AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ
ಬೋರಿಸ್ ಜಾನ್ಸನ್
shruti hegde
| Edited By: |

Updated on: Dec 02, 2020 | 6:53 PM

Share

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಇಂಗ್ಲೆಂಡ್​ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ.

ಇಂಗ್ಲೆಂಡ್​ ಪ್ರಧಾನಿ ಭಾರತದ ಗಣರಾಜ್ಯೋತ್ಸವ ಪೆರೇಡ್​ಗೆ ಅತಿಥಿ ಆಗಿ ಆಗಮಿಸಿದ್ದು 1993ರಲ್ಲೇ ಕೊನೆ. ಈಗ 27 ವರ್ಷಗಳ ನಂತರ ಬ್ರಿಟನ್​ ಪ್ರಧಾನಿಗೆ ಆಹ್ವಾನ ನೀಡಲಾಗಿದೆ. ಬೋರಿಸ್​ ಜಾನ್ಸನ್​ ಭಾರತದ ಆಮಂತ್ರಣ ಸ್ವೀಕರಿಸಿದರೆ ಮುಂದಿನ ವರ್ಷದ ಗಣಾರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಆಗಲಿದ್ದಾರೆ. ನವೆಂಬರ್ 27ರಂದು ಮೋದಿ ಹಾಗೂ ಬೋರಿಸ್​ ಜಾನ್ಸನ್​ ದೂರವಾಣಿ ಮೂಲಕ ಮಾತನಾಡಿದ್ದಾರಂತೆ. ಈ ವೇಳೆ ಮೋದಿ ಔಪಚಾರಿಕವಾಗಿ ಬ್ರಿಟನ್​ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಬ್ರಿಟಿಷ್​ ರಾಯಭಾರಿ ಕಚೇರಿ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆಯಲ್ಲಿ  ಎರಡೂ ದೇಶಗಳು ಆಮದು-ರಫ್ತಿನ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ.

ಈ ಭೇಟಿ ಮುಖ್ಯವೇಕೆ?: ಭಾರತ ಹಾಗೂ ಬ್ರಿಟನ್​ ಸಂಬಂಧ ಈ ಮೊದಲಿನಿಂದಲೂ ಉತ್ತಮವಾಗಿದೆ. ಒಂದೊಮ್ಮೆ ಬೋರಿಸ್​ ಜಾನ್ಸನ್ ಈ ಬಾರಿ ಭಾರತಕ್ಕೆ ಭೇಟಿ ನೀಡಿದರೆ ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಉತ್ತಮಗೊಳ್ಳಲಿದೆ. ಅಷ್ಟೇ ಅಲ್ಲ, ಸಾಕಷ್ಟು ಒಪ್ಪಂದಗಳು ಕೂಡ ನಡೆಯುವ ಸಾಧ್ಯತೆಗಳಿರುತ್ತವೆ. ಹೀಗಾಗಿ, ಈ ಭೇಟಿ ತುಂಬಾನೇ ಪ್ರಮುಖವಾಗಲಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಈಗ ಅತಿ ದೀರ್ಘಾವಧಿಯ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ!

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು