ಭಾರತ ಡ್ರೋನ್ ನಿಗ್ರಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಸೇನಾಪಡೆಗೆ ಶೀಘ್ರದಲ್ಲೇ ಲಭ್ಯವಾಗಲಿದೆ: ಅಮಿತ್ ಶಾ

“ಯಾವುದೇ ದೇಶವು ಸುಭದ್ರವಾಗಿರುವಾಗ ಮಾತ್ರ ಪ್ರಗತಿ ಹೊಂದಲು ಮತ್ತು ಅದರ ಸಂಸ್ಕೃತಿಯನ್ನು ಸಮೃದ್ಧಗೊಳಿಸಲು ಸಾಧ್ಯವಾಗುತ್ತದೆ. ನೀವು ದೇಶವನ್ನು ಭದ್ರಪಡಿಸುವವರು. ರಾಷ್ಟ್ರವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಮೋದಿ ಸರ್ಕಾರಕ್ಕೆ ಗಡಿ ಭದ್ರತೆ ಎಂದರೆ ರಾಷ್ಟ್ರೀಯ ಭದ್ರತೆ...

ಭಾರತ ಡ್ರೋನ್ ನಿಗ್ರಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ, ಇದು ಸೇನಾಪಡೆಗೆ ಶೀಘ್ರದಲ್ಲೇ ಲಭ್ಯವಾಗಲಿದೆ: ಅಮಿತ್ ಶಾ
ಅಮಿತ್ ಶಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Dec 05, 2021 | 8:47 PM

ಜೈಸಲ್ಮೇರ್ : ದೇಶದ ಗಡಿಯಲ್ಲಿ ಹೆಚ್ಚುತ್ತಿರುವ ಡ್ರೋನ್‌ ಬೆದರಿಕೆಯನ್ನು ತಡೆಯಲು ಭಾರತವು ಸ್ವದೇಶಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಶೀಘ್ರದಲ್ಲೇ ಭದ್ರತಾ ಪಡೆಗಳಿಗೆ ಲಭ್ಯವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭಾನುವಾರ ಹೇಳಿದ್ದಾರೆ. “ಜಗತ್ತಿನಲ್ಲಿ ಲಭ್ಯವಿರುವ ಅತ್ಯುತ್ತಮ ತಂತ್ರಜ್ಞಾನವನ್ನು ಗಡಿ ಭದ್ರತೆಗಾಗಿ ನಿಮಗೆ ನೀಡಲಾಗುವುದು. ಇದು ಸರ್ಕಾರದ ಬದ್ಧತೆ. ಡ್ರೋನ್‌ಗಳ ಬೆದರಿಕೆಯನ್ನು ಎದುರಿಸಲು, ಬಿಎಸ್‌ಎಫ್, ಎನ್‌ಎಸ್‌ಜಿ ಮತ್ತು ಡಿಆರ್‌ಡಿಒ ಡ್ರೋನ್ ನಿಗ್ರಹ ರಕ್ಷಣಾ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ. ನಮ್ಮ ವಿಜ್ಞಾನಿಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಶೀಘ್ರದಲ್ಲೇ ನಾವು ದೇಶದಲ್ಲಿ ಸ್ಥಳೀಯ ಆಂಟಿ-ಡ್ರೋನ್ ವ್ಯವಸ್ಥೆಯನ್ನು ಹೊಂದಲಿದ್ದೇವೆ ”ಎಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ (Jaisalmer) ಪಡೆಯ 57 ನೇ ರೈಸಿಂಗ್ ಡೇ (57th Raising Day) ಸಂದರ್ಭದಲ್ಲಿ ಬಿಎಸ್‌ಎಫ್ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಶಾ ಹೇಳಿದ್ದಾರೆ. ಭಾರತ-ಪಾಕಿಸ್ತಾನ ಗಡಿಯಲ್ಲಿ ಇದೇ ಮೊದಲ ಬಾರಿಗೆ ಬಿಎಸ್‌ಎಫ್ ರೈಸಿಂಗ್ ಡೇ ಆಚರಿಸಲಾಗುತ್ತಿದೆ. ಸೇನಾ ಪಡೆಯ ಈ ಕ್ರಮವನ್ನು ಶ್ಲಾಘಿಸಿದ ಗೃಹ ಸಚಿವರು, ಸೇನೆಯ ಯೋಧರು ಪ್ರತಿದಿನ ಶೌರ್ಯದ ಉದಾಹರಣೆಗಳನ್ನು ನೀಡುವ ಸ್ಥಳಗಳಲ್ಲಿ ಇಂತಹ ಆಚರಣೆಗಳನ್ನು ಮಾಡಬೇಕೇ ಹೊರತು ದೆಹಲಿಯಲ್ಲಲ್ಲ ಎಂದು ಹೇಳಿದರು. “ಯಾವುದೇ ದೇಶವು ಸುಭದ್ರವಾಗಿರುವಾಗ ಮಾತ್ರ ಪ್ರಗತಿ ಹೊಂದಲು ಮತ್ತು ಅದರ ಸಂಸ್ಕೃತಿಯನ್ನು ಸಮೃದ್ಧಗೊಳಿಸಲು ಸಾಧ್ಯವಾಗುತ್ತದೆ. ನೀವು ದೇಶವನ್ನು ಭದ್ರಪಡಿಸುವವರು. ರಾಷ್ಟ್ರವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಮೋದಿ ಸರ್ಕಾರಕ್ಕೆ ಗಡಿ ಭದ್ರತೆ ಎಂದರೆ ರಾಷ್ಟ್ರೀಯ ಭದ್ರತೆ. ಆದ್ದರಿಂದ ನೆನಪಿಡಿ, ನೀವು ಕೇವಲ ಗಡಿಗಳನ್ನು ಭದ್ರಪಡಿಸುತ್ತಿಲ್ಲ ಆದರೆ ರಾಷ್ಟ್ರಕ್ಕೆ ಜಗತ್ತಿನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಅವಕಾಶವನ್ನು ನೀಡುತ್ತಿದ್ದೀರಿ ಎಂದು ಶಾ ಹೇಳಿದರು.

ಸೇನಾ ಸಿಬ್ಬಂದಿಯ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಮಾತ್ರವಲ್ಲದೆ ಗಡಿಯ ಮೂಲಸೌಕರ್ಯವನ್ನು ಸುಧಾರಿಸುವಲ್ಲಿ ಹೆಚ್ಚಿನ ಹೂಡಿಕೆ ಮಾಡುತ್ತಿದೆ ಎಂದು ಶಾ ಹೇಳಿದರು.  “ಗಡಿಗಳಲ್ಲಿ ಉತ್ತಮ ಮೂಲಸೌಕರ್ಯಕ್ಕಾಗಿ, ರಸ್ತೆ ನಿರ್ಮಾಣಕ್ಕಾಗಿ ಬಜೆಟ್ ಅನ್ನು 2008 ಮತ್ತು 2014 ರ ನಡುವೆ 23,000 ಕೋಟಿ ರೂ.ಗಳಿಂದ 2014 ಮತ್ತು 2020 ರ ನಡುವೆ 44,600 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು ಗಡಿಯ ಮೂಲಸೌಕರ್ಯವನ್ನು ಸುಧಾರಿಸಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ತೋರಿಸುತ್ತದೆ” ಎಂದು ಶಾ ಹೇಳಿದರು.

ಗಡಿ ಪ್ರದೇಶಗಳಲ್ಲಿ ವಾಸಿಸುವ ಬಿಎಸ್‌ಎಫ್ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಬಂಧವನ್ನು ಸುಧಾರಿಸುವ ಬಗ್ಗೆಯೂ ಗೃಹ ಸಚಿವರು ಒತ್ತು ನೀಡಿದರು. ಬಿಎಸ್‌ಎಫ್ ಜನರ ಬಗ್ಗೆ ಕಾಳಜಿ ವಹಿಸಬೇಕು ಮತ್ತು ಎಲ್ಲಾ ಸರ್ಕಾರಿ ಯೋಜನೆಗಳು ನೆಲದ ಮೇಲೆ ಜಾರಿಯಾಗುತ್ತಿವೆಯೇ ಎಂದು ನೋಡಬೇಕು ಎಂದು ಅವರು ಹೇಳಿದರು.

ಸರ್ಕಾರವು ಗಡಿಯಲ್ಲಿ ವಾಸಿಸುವವರಿಗೆ ಅನೇಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. ಗಡಿಗಳನ್ನು ಭದ್ರಪಡಿಸುವುದರ ಜೊತೆಗೆ, ನಿಮಗೆ ಸಮಯ ಸಿಕ್ಕಾಗಲೆಲ್ಲಾ, ಈ ಯೋಜನೆಗಳ ಅನುಷ್ಠಾನಕ್ಕೆ ಸ್ವಲ್ಪ ಗಮನ ಕೊಡಿ ಎಂದು ನಾನು ಬಿಎಸ್‌ಎಫ್ ಯೋಧರನ್ನು ಒತ್ತಾಯಿಸುತ್ತೇನೆ. ನಾವು ನಮ್ಮ ಗಡಿಭಾಗದ ಜನರನ್ನು ಸಂತೋಷವಾಗಿಡಲು, ಅವರ ಸೌಲಭ್ಯಗಳನ್ನು ಉತ್ತಮಗೊಳಿಸಲು ಸಾಧ್ಯವಾದರೆ, ಅದು ಗಡಿಗಳನ್ನು ಭದ್ರಪಡಿಸುವಲ್ಲಿ ನಿಮಗೆ ಸಹಾಯ ಮಾಡುತ್ತದೆ. ಗಡಿಭಾಗದ ಜನರೊಂದಿಗೆ ನೀವಿಬ್ಬರೂ ಸಂಬಂಧ ಮತ್ತು ಸಂವಹನವನ್ನು ನಿರ್ವಹಿಸುತ್ತೀರಿ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು.

ಕರ್ತವ್ಯದ ವೇಳೆ ತಮ್ಮ ಪ್ರಾಣವನ್ನು ಅರ್ಪಿಸಿದ ಬಿಎಸ್‌ಎಫ್‌ನ ಯೋಧರಿಗೆ ಶಾ ಅವರು ಶ್ರದ್ಧಾಂಜಲಿ ಸಲ್ಲಿಸಿದರು. “1971 ರ ಯುದ್ಧದಂತಹ ವಿವಿಧ ಐತಿಹಾಸಿಕ ಘಟನೆಗಳಲ್ಲಿ ಬಿಎಸ್‌ಎಫ್ ಪಾತ್ರವನ್ನು ಅವರು ನೆನಪಿಸಿಕೊಂಡರು, ಬಿಎಸ್‌ಎಫ್ ಸಿಬ್ಬಂದಿಗಳು ಸಂಖ್ಯಾತ್ಮಕವಾಗಿ ಬಲಾಢ್ಯವಾದ ಪಡೆಗಳ ಬೆಳವಣಿಗೆಯ ಆರಂಭಿಕ ಹಂತದಲ್ಲಿದ್ದರೂ ಅದರ ವಿರುದ್ಧ ಧೈರ್ಯದಿಂದ ಹೋರಾಡಿದರು” ಎಂದು ಬಿಎಸ್‌ಎಫ್ ಹೇಳಿದೆ.

“ಪರೇಡ್ ಸಮಯದಲ್ಲಿ, ಗಡಿ ಭದ್ರತಾ ಪಡೆಯ ವಿವಿಧ ಗಡಿ ಪ್ರದೇದ ತುಕಡಿಗಳು ಸೀಮಾ ಪ್ರಹಾರಿಗಳ ಶೌರ್ಯ, ಸಾಹಸ ಮತ್ತು ರಾಷ್ಟ್ರದ ಬದ್ಧತೆಯನ್ನು ಪ್ರದರ್ಶಿಸಿದರು. ಮೆರವಣಿಗೆಯಲ್ಲಿ ಮಹಿಳಾ ಪ್ರಹರಿ ತುಕಡಿ, ಅಲಂಕೃತ ಅಧಿಕಾರಿಗಳು ಮತ್ತು ಪುರುಷರು, ಪ್ರಸಿದ್ಧ ಒಂಟೆ ಕಾಂಟೆಜೆಂಟ್ ಮತ್ತು ಒಂಟೆ ಬ್ಯಾಂಡ್, ಮೌಂಟೆಡ್ ಪಡೆ, ಡಾಗ್ ಸ್ಕ್ವಾಡ್, ಬಿಎಸ್‌ಎಫ್ ಬ್ಯಾಗ್‌ಪೈಪರ್‌ಗಳ ವಿಶೇಷ ಪ್ರದರ್ಶನವಿತ್ತು ಎಂದು ಬಿಎಸ್ಎಫ್ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಳವಾದ ಮಿರಾಜ್ ಫೈಟರ್ ಜೆಟ್ ಟೈರ್ ಪತ್ತೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ