AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಒಂದು ಪ್ರಮುಖ ರಾಷ್ಟ್ರ..ನಮ್ಮಿಂದ ಅದಕ್ಕೆ ಏನೂ ಅಪಾಯವಿಲ್ಲ’-ತಾಲಿಬಾನ್​ ವಕ್ತಾರ

ಇದೇ ಜಬಿಜುಲ್ಲಾ ಮುಜಾಹಿದ್​ ಮೊನ್ನೆ ಆಗಸ್ಟ್​ 26ರಂದು ತಾಲಿಬಾನಿಗಳು ಪಾಕಿಸ್ತಾನವನ್ನು ತಮ್ಮ ಎರಡನೇ ಮನೆಯಂತೆ ನೋಡುತ್ತೇವೆ ಎಂದಿದ್ದರು.

‘ಭಾರತ ಒಂದು ಪ್ರಮುಖ ರಾಷ್ಟ್ರ..ನಮ್ಮಿಂದ ಅದಕ್ಕೆ ಏನೂ ಅಪಾಯವಿಲ್ಲ’-ತಾಲಿಬಾನ್​ ವಕ್ತಾರ
ಜಬೀಹುಲ್ಲಾ ಮುಜಾಹಿದ್​
TV9 Web
| Updated By: Lakshmi Hegde|

Updated on: Aug 30, 2021 | 7:32 PM

Share

ನಮ್ಮ ನೆರೆಹೊರೆಯ ರಾಷ್ಟ್ರಗಳಲ್ಲೇ ಭಾರತ (India) ಒಂದು ಪ್ರಮುಖ ದೇಶವಾಗಿದೆ ಮತ್ತು ಆ ರಾಷ್ಟ್ರಕ್ಕೆ ತಾಲಿಬಾನಿ (Taliban Terrorists)ಗಳಿಂದ ಯಾವುದೇ ಅಪಾಯವಾಗಲಿ, ಬೆದರಿಕೆಯಾಗಲಿ ಖಂಡಿತ ಇಲ್ಲ ಎಂದು ತಾಲಿಬಾನ್​ ವಕ್ತಾರ (Taliban Spokesperson) ಜಬಿಜುಲ್ಲಾ ಮುಜಾಹಿದ್​ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನದೊಂದಿಗೆ ಭಾರತಕ್ಕೆ ಉತ್ತಮ ಬಾಂಧವ್ಯ ಇತ್ತು. ಅದೇ ರೀತಿಯ ಉತ್ತಮ ಸಂಬಂಧವನ್ನು ಹೊಂದಲು ತಾಲಿಬಾನ್​ ಕೂಡ ಬಯಸುತ್ತದೆ ಎಂದಿದ್ದಾರೆ.

ಆಗಸ್ಟ್​ 15ರಂದು ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದಾರೆ. ಅಂದಿನಿಂದಲೂ ಭಾರತವೂ ಕೂಡ ತಾಲಿಬಾನ್​ ಬಗ್ಗೆ ಹೆಚ್ಚೇನೂ ಹೇಳಿಲ್ಲ. ಪ್ರಧಾನಿ ಮೋದಿಯವರಂತೂ ಒಂದೇ ಒಂದೂ ಮಾತನ್ನೂ ಇನ್ನೂ ಆಡಿಲ್ಲ. ವಿದೇಶಾಂಗ ವ್ಯವಹಾರ ಸಚಿವ ಜೈಶಂಕರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್​ ರಾವತ್ ಮಾತನಾಡಿದ್ದರೂ ಅಂಥ ಯಾವುದೇ ನಿರ್ಣಯಸಹಿತ ಮಾತುಗಳಲ್ಲ ಅವು. ಇನ್ನು ತಾಲಿಬಾನ್ ಕೂಡ ಪ್ರಾರಂಭದಿಂದಲೂ ಭಾರತದ ಬಗ್ಗೆ ಒಳ್ಳೆಯ ಒಲವು ತೋರಿಸುತ್ತಲೇ ಬಂದಿದೆ. ಕಾಶ್ಮೀರದ ವಿಚಾರದಲ್ಲಿ ನಾವು ತಲೆ ಹಾಕುವುದಿಲ್ಲ, ಅದು ಪಾಕ್​-ಭಾರತ ಆಂತರಿಕ ವಿಚಾರವೆಂದೂ ಹೇಳಿಕೊಂಡಿದೆ. ಇದೀಗ ಜಬಿಜುಲ್ಲಾ ಮುಜಾಹಿದ್ ಕೂಡ ಅದನ್ನೇ ಪುನರುಚ್ಚರಿಸಿದ್ದಾರೆ.

ಭಾರತದ ವಿರುದ್ಧ ಪಿತೂರಿ ಮಾಡುತ್ತಿರುವ ಪಾಕಿಸ್ತಾನಕ್ಕೆ ತಾಲಿಬಾನ್ ಬೆಂಬಲ ನೀಡುತ್ತಿದೆ ಎಂಬ ವರದಿಯ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಿದ ಜಬಿಜುಲ್ಲಾ ಮುಜಾಹಿದ್, ಅದೆಲ್ಲ ಆಧಾರ ರಹಿತ ವರದಿಗಳು. ನಮ್ಮಿಂದ ಯಾವುದೇ ದೇಶಕ್ಕೂ ಅಪಾಯವಿಲ್ಲ. ಹಾಗೇ, ಅದೇ ಭರವಸೆಯನ್ನೇ ಭಾರತಕ್ಕೆ ಕೊಡುತ್ತೇವೆ. ನಾವು ತೊಂದರೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಉಲ್ಟಾ ಹೊಡೆದ್ರಾ ಜಬಿಜುಲ್ಲಾ? ಇದೇ ಜಬಿಜುಲ್ಲಾ ಮುಜಾಹಿದ್​ ಮೊನ್ನೆ ಆಗಸ್ಟ್​ 26ರಂದು ತಾಲಿಬಾನಿಗಳು ಪಾಕಿಸ್ತಾನವನ್ನು ತಮ್ಮ ಎರಡನೇ ಮನೆಯಂತೆ ನೋಡುತ್ತೇವೆ ಎಂದಿದ್ದರು. ಅಫ್ಘಾನಿಸ್ತಾನ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿದೆ. ಇನ್ನು ಧರ್ಮ, ಸಂಪ್ರದಾಯದ ವಿಚಾರದಲ್ಲೂ ನಾವು ತುಂಬ ಸಮಾನಾಂತರವಾಗಿದ್ದೇವೆ. ಹಾಗಾಗಿ ಪಾಕಿಸ್ತಾನದೊಂದಿಗೆ ನಮ್ಮ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Tokyo Paralympics: 8 ನೇ ವಯಸ್ಸಿಗೆ ಪಾರ್ಶ್ವವಾಯು.. ಕೋಚ್ ಇಲ್ಲದೆ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಗೆದ್ದ ಯೋಗೀಶ್ ಜೀವನಗಾಥೆಯಿದು

ಲಸಿಕಾ ಅಭಿಯಾನ ಸಾಗುತ್ತಿರುವ ವೇಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಶಂಸಿದ್ದಾರೆ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!