AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್‌ ವಿಜ್ಞಾನಿಗಳು ಬಂದೇಬಿಟ್ರು.. 30 ಸೆಕೆಂಡ್​ನಲ್ಲಿ ಕೊರೊನಾ ಟೆಸ್ಟ್‌ ವರದಿ ಕೊಡ್ತಾರಂತೆ!

ನವದೆಹಲಿ: ಭಾರತ ಮತ್ತು ಇಸ್ರೇಲ್‌ ನಡುವಿನ ಬಾಂಧವ್ಯದ ಬೆಸುಗೆ ಈಗ ಮತ್ತಷ್ಟು ಗಟ್ಟಿಯಾಗಿದೆ. ಇಡಿ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಉಭಯ ದೇಶಗಳು ಕೈಜೋಡಿಸಿದ್ದು, ಇದರನ್ವಯ ಎರಡೂ ದೇಶಗಳು ಸೇರಿ ಕೇವಲ 30 ಸೆಕೆಂಡ್ಸ್‌ನಲ್ಲಿ ಕೊರೊನಾ ಟೆಸ್ಟ್‌ ಮಾಡುವ ಟೆಸ್ಟಿಂಗ್‌ ಕಿಟ್‌ ಅಭಿವೃದ್ಧಿ ಮಾಡಲಿವೆ. ಈ ಸಂಬಂಧ ಭಾರತ ಮತ್ತು ಇಸ್ರೇಲ್‌ ವಿಜ್ಞಾನಿಗಳು ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್‌ನ ಟೆಲ್‌ ಅವಿವ್‌ನಿಂದ ಇಸ್ರೇಲಿ ವಿಜ್ಞಾನಿಗಳ ತಂಡ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬರಲಿದೆ. ಇದ್ರಲ್ಲಿ ಇಸ್ರೇಲ್‌ ವಿಜ್ಞಾನಿಗಳು […]

ಇಸ್ರೇಲ್‌ ವಿಜ್ಞಾನಿಗಳು ಬಂದೇಬಿಟ್ರು.. 30 ಸೆಕೆಂಡ್​ನಲ್ಲಿ ಕೊರೊನಾ ಟೆಸ್ಟ್‌ ವರದಿ ಕೊಡ್ತಾರಂತೆ!
Guru
| Edited By: |

Updated on:Jul 25, 2020 | 5:39 PM

Share

ನವದೆಹಲಿ: ಭಾರತ ಮತ್ತು ಇಸ್ರೇಲ್‌ ನಡುವಿನ ಬಾಂಧವ್ಯದ ಬೆಸುಗೆ ಈಗ ಮತ್ತಷ್ಟು ಗಟ್ಟಿಯಾಗಿದೆ. ಇಡಿ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಉಭಯ ದೇಶಗಳು ಕೈಜೋಡಿಸಿದ್ದು, ಇದರನ್ವಯ ಎರಡೂ ದೇಶಗಳು ಸೇರಿ ಕೇವಲ 30 ಸೆಕೆಂಡ್ಸ್‌ನಲ್ಲಿ ಕೊರೊನಾ ಟೆಸ್ಟ್‌ ಮಾಡುವ ಟೆಸ್ಟಿಂಗ್‌ ಕಿಟ್‌ ಅಭಿವೃದ್ಧಿ ಮಾಡಲಿವೆ.

ಈ ಸಂಬಂಧ ಭಾರತ ಮತ್ತು ಇಸ್ರೇಲ್‌ ವಿಜ್ಞಾನಿಗಳು ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್‌ನ ಟೆಲ್‌ ಅವಿವ್‌ನಿಂದ ಇಸ್ರೇಲಿ ವಿಜ್ಞಾನಿಗಳ ತಂಡ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬರಲಿದೆ. ಇದ್ರಲ್ಲಿ ಇಸ್ರೇಲ್‌ ವಿಜ್ಞಾನಿಗಳು ತಮ್ಮ ಜೊತೆಗೆ ಇಸ್ರೇಲಿ ತಂತ್ರಜ್ಞಾನವನ್ನ ತರಲಿದ್ದಾರೆ. ಇಷ್ಟೇ ಅಲ್ಲ ಅತ್ಯುತ್ತಮ ತಂತ್ರಜ್ಞಾನದ ವೆಂಟಿಲೇಟರ್‌ಗಳು ಕೂಡಾ ಭಾರತಕ್ಕೆ ಬರಲಿವೆ. ಇದಕ್ಕಾಗಿ ಇಸ್ರೇಲಿನ ವಿದೇಶಾಂಗ ಸಚಿವಾಲಯ ವಿಶೇಷ ಅನುಮತಿ ನೀಡಿದೆ.

ಈ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮೂರು ಬಾರಿ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ಮತ್ತು ಇಸ್ರೇಲ್‌ ನಡವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದ್ದು, ಉಭಯ ದೇಶಗಳ ಸಹಯೋಗದಲ್ಲಿ ಕೊರೊನಾ ವಿರುದ್ಧ ಜಂಟಿಯಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಿವೆ ಎಂದು ಭಾರತದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ತಿಳಿಸಿದೆ.

Published On - 6:46 pm, Thu, 23 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ