಸ್ಯ ಡಾ. ವಿ.ಕೆ ಸಾರಸ್ವತ್, ಸಿಇಒ ಪರಮೇಶ್ವರನ್ ಅಯ್ಯರ್ ಮತ್ತು ಹಿರಿಯ ಸಲಹೆಗಾರ ನೀರಜ್ ಸಿನ್ಹಾ ಮತ್ತು ಇನ್‌ಸ್ಟಿಟ್ಯೂಟ್ ಫಾರ್ ಸ್ಪರ್ಧಾತ್ಮಕತೆಯ ಅಧ್ಯಕ್ಷ ಡಾ. ಅಮಿತ್ ಕಪೂರ್ ಅವರ ಉಪಸ್ಥಿತಿಯಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಭಾರತ ಆವಿಷ್ಕಾರ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

‘ಪ್ರಮುಖ ರಾಜ್ಯಗಳು’ ವಿಭಾಗದಲ್ಲಿ ಕರ್ನಾಟಕವು ಮತ್ತೊಮ್ಮೆ ಅಗ್ರಸ್ಥಾನದಲ್ಲಿದೆ. ಮಣಿಪುರವು ‘ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು’ ವಿಭಾಗದಲ್ಲಿ ಅಗ್ರಸ್ಥಾನದಲ್ಲಿದೆ. ಚಂಡೀಗಢವು ‘ಕೇಂದ್ರಾಡಳಿತ ಪ್ರದೇಶಗಳು ಮತ್ತು ನಗರ ರಾಜ್ಯಗಳು’ ವಿಭಾಗದಲ್ಲಿ ಅಗ್ರಸ್ಥಾನದಲ್ಲಿದೆ.

ಸುಸ್ಥಿರ ಮತ್ತು ಅಂತರ್ಗತ ಬೆಳವಣಿಗೆಗೆ ಆವಿಷ್ಕಾರ ಪ್ರಮುಖವಾಗಿದೆ. ಇದು ನಮ್ಮ ಕಾಲದ ದೊಡ್ಡ ಸವಾಲುಗಳನ್ನು ಪರಿಹರಿಸಲು ನಮಗೆ ಸಹಾಯ ಮಾಡುತ್ತದೆ. ಲಕ್ಷಾಂತರ ಜನರನ್ನು ಬಡತನದಿಂದ ಹೊರತರುವುದು, ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಆತ್ಮನಿರ್ಭರ ಭಾರತಕ್ಕೆ ದಾರಿ ಮಾಡಿಕೊಡಲು ಇದು ಸಹಾಯಕವಾಗಿದೆ ಎಂದು ಡಾ. ಸಾರಸ್ವತ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​ಗೆ ಐವರು ಜಡ್ಜ್​ಗಳ ನೇಮಕಕ್ಕೆ ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ

ನೀತಿ ಆಯೋಗ 2019ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದ್ದ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿತ್ತು. 2020ರ ಪಟ್ಟಿಯಲ್ಲೂ ಕರ್ನಾಟಕ ಅಗ್ರಸ್ಥಾನ ಪಡೆದಿತ್ತು. ಇದೀಗ 2021ರ ನೀತಿ ಆಯೋಗ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿದೆ.

ಆವಿಷ್ಕಾರ, ಅನುಷ್ಠಾನ, ಮಾನವ ಸಂಪನ್ಮೂಲ, ಹೂಡಿಕೆ, ವಿಷಯತಜ್ಞರು, ಉದ್ಯಮಸ್ನೇಹಿ ವಾತಾವರಣ, ಸುರಕ್ಷತೆ, ಸಾಧನೆ, ಜ್ಞಾನಪ್ರಸಾರ ಮುಂತಾದ ಅಂಶಗಳನ್ನು ಆಧರಿಸಿ ಆವಿಷ್ಕಾರ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಎಲ್ಲ ಮಾನದಂಡಗಳಲ್ಲಿ ಕರ್ನಾಟಕ ಅಗ್ರಸ್ಥಾನ ಕಾಯ್ದುಕೊಂಡಿದೆ.

Published On - 12:00 pm, Thu, 21 July 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ