PM Modi: ಉಕ್ರೇನ್‌ನಲ್ಲಿ ಶಾಂತಿ ಮರುಸ್ಥಾಪಿಸಲು ಇತರೆ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಭಾರತ ಸಿದ್ಧ; ಪ್ರಧಾನಿ ಮೋದಿ

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಘರ್ಷಣೆಗಳು "ನಮ್ಮೆಲ್ಲರಿಗೂ ಆಳವಾದ ಕಾಳಜಿಯ ವಿಷಯವಾಗಿದೆ" ಎಂದು ವಾರ್ಸಾದಲ್ಲಿ ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗಿನ ಮಾತುಕತೆಯ ನಂತರ ಮಾಧ್ಯಮ ಸಂವಾದದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

PM Modi: ಉಕ್ರೇನ್‌ನಲ್ಲಿ ಶಾಂತಿ ಮರುಸ್ಥಾಪಿಸಲು ಇತರೆ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಭಾರತ ಸಿದ್ಧ; ಪ್ರಧಾನಿ ಮೋದಿ
ನರೇಂದ್ರ ಮೋದಿ

Updated on: Aug 22, 2024 | 10:45 PM

ನವದೆಹಲಿ: ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಭಾರತವು ಸ್ನೇಹಪರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಘರ್ಷಣೆಗಳು “ನಮ್ಮೆಲ್ಲರಿಗೂ ಆಳವಾದ ಕಾಳಜಿಯ ವಿಷಯವಾಗಿದೆ” ಎಂದು ವಾರ್ಸಾದಲ್ಲಿ ತನ್ನ ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಮಾತುಕತೆಯ ನಂತರ ಮಾಧ್ಯಮ ಸಂವಾದದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಅನ್ನು ಸಂಧಾನಕ್ಕೆ ತರುವಲ್ಲಿ ಭಾರತವು ಯಾವುದಾದರೂ ಪಾತ್ರವನ್ನು ವಹಿಸಬಹುದೆಂದು ನಿಕಟವಾಗಿ ವೀಕ್ಷಿಸುತ್ತಿರುವ ಕೈವ್‌ಗೆ ಮೋದಿ ನಾಳೆ ಭೇಟಿ ನೀಡುತ್ತಿದ್ದಾರೆ. ಅದರ ಒಂದು ದಿನ ಮುಂಚಿತವಾಗಿ ಮೋದಿಯವರ ಈ ಹೇಳಿಕೆಗಳು ಬಂದಿವೆ.


ಇದನ್ನೂ ಓದಿ: Mamata Banerjee: ಅತ್ಯಾಚಾರ ವಿರೋಧಿ ಕಾನೂನನ್ನು ಕಠಿಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎಂಬುದು ಭಾರತದ ದೃಢವಾದ ನಂಬಿಕೆಯಾಗಿದೆ. ಯಾವುದೇ ಬಿಕ್ಕಟ್ಟಿನಲ್ಲಿ, ಮುಗ್ಧ ಜನರ ಪ್ರಾಣಹಾನಿ ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ. ಇದಕ್ಕಾಗಿ ಭಾರತವು ಸ್ನೇಹಪರ ರಾಷ್ಟ್ರಗಳೊಂದಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us