AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ಆತಂಕ: ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಮೋದಿ ಸರ್ಕಾರ

ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಜೋರಾಗಿದೆ. ಕೊರೊನಾ ಉಪತಳಿಯು ಬಹು ವೇಗವಾಗಿ ದೇಶಾದ್ಯಂತ ಹರಡುತ್ತಿರುವುದು ವಿಶ್ವಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇತ್ತ ಭಾರತದಲ್ಲೂ ಸಹ ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದೆ.

ಕೊರೋನಾ ಆತಂಕ: ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಮೋದಿ ಸರ್ಕಾರ
ಪ್ರಾತಿನಿಧಿಕ ಚಿತ್ರImage Credit source: PTI
TV9 Web
| Edited By: |

Updated on: Dec 22, 2022 | 11:11 PM

Share

ನವದೆಹಲಿ: ಪ್ರಪಂಚದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು (Covid-19) ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದು, ಇದೀಗ ಕೇಂದ್ರ ಸರ್ಕಾರ ವಿದೇಶದಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ (guidelines) ಪ್ರಕಟಿಸಿದೆ.

ಇದನ್ನೂ ಓದಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ, ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ: ಕೋವಿಡ್ ಪರಿಸ್ಥಿತಿ ಪರಿಶೀಲನೆ ಸಭೆಯಲ್ಲಿ ಮೋದಿ

ಮೋದಿ ಸಭೆ ನಂತರ ಕೇಂದ್ರ ಆರೋಗ್ಯ ಇಲಾಖೆ ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌ ರಿಲೀಸ್‌ ಮಾಡಿದ್ದು, ಡಿಸೆಂಬರ್‌ 24ರಿಂದ ಅನ್ವಯವಾಗಲಿದೆ.

ವಿದೇಶದಿಂದ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌

* ವಿದೇಶದಿಂದ ಬರುವವರು ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು

* ಏರ್‌ಪೋರ್ಟ್‌ಗಳಲ್ಲಿ ಮಾಸ್ಕ್‌ ಹಾಗೂ ದೈಹಿಕ ಅಂತರ ಪಾಲಿಸಬೇಕು

* ಏರ್‌ಪೋರ್ಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ

*ಕೊವಿಡ್ ಗುಣಲಕ್ಷಣ ಕಂಡುಬಂದ್ರೆ ಐಸೋಲೇಷನ್ ಕಡ್ಡಾಯ

* ಇನ್ಮುಂದೆ ಏರ್‌ಪೋರ್ಟ್‌ಗಳಲ್ಲಿ ಱಂಡಮ್‌ ಟೆಸ್ಟ್‌ ಕಡ್ಡಾಯ

* ಪಾಸಿಟಿವ್ ಬಂದ್ರೆ ಜಿನೋಮಿಕ್ ಸೀಕ್ವೆನ್ಸ್‌ ಕಡ್ಡಾಯ

* 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಟೆಸ್ಟ್‌ ಅಗತ್ಯವಿಲ್ಲ

* 12 ವರ್ಷದೊಳಗಿನವರಿಗೆ ಸೋಂಕಾದ್ರೆ ಮನೆಯಲ್ಲೇ ಐಸೋಲೇಷನ್‌

ಸಭೆಯಲ್ಲಿ ಮೋದಿ ಸಲಹೆ

ಸೋಂಕು ನಿರ್ವಹಣೆಗೆ ಕಟ್ಟುನಿಟ್ಟಾದ ನಿಗಾ ವಹಿಸುವಂತೆ ಸಭೆಯಲ್ಲಿ ಮೋದಿ ಸಲಹೆ ನೀಡಿದ್ದಾರೆ. ಜನದಟ್ಟಣೆಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಗೆ ಜನರನ್ನು ಒತ್ತಾಯಿಸಬೇಕು, ಕೋವಿಡ್-19 ಪರೀಕ್ಷೆ ಮತ್ತು ಜಿನೋಮಿಕ್ ಸಿಕ್ವೆನ್ಸಿಂಗ್ ಹೆಚ್ಚಿಸಬೇಕು, ವೃದ್ಧರು ಹಾಗೂ ದುರ್ಬಲ ಜನರು ಮುನ್ನೆಚ್ಚರಿಕೆ ಡೋಸ್ ಪಡೆಯುವಂತೆ ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೊನಾ ಭೀತಿ: ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಆಕ್ಸಿಜನ್ ಸಿಲಿಂಡರ್‌ಗಳು, ಪಿಎಸ್‌ಎ ಪ್ಲಾಂಟ್‌ಗಳು, ವೆಂಟಿಲೇಟರ್‌ಗಳು ಮತ್ತು ಮಾನವ ಸಂಪನ್ಮೂಲ ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳ ಕಾರ್ಯಾಚರಣೆಯ ಸಿದ್ಧತೆ ಖಚಿತಪಡಿಸಿಕೊಳ್ಳಲು ಕೋವಿಡ್ ನಿರ್ದಿಷ್ಟ ಸೌಲಭ್ಯಗಳನ್ನು ಲೆಕ್ಕಪರಿಶೋಧಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!