AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ: ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್

ಇಡೀ ದೇಶ ಸುರಕ್ಷಿತ ಆಗುವವರೆಗೂ ನಾವು ಸುರಕ್ಷಿತ ಅಲ್ಲ ಎಂಬುದನ್ನು ಗಮನದಲ್ಲಿಡಬೇಕು. ಒಂದೆಡೆಯಿಂದ ಕೊರೊನಾ ಇನ್ನೊಂದೆಡೆಗೆ ಹರಡುತ್ತದೆ ಎಂದು ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್ ತಿಳಿಸಿದರು.

ಭಾರತದಲ್ಲಿ ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ: ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್
ಡಾ. ವಿ.ಕೆ.ಪೌಲ್​
TV9 Web
| Edited By: |

Updated on:Jul 02, 2021 | 7:40 PM

Share

ಬೆಂಗಳೂರು: ಭಾರತದಲ್ಲಿ ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ. ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ 7 ರಾಜ್ಯಗಳಿಗೆ ಕೇಂದ್ರ ತಂಡಗಳನ್ನು ಕಳಿಸಿಕೊಡಲಾಗಿದೆ. ಇಡೀ ದೇಶ ಸುರಕ್ಷಿತ ಆಗುವವರೆಗೂ ನಾವು ಸುರಕ್ಷಿತ ಅಲ್ಲ ಎಂಬುದನ್ನು ಗಮನದಲ್ಲಿಡಬೇಕು. ಒಂದೆಡೆಯಿಂದ ಕೊರೊನಾ ಇನ್ನೊಂದೆಡೆಗೆ ಹರಡುತ್ತದೆ ಎಂದು ಕೇಂದ್ರ ಕೊರೊನಾ ಕಾರ್ಯಪಡೆ ಅಧ್ಯಕ್ಷ ವಿ.ಕೆ.ಪೌಲ್ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯೂರೋಪ್​ನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಂಜಾಬ್ ರಾಜ್ಯದ ಪೊಲೀಸ್ ಇಲಾಖೆಯಲ್ಲಿ 4868 ಜನರಿಗೆ ಲಸಿಕೆ ಸಿಕ್ಕಿರಲಿಲ್ಲ. ಇವರ ಪೈಕಿ 15 ಜನರು ಸಾವನ್ನಪ್ಪಿದ್ದಾರೆ. ಅಂದರೆ ಸಾವಿರಕ್ಕೆ ಮೂವರ ಸಾವು. 35,856 ಜನರಿಗೆ ಸಿಂಗಲ್ ಡೋಸ್ ಲಸಿಕೆ ಸಿಕ್ಕಿತ್ತು. ಇವರ ಪೈಕಿ 9 ಜನರು ಸಾವನ್ನಪ್ಪಿದ್ದರು. ಅಂದರೆ ಸಾವಿರಕ್ಕೆ 0.25 ಸಾವು. ಡಬಲ್ ಡೋಸ್ ಪಡೆದ 42 ಸಾವಿರ ಪೊಲೀಸರ ಪೈಕಿ ಕೇವಲ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಚಂಡೀಗಢ ಪಿಜಿಐಎಂಆರ್ ನಡೆಸಿದ ಅಧ್ಯಯನವು ಹೇಳಿದೆ.

ಲಸಿಕೆ ಪಡೆದವರಿಗೆ ಕೊರೊನಾ ಸಾವಿನಿಂದ ರಕ್ಷಣೆ ಸಿಗುತ್ತದೆ ಎಂಬುದನ್ನು ಈ ಅಧ್ಯಯನವು ಸಾಬೀತುಪಡಿಸಿದೆ. ದೇಶಕ್ಕೆ 3ನೇ ಅಲೆ ಬಾಧಿಸುವುದು ಬೇಡ. ನಾವೆಲ್ಲವೂ ವೈಜ್ಞಾನಿಕ ದೃಷ್ಟಿಕೋನ ಅಳವಡಿಸಿಕೊಂಡರೆ 3ನೇ ಅಲೆಯನ್ನು ಖಂಡಿತ ತಡೆಯಬಹುದು. ನಮ್ಮ ದೇಶದಲ್ಲಿಯೂ ಮಾಡೆರ್ನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಲಸಿಕೆ ಉತ್ಪಾದಕರು ನೀಡಿದ ಭರವಸೆಯಂತೆ 216 ಕೋಟಿ ಡೋಸ್ ಲಸಿಕೆ ಲಭ್ಯ ಎಂದಿದ್ದೇವೆ. ಜೈಡಸ್ ಕ್ಯಾಡಿಲಾ ಹೆಲ್ತ್ ಕೇರ್ ಕಂಪನಿಯು ಆಗಸ್ಟ್ ತಿಂಗಳಿಂದ ಡಿಸೆಂಬರ್​ವರೆಗೆ 5 ಕೋಟಿ ಡೋಸ್ ಪೂರೈಕೆ ಮಾಡಲಿದೆ. ಮೊದಲು 216 ಕೋಟಿ ಡೋಸ್ ಸಿಗುತ್ತೆ ಎಂಬ ನಿರೀಕ್ಷೆ ಇರಿಸಿಕೊಂಡಿದ್ದೆವು ಎಂದು ವಿವರಿಸಿದರು.

ಜೂನ್ 21ರ ಬಳಿಕ ದೇಶದಲ್ಲಿ ಲಸಿಕೆ ನೀಡಿಕೆಗೆ ವೇಗ ಸಿಕ್ಕಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಮುಗಿದಿಲ್ಲ. ಹೀಗಾಗಿ ನಾವು ಎಚ್ಚರಿಕೆ ವಹಿಸುವುದರಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ. ಯುರೋಪ್​ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಗ್ಲೆಂಡ್ ಹಾಗೂ ರಷ್ಯಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ ಎಂದು ವಿವರಿಸಿದರು.

(India is Still Facing Covid 2nd Wave Threat Says Central Corona Task Force Leader VK Paul)

ಇದನ್ನೂ ಓದಿ: ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ

ಇದನ್ನೂ ಓದಿ: ಮನುಷ್ಯರಿಂದ ನಾಯಿ, ಬೆಕ್ಕುಗಳಿಗೆ ಕೊರೊನಾ ಹರಡುವ ಸಾಧ್ಯತೆ! ಆದರೆ, ಅವುಗಳಿಂದ ಬೇರೆಯವರಿಗೆ ದಾಟುವುದು ಅನುಮಾನ: ಡಚ್ ಅಧ್ಯಯನ

Published On - 7:35 pm, Fri, 2 July 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ