AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ
ಬೋರಿಸ್ ಜಾನ್ಸನ್
shruti hegde
| Edited By: |

Updated on: Dec 02, 2020 | 6:53 PM

Share

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಇಂಗ್ಲೆಂಡ್​ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ.

ಇಂಗ್ಲೆಂಡ್​ ಪ್ರಧಾನಿ ಭಾರತದ ಗಣರಾಜ್ಯೋತ್ಸವ ಪೆರೇಡ್​ಗೆ ಅತಿಥಿ ಆಗಿ ಆಗಮಿಸಿದ್ದು 1993ರಲ್ಲೇ ಕೊನೆ. ಈಗ 27 ವರ್ಷಗಳ ನಂತರ ಬ್ರಿಟನ್​ ಪ್ರಧಾನಿಗೆ ಆಹ್ವಾನ ನೀಡಲಾಗಿದೆ. ಬೋರಿಸ್​ ಜಾನ್ಸನ್​ ಭಾರತದ ಆಮಂತ್ರಣ ಸ್ವೀಕರಿಸಿದರೆ ಮುಂದಿನ ವರ್ಷದ ಗಣಾರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಆಗಲಿದ್ದಾರೆ. ನವೆಂಬರ್ 27ರಂದು ಮೋದಿ ಹಾಗೂ ಬೋರಿಸ್​ ಜಾನ್ಸನ್​ ದೂರವಾಣಿ ಮೂಲಕ ಮಾತನಾಡಿದ್ದಾರಂತೆ. ಈ ವೇಳೆ ಮೋದಿ ಔಪಚಾರಿಕವಾಗಿ ಬ್ರಿಟನ್​ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಬ್ರಿಟಿಷ್​ ರಾಯಭಾರಿ ಕಚೇರಿ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆಯಲ್ಲಿ  ಎರಡೂ ದೇಶಗಳು ಆಮದು-ರಫ್ತಿನ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ.

ಈ ಭೇಟಿ ಮುಖ್ಯವೇಕೆ?: ಭಾರತ ಹಾಗೂ ಬ್ರಿಟನ್​ ಸಂಬಂಧ ಈ ಮೊದಲಿನಿಂದಲೂ ಉತ್ತಮವಾಗಿದೆ. ಒಂದೊಮ್ಮೆ ಬೋರಿಸ್​ ಜಾನ್ಸನ್ ಈ ಬಾರಿ ಭಾರತಕ್ಕೆ ಭೇಟಿ ನೀಡಿದರೆ ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಉತ್ತಮಗೊಳ್ಳಲಿದೆ. ಅಷ್ಟೇ ಅಲ್ಲ, ಸಾಕಷ್ಟು ಒಪ್ಪಂದಗಳು ಕೂಡ ನಡೆಯುವ ಸಾಧ್ಯತೆಗಳಿರುತ್ತವೆ. ಹೀಗಾಗಿ, ಈ ಭೇಟಿ ತುಂಬಾನೇ ಪ್ರಮುಖವಾಗಲಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಈಗ ಅತಿ ದೀರ್ಘಾವಧಿಯ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ!

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ