AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 2 ದಿನಗಳ ಕಾಲ ಭಾರತ-ಜಪಾನ್ 14ನೇ ವಾರ್ಷಿಕ ಶೃಂಗಸಭೆ; ಜಪಾನ್ ಪ್ರಧಾನಿಯಿಂದ 5 ಟ್ರಿಲಿಯನ್ ಯೆನ್​​ ಹೂಡಿಕೆ ನಿರೀಕ್ಷೆ

2020 ರಲ್ಲಿ ಎರಡೂ ದೇಶಗಳು ರಕ್ಷಣಾ ಪಡೆಗಳ ನಡುವೆ ಆಹಾರ, ಇಂಧನ ಮತ್ತು ಸರಬರಾಜುಗಳ ಪರಸ್ಪರ ವಿನಿಮಯವನ್ನು ಅನುಮತಿಸುವ ಒಪ್ಪಂದಕ್ಕೆ ಸಹಿ ಹಾಕಿದವು. ಈ ಭೇಟಿಯಲ್ಲಿ ಜಪಾನ್ ಮತ್ತು ಭಾರತವು ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡುವ ನಿರೀಕ್ಷೆಯಿದೆ.

ಇಂದಿನಿಂದ 2 ದಿನಗಳ ಕಾಲ ಭಾರತ-ಜಪಾನ್ 14ನೇ ವಾರ್ಷಿಕ ಶೃಂಗಸಭೆ; ಜಪಾನ್ ಪ್ರಧಾನಿಯಿಂದ 5 ಟ್ರಿಲಿಯನ್ ಯೆನ್​​ ಹೂಡಿಕೆ ನಿರೀಕ್ಷೆ
ಫುಮಿಯೊ ಕಿಶಿದಾ - ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 19, 2022 | 2:54 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನ ಮಂತ್ರಿ  ಫುಮಿಯೊ ಕಿಶಿದಾ (Fumio Kishida) ಅವರು 14ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂದಿನಿಂದ (ಶನಿವಾರ) 2 ದಿನಗಳ ಅಧಿಕೃತ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಉಭಯ ನಾಯಕರು ನಡೆಸುತ್ತಿರುವ ಭಾರತದಲ್ಲಿನ ಚೊಚ್ಚಲ ಶೃಂಗಸಭೆ ಇದಾಗಿದೆ. ಈ ಮೊದಲಿನ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ 2018 ಅಕ್ಟೋಬರ್ ನಲ್ಲಿ ಟೋಕಿಯೊದಲ್ಲಿ ಜರುಗಿತ್ತು. ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಐದು ವರ್ಷಗಳ ಅವಧಿಯಲ್ಲಿ ಭಾರತಕ್ಕೆ $42 ಬಿಲಿಯನ್ (5 ಟ್ರಿಲಿಯನ್ ಯೆನ್) ಹೂಡಿಕೆಯನ್ನು ನೀಡಲಿದ್ದಾರೆ ಎಂದು ಜಪಾನಿನ ಪತ್ರಿಕೆ ನಿಕ್ಕಿ ಏಷ್ಯಾ ವರದಿ ಮಾಡಿದೆ.  ಕೊನೆಯದಾಗಿ ಭಾರತ-ಜಪಾನ್ ಶೃಂಗಸಭೆ 2018 ರಲ್ಲಿ ಟೋಕಿಯೊದಲ್ಲಿ ನಡೆಯಿತು. ಆಗಿನ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತಕ್ಕೆ ಮತ್ತು ಮೋದಿಯವರ ತವರು ರಾಜ್ಯವಾದ ಗುಜರಾತ್‌ಗೆ ಒಂದು ವರ್ಷದ ಮೊದಲು ಭೇಟಿ ನೀಡಿದ್ದರು. ಅಬೆ 2014 ರಲ್ಲಿ ಐದು ವರ್ಷಗಳಲ್ಲಿ 3.5 ಟ್ರಿಲಿಯನ್ ಯೆನ್ ಹೂಡಿಕೆಯನ್ನು ಘೋಷಿಸಿದರು. ಜಪಾನ್ ತನ್ನ ಬುಲೆಟ್ ಟ್ರೈನ್ ತಂತ್ರಜ್ಞಾನದ ಮೂಲಕ ಭಾರತದ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹೈಸ್ಪೀಡ್ ರೈಲ್ವೇಗೆ ಬೆಂಬಲ ನೀಡುತ್ತಿದೆ.

2020 ರಲ್ಲಿ ಎರಡೂ ದೇಶಗಳು ರಕ್ಷಣಾ ಪಡೆಗಳ ನಡುವೆ ಆಹಾರ, ಇಂಧನ ಮತ್ತು ಸರಬರಾಜುಗಳ ಪರಸ್ಪರ ವಿನಿಮಯವನ್ನು ಅನುಮತಿಸುವ ಒಪ್ಪಂದಕ್ಕೆ ಸಹಿ ಹಾಕಿದವು. ಈ ಭೇಟಿಯಲ್ಲಿ ಜಪಾನ್ ಮತ್ತು ಭಾರತವು ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡುವ ನಿರೀಕ್ಷೆಯಿದೆ. ಅದರ ಭಾಗವಾಗಿ ಮುಂಬೈ-ಅಹಮದಾಬಾದ್ ಕಾರಿಡಾರ್‌ನ ಆಚೆಗೆ ಭಾರತದಲ್ಲಿ ಬುಲೆಟ್ ರೈಲು ಯೋಜನೆಯನ್ನು ವಿಸ್ತರಿಸಲು ಆರ್ಥಿಕ ಸಹಕಾರ ಟಿಪ್ಪಣಿಗಳನ್ನು ವಿನಿಮಯ ಮಾಡಿಕೊಳ್ಳಬಹುದು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಉಭಯ ನಾಯಕರು ಚೀನಾ ಮತ್ತು ಇಂಡೋ-ಪೆಸಿಫಿಕ್ ಬಗ್ಗೆಯೂ ಚರ್ಚಿಸಲಿದ್ದಾರೆ. ಭಾರತ ಮತ್ತು ಜಪಾನ್ ಕ್ವಾಡ್‌ನ ಭಾಗವಾಗಿದೆ, ಇದು ಯುಎಸ್ ಮತ್ತು ಆಸ್ಟ್ರೇಲಿಯಾವನ್ನು ಒಳಗೊಂಡಿರುವ ಭದ್ರತಾ ಚೌಕಟ್ಟಾಗಿದೆ. “ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ನಡೆಸುತ್ತಿರುವ ಈ ಹೊತ್ತಲ್ಲಿ ನಾನು ಅಂತರರಾಷ್ಟ್ರೀಯ ಏಕತೆಯ ಮಹತ್ವವನ್ನು ಒತ್ತಿಹೇಳಲು ಬಯಸುತ್ತೇನೆ ಎಂದು ಭೇಟಿಯ ಮೊದಲು ಕಿಶಿದಾ ಹೇಳಿದರು.

ಫೆಬ್ರವರಿ 24 ರಂದು ಉಕ್ರೇನ್ ಮೇಲೆ  ರಷ್ಯಾ  ಆಕ್ರಮಣ ಪ್ರಾರಂಭವಾದಾಗಿನಿಂದ ಜಪಾನ್ ಡಜನ್ಗಟ್ಟಲೆ ರಷ್ಯಾದ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಇದು ಉಕ್ರೇನಿಯನ್ ನಿರಾಶ್ರಿತರನ್ನು ಸಹ ಸ್ವೀಕರಿಸುತ್ತಿದೆ.

ಇದನ್ನೂ ಓದಿ:ಹಣದುಬ್ಬರ ಎಲ್ಲಾ ಭಾರತೀಯರ ಮೇಲೆ ಹೇರಿದ ತೆರಿಗೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ