AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ಗೆ ಆಹ್ವಾನ
ಬೋರಿಸ್ ಜಾನ್ಸನ್
shruti hegde
| Edited By: |

Updated on: Dec 02, 2020 | 6:53 PM

Share

ನವದೆಹಲಿ: 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಇಂಗ್ಲೆಂಡ್​ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ.

ಇಂಗ್ಲೆಂಡ್​ ಪ್ರಧಾನಿ ಭಾರತದ ಗಣರಾಜ್ಯೋತ್ಸವ ಪೆರೇಡ್​ಗೆ ಅತಿಥಿ ಆಗಿ ಆಗಮಿಸಿದ್ದು 1993ರಲ್ಲೇ ಕೊನೆ. ಈಗ 27 ವರ್ಷಗಳ ನಂತರ ಬ್ರಿಟನ್​ ಪ್ರಧಾನಿಗೆ ಆಹ್ವಾನ ನೀಡಲಾಗಿದೆ. ಬೋರಿಸ್​ ಜಾನ್ಸನ್​ ಭಾರತದ ಆಮಂತ್ರಣ ಸ್ವೀಕರಿಸಿದರೆ ಮುಂದಿನ ವರ್ಷದ ಗಣಾರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಆಗಲಿದ್ದಾರೆ. ನವೆಂಬರ್ 27ರಂದು ಮೋದಿ ಹಾಗೂ ಬೋರಿಸ್​ ಜಾನ್ಸನ್​ ದೂರವಾಣಿ ಮೂಲಕ ಮಾತನಾಡಿದ್ದಾರಂತೆ. ಈ ವೇಳೆ ಮೋದಿ ಔಪಚಾರಿಕವಾಗಿ ಬ್ರಿಟನ್​ ಪ್ರಧಾನಿಯನ್ನು ಆಹ್ವಾನಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಬ್ರಿಟಿಷ್​ ರಾಯಭಾರಿ ಕಚೇರಿ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ನವೆಂಬರ್ ತಿಂಗಳಲ್ಲಿ ಇಂಗ್ಲೆಡ್​ ಹಾಗೂ ಭಾರತದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಭವಿಷ್ಯದಲ್ಲಿ ನಡೆಯಲಿರುವ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆಯಲ್ಲಿ  ಎರಡೂ ದೇಶಗಳು ಆಮದು-ರಫ್ತಿನ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ.

ಈ ಭೇಟಿ ಮುಖ್ಯವೇಕೆ?: ಭಾರತ ಹಾಗೂ ಬ್ರಿಟನ್​ ಸಂಬಂಧ ಈ ಮೊದಲಿನಿಂದಲೂ ಉತ್ತಮವಾಗಿದೆ. ಒಂದೊಮ್ಮೆ ಬೋರಿಸ್​ ಜಾನ್ಸನ್ ಈ ಬಾರಿ ಭಾರತಕ್ಕೆ ಭೇಟಿ ನೀಡಿದರೆ ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಉತ್ತಮಗೊಳ್ಳಲಿದೆ. ಅಷ್ಟೇ ಅಲ್ಲ, ಸಾಕಷ್ಟು ಒಪ್ಪಂದಗಳು ಕೂಡ ನಡೆಯುವ ಸಾಧ್ಯತೆಗಳಿರುತ್ತವೆ. ಹೀಗಾಗಿ, ಈ ಭೇಟಿ ತುಂಬಾನೇ ಪ್ರಮುಖವಾಗಲಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಈಗ ಅತಿ ದೀರ್ಘಾವಧಿಯ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್